AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

81 ಕೋಟಿ ಬಡವರಿಗೆ ಉಚಿತ ಪಡಿತರ ವಿತರಣೆ; 5 ವರ್ಷ ಯೋಜನೆ ವಿಸ್ತರಣೆಗೆ ಕೇಂದ್ರ ಸಂಪುಟ ಅನುಮೋದನೆ

Cabinet approves PM Garib Kalyan Anna Yojana: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು 5 ವರ್ಷ ಮುಂದುವರಿಸುವ ಸರ್ಕಾರದ ನಿರ್ಧಾರಕ್ಕೆ ಸಂಪುಟದ ಅನುಮೋದನೆ ಸಿಕ್ಕಿದೆ. 81 ಕೋಟಿಗೂ ಹೆಚ್ಚು ಬಡವರಿಗೆ ಪ್ರತೀ ತಿಂಗಳು 5 ಕಿಲೋ ಆಹಾರಧಾನ್ಯ ವಿತರಿಸುವ ಯೋಜನೆ ಇದು. 2028ರ ಡಿಸೆಂಬರ್ 31ರವರೆಗೂ ವಿಸ್ತರಣೆ ಆಗಿರುವ ಗರೀಬ್ ಕಲ್ಯಾಣ್ ಅನ್ನ ಯೋಜನೆಯಿಂದ ಸರ್ಕಾರಕ್ಕೆ ಆಗುವ ಅಂದಾಜು ವೆಚ್ಚ 11 ಕೋಟಿಗೂ ಹೆಚ್ಚು ಎನ್ನಲಾಗಿದೆ.

81 ಕೋಟಿ ಬಡವರಿಗೆ ಉಚಿತ ಪಡಿತರ ವಿತರಣೆ; 5 ವರ್ಷ ಯೋಜನೆ ವಿಸ್ತರಣೆಗೆ ಕೇಂದ್ರ ಸಂಪುಟ ಅನುಮೋದನೆ
ಪಡಿತರ ವಿತರಣೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Nov 29, 2023 | 3:48 PM

Share

ನವದೆಹಲಿ, ನವೆಂಬರ್ 29: ದೇಶದೆಲ್ಲೆಡೆ 80 ಕೋಟಿಗೂ ಹೆಚ್ಚು ಬಡ ಜನರಿಗೆ ಪಡಿತರ ವಿತರಣೆ ಮಾಡುವ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು (PM Garib Kalyan Anna Yojana) ಮತ್ತಷ್ಟು 5 ವರ್ಷಕ್ಕೆ ಮುಂದುವರಿಸುವ ನಿರ್ಧಾರಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಕೇಂದ್ರ ಮಾಹಿತಿ ಮತ್ತು ಪ್ರಸರಣ ಖಾತೆ ಸಚಿವ ಅನುರಾಗ್ ಠಾಕೂರ್ ನವೆಂಬರ್ 29, ಬುಧವಾರದಂದು ಈ ವಿಷಯ ತಿಳಿಸಿದ್ದಾರೆ. ಗರೀಬ್ ಕಲ್ಯಾಣ್ ಅನ್ನ ಯೋಜನೆ 2028ರವರೆಗೂ ಲಭ್ಯ ಇರುತ್ತದೆ. ಸದ್ಯ ಈ ಯೋಜನೆ ಡಿಸೆಂಬರ್ 31ಕ್ಕೆ ಮುಗಿಯುತ್ತದೆ. ಜನವರಿ 1ರಿಂದ ಈ ಸ್ಕೀಮ್ ಹಾಗೇ ಮುಂದುವರಿಯುತ್ತದೆ.

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಒಂದು ಕುಟುಂಬಕ್ಕೆ ಪ್ರತೀ ತಿಂಗಳು 5 ಕಿಲೋನಷ್ಟು ಆಹಾರಧಾನ್ಯಗಳನ್ನು ಉಚಿತವಾಗಿ ಕೊಡಲಾಗುತ್ತದೆ. ಈ ಯೋಜನೆಯಲ್ಲಿ 80 ಕೋಟಿ ಫಲಾನುಭವಿಗಳಿದ್ದಾರೆ. ಈ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸುವುದಾಗಿ ಸರ್ಕಾರ ಈ ಹಿಂದೆಯೇ ಸುಳಿವು ನೀಡಿತ್ತು. ಹೀಗಾಗಿ, ಸಂಪುಟದ ಅನುಮೋದನೆ ನಿರೀಕ್ಷಿತವೇ ಆಗಿದೆ.

ಇದನ್ನೂ ಓದಿ: ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ನಾಳೆ ಮೋದಿ ಸಂವಾದ

ಮುಂದಿನ 5 ವರ್ಷ ಪಿಎಂಜಿಕೆಎವೈ ಸ್ಕೀಮ್​ನಿಂದ ಸರ್ಕಾರಕ್ಕೆ ಆಗುವ ವೆಚ್ಚ 11.8 ಲಕ್ಷ ಕೋಟಿ ರೂ ಎಂದು ಅಂದಾಜಿಸಲಾಗಿದೆ. ಗಮನಿಸಬೇಕಾದ ಸಂಗತಿ ಎಂದರೆ, ಈ ಹಿಂದೆ ಆಹಾರ ಭದ್ರತಾ ಕಾಯ್ದೆ ಅಡಿಯ ಪಡಿತರ ಯೋಜನೆ ಅಸ್ತಿತ್ವದಲ್ಲಿತ್ತು. ಅದರ ಅಡಿಯಲ್ಲಿ ಸಬ್ಸಿಡಿ ದರದಲ್ಲಿ ಪ್ರತೀ ತಿಂಗಳು 5 ಕಿಲೋ ಆಹಾರಧಾನ್ಯ ವಿತರಣೆ ಮಾಡಲಾಗುತ್ತಿತ್ತು.

ಆದರೆ, 2020ರಲ್ಲಿ ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬಡವರಿಗೆಂದು ಹೆಚ್ಚುವರಿಯಾಗಿ 5 ಕಿಲೋ ಆಹಾರಧಾನ್ಯಗಳನ್ನು ಉಚಿತವಾಗಿ ವಿತರಿಸುವ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಆರಂಭಿಸಿತು. 2022ರ ಡಿಸೆಂಬರ್​ನಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿ ಗರೀಬ್ ಅನ್ನ ಯೋಜನೆಯನ್ನು ತಂದಿದ್ದು, ಉಚಿತ ಪಡಿತರ ವಿತರಣೆ ಮಾಡಲಾಗುತ್ತಿದೆ.

ಕೋವಿಡ್ ಸಂದರ್ಭದಲ್ಲಿ ಕೋಟ್ಯಂತರ ಜನರಿಗೆ ಉಚಿತವಾಗಿ ಪಡಿತರ ವಿತರಣೆ ಮಾಡುವ ಕೇಂದ್ರ ಈ ಯೋಜನೆ ವಿಶ್ವಾದ್ಯಂತ ಬಹಳ ದೇಶಗಳಿಗೆ ಮೆಚ್ಚುಗೆ ಆಗಿದೆ.

ಇದನ್ನೂ ಓದಿ: Jeevan Utsav: ಎಲ್​ಐಸಿಯಿಂದ ಇಂದು ಹೊಸ ಜೀವನ್ ಉತ್ಸವ್ ಪಾಲಿಸಿ ಬಿಡುಗಡೆ; ಇದರ ವಿಶೇಷತೆಗಳೇನು?

ಬೇರೆ ಯೋಜನೆಗಳಿಗೂ ಕ್ಯಾಬಿನೆಟ್ ಅನುಮೋದನೆ

  • ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್​ಗಳನ್ನು ಒದಗಿಸುವ ಯೋಜನೆ
  • ಫಾಸ್ಟ್ ಟ್ರ್ಯಾಕ್ ಸ್ಪೆಷಲ್ ಕೋರ್ಟ್​ಗಳ ಯೋಜನೆ ಮುಂದಿನ ಮೂರು ವರ್ಷ ಮುಂದುವರಿಕೆ
  • 16ನೆ ಹಣಕಾಸು ಅಯೋಗದ ನಿಬಂಧನೆಗಳು
  • ಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ್

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:47 pm, Wed, 29 November 23

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್