AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BYJU’S Turmoil: ಕೇರಳದಲ್ಲಿ ಕಚೇರಿ ಮುಚ್ಚಿದ ಬೈಜೂಸ್, ಉದ್ಯೋಗಿಗಳ ವಜಾ; ವರದಿ

ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಎಜುಟೆಕ್ ಕಂಪನಿ ಬೈಜೂಸ್ ತನ್ನ ಅಂಗಸಂಸ್ಥೆ ಆಕಾಶ್ ಎಜುಕೇಶನಲ್ ಸರ್ವೀಸಸ್​ನಿಂದಲೇ 300 ಕೋಟಿ ರೂ. ಸಾಲ ಪಡೆದಿದೆ. ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಎಜುಟೆಕ್ ಕಂಪನಿ ಬೈಜೂಸ್ ತನ್ನ ಅಂಗಸಂಸ್ಥೆ ಆಕಾಶ್ ಎಜುಕೇಶನಲ್ ಸರ್ವೀಸಸ್​ನಿಂದಲೇ 300 ಕೋಟಿ ರೂ. ಸಾಲ ಪಡೆದಿದೆ.

BYJU’S Turmoil: ಕೇರಳದಲ್ಲಿ ಕಚೇರಿ ಮುಚ್ಚಿದ ಬೈಜೂಸ್, ಉದ್ಯೋಗಿಗಳ ವಜಾ; ವರದಿ
ಬೈಜೂಸ್Image Credit source: Shutterstock
TV9 Web
| Edited By: |

Updated on:Jul 03, 2026 | 12:37 PM

Share

ನವದೆಹಲಿ: ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಎಜುಟೆಕ್ ಕಂಪನಿ ಬೈಜೂಸ್ (BYJU’s) ತನ್ನ ಅಂಗಸಂಸ್ಥೆ ಆಕಾಶ್ ಎಜುಕೇಶನಲ್ ಸರ್ವೀಸಸ್​ನಿಂದಲೇ (Aakash Educational Services) 300 ಕೋಟಿ ರೂ. ಸಾಲ ಪಡೆದಿದೆ ಎಂದು ವರದಿಯಾಗಿದೆ. ಪ್ರಧಾನ ವ್ಯಾಪಾರ ಚಟುವಟಿಕೆಗಳಿಗೆ ಅಗತ್ಯವಿರುವ ಹಣವನ್ನು ಸಾಲದ ರೂಪದಲ್ಲಿ ಪಡೆಯಲಾಗಿದೆ ಎಂದು ಕಂಪನಿಯ ನಿಯಂತ್ರಕರು ತಿಳಿಸಿದ್ದಾರೆ ಎನ್ನಲಾಗಿದೆ. ಈ ಮಧ್ಯೆ ಕಂಪನಿಯು ಕೇರಳದಲ್ಲಿ ಕಚೇರಿಗಳನ್ನು ಮುಚ್ಚಿದೆ, ಉದ್ಯೋಗಿಗಳಿಂದ ಬಲವಂತವಾಗಿ ರಾಜೀನಾಮೆ ಪಡೆಯುತ್ತಿದೆ ಎಂಬ ದೂರುಗಳೂ ಕೇಳಿಬಂದಿವೆ.

ಬೈಜೂಸ್ ತಿರುವನಂತಪುರದ ಟೆಕ್ನೊಪಾರ್ಕ್​ನಲ್ಲಿರುವ ಕಚೇರಿಯನ್ನು ಮುಚ್ಚಿದೆ. ರಾಜೀನಾಮೆ ನೀಡುವಂತೆ ಉದ್ಯೋಗಿಗಳನ್ನು ಒತ್ತಾಯಿಸುತ್ತಿದೆ ಎಂದು ಕೇರಳದ ಸಚಿವ ವಿ. ಶಿವನ್​ಕುಟ್ಟಿ ಆರೋಪಿಸಿದ್ದಾರೆ. ಬೈಜೂಸ್ ಉದ್ಯೋಗಿಗಳು ಐಟಿ ಉದ್ಯೋಗಿಗಳ ಕಲ್ಯಾಣ ಸಂಘದ ಪದಾಧಿಕಾರಿಗಳ ಜತೆ ಬಂದು ತಮ್ಮನ್ನು ಭೇಟಿಯಾಗಿ ಕಷ್ಟಗಳನ್ನು ಹೇಳಿಕೊಂಡಿದ್ದಾಗಿಯೂ ಸಚಿವರು ತಿಳಿಸಿದ್ದಾರೆ. ಈ ಕುರಿತು ಕಾರ್ಮಿಕ ಇಲಾಖೆ ಗಂಭೀರವಾಗಿ ತಪಾಸಣೆ ನಡೆಸಲಿದೆ ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ನೀವು ಬೆಳವಣಿಗೆಯನ್ನು ಕಾಣುತ್ತಿಲ್ಲ ಎಂದಾದರೆ ಉಳಿದುಕೊಳ್ಳುವ ಮನಸ್ಥಿತಿ ರೂಢಿಸಿಕೊಳ್ಳಿ: ಬೈಜೂಸ್​​ ಬಗ್ಗೆ ಸುನೀಲ್​​​ ಶೆಟ್ಟಿ

ಕೇರಳದಲ್ಲಿ ಕೊಚ್ಚಿ ಹೊರತುಪಡಿಸಿ ಮತ್ತೆಲ್ಲ ಕಡೆಗಳಲ್ಲಿಯೂ ಬೈಜೂಸ್ ಕಚೇರಿಗಳನ್ನು ಮುಚ್ಚಲಾಗಿದೆ. ದೊಡ್ಡ ಮಟ್ಟದಲ್ಲಿ ಉದ್ಯೋಗಿಗಳ ವಜಾ ನಡೆಯುತ್ತಿದೆ ಎಂದು ಕಂಪನಿಯ ಆಂತರಿಕ ಮೂಲಗಳು ತಿಳಿಸಿವೆ ಎಂದು ಮಾಧ್ಯಮ ವರದಿಗಳು ಉಲ್ಲೇಖಿಸಿವೆ.

ಬೈಜೂಸ್ ಬಿಕ್ಕಟ್ಟು; ಇತ್ತೀಚಿನ ಬೆಳವಣಿಗೆಗಳು

ಸೇಲ್ಸ್ ತಂಡದ ಟಾರ್ಗೆಟ್ ಅವಧಿಯನ್ನು 12 ವಾರಗಳಿಂದ 8 ವಾರಗಳಿಗೆ ಇಳಿಕೆ ಮಾಡಲಾಗಿದೆ. ವಾರದ ಕೆಲಸದ ದಿನಗಳನ್ನು 5ರಿಂದ 6ಕ್ಕೆ ಹೆಚ್ಚಿಸಲಾಗಿದೆ. ಉದ್ಯೋಗಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಬಿಂಬಿಸಿ ಉದ್ಯೋಗದಿಂದ ವಜಾಗೊಳಿಸಲು ಕಂಪನಿ ಈ ತಂತ್ರ ಅನುಸರಿಸುತ್ತಿದೆ ಎಂದು ಮೂಲಗಳ ಹೇಳಿಕೆ ಉಲ್ಲೇಖಿಸಿ ‘ಇಂಡಿಯಾ ಡಾಟ್ ಕಾಂ’ ವರದಿ ಮಾಡಿದೆ.

ಉದ್ಯೋಗಿಗಳು ಅಕ್ಟೋಬರ್​ ತಿಂಗಳ ವೇತನದ ಒಂದು ಬಾರಿಯ ಸೆಟಲ್​ಮೆಂಟ್​ಗೆ ಬೇಡಿಕೆ ಇಟ್ಟಿದ್ದಾರೆ. ನವೆಂಬರ್​ನಿಂದ 2023ರ ಜನವರಿ ವರೆಗಿನ ವೇತನದ ಒಂದು ಬಾರಿಯ ಪಾವತಿಗೂ ಬೇಡಿಕೆ ಇಟ್ಟಿದ್ದಾರೆ. ಜತೆಗೆ ಗಳಿಕೆ ರಜೆಯ ನಗದೀಕರಣ ಹಾಗೂ ವೇರಿಯೇಬಲ್ ಪೇ ಪಾವತಿಗೂ ಪಟ್ಟು ಹಿಡಿದಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ನಷ್ಟದ ಸುಳಿಯಲ್ಲಿ ಬೈಜೂಸ್

21ನೇ ಹಣಕಾಸು ವರ್ಷದಲ್ಲಿ ಬೈಜೂಸ್ 4,588 ಕೋಟಿ ನಷ್ಟ ದಾಖಲಿಸಿತ್ತು. 18 ತಿಂಗಳು ವಿಳಂಬವಾಗಿ ಈ ವರದಿ ಪ್ರಕಟಿಸಿತ್ತು. ಬಹು ನಿರೀಕ್ಷಿತ ಐಪಿಒ (ಇನಿಷಿಯಲ್ ಪಬ್ಲಿಕ್ ಆಫರಿಂಗ್) ಅನ್ನೂ ಬೈಜೂಸ್ ವಿಳಂಬ ಮಾಡುತ್ತಿದೆ. ಜನರಿಂದ ಉತ್ತಮ ಸ್ಪಂದನೆ ದೊರೆಯದಿರಬಹುದೆಂಬ ಆತಂಕದಲ್ಲಿ ಹೀಗೆ ಮಾಡಲಾಗುತ್ತಿದೆ ಎಂದು ವರದಿ ಉಲ್ಲೇಖಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:20 pm, Fri, 28 October 22

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ