AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದಿಂದ RDI ಸ್ಕೀಮ್; ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆಗೆ ಉತ್ತೇಜಿಸಲು ಸರ್ಕಾರದಿಂದ ಭರ್ಜರಿ ಯೋಜನೆ

Cabinet approves RDI scheme with Rs 1 lakh crore outlay: ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆಗೆ ಉತ್ತೇಜಿಸಲು ಸರ್ಕಾರವು ಆರ್​​ಡಿಐ ಸ್ಕೀಮ್ ತಂದಿದೆ. ಒಂದು ಲಕ್ಷ ಬಜೆಟ್ ಔಟ್​ಲೇ ಇರುವ ಈ ಯೋಜನೆಗೆ ಕೇಂದ್ರ ಸಂಪುಟ ಜುಲೈ 1ರಂದು ಅನುಮೋದನೆ ನೀಡಿದೆ. ಆರ್ ಅಂಡ್ ಡಿಯಲ್ಲಿ ಖಾಸಗಿ ವಲಯದಿಂದ ಹೂಡಿಕೆ ಹೆಚ್ಚಾಗಲು ಈ ಸ್ಕೀಮ್ ಪ್ರೋತ್ಸಾಹಿಸುವ ಗುರಿ ಹೊಂದಿದೆ.

ಕೇಂದ್ರದಿಂದ RDI ಸ್ಕೀಮ್; ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆಗೆ ಉತ್ತೇಜಿಸಲು ಸರ್ಕಾರದಿಂದ ಭರ್ಜರಿ ಯೋಜನೆ
ಆರ್ ಅಂಡ್ ಡಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jul 01, 2025 | 6:13 PM

Share

ನವದೆಹಲಿ, ಜುಲೈ 1: ಆರ್ ಅಂಡ್ ಡಿ ಚಟುವಟಿಕೆಯಲ್ಲಿ ಹಿಂದುಳಿದಿರುವ ದೇಶದಲ್ಲಿ ಅಂಥದ್ದೊಂದು ಪೂರಕ ವಾತಾವರಣ ನಿರ್ಮಿಸುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ. ಈ ನಿಟ್ಟಿನಲ್ಲಿ ಆರ್​ಡಿಐ ಸ್ಕೀಮ್ (RDI scheme) ಅನ್ನು ಸರ್ಕಾರ ರೂಪಿಸಿದೆ. ಒಂದು ಲಕ್ಷ ಕೋಟಿ ರೂ ಅನುದಾನದೊಂದಿಗೆ ಆರ್​​​ಡಿಐ ಸ್ಕೀಮ್ ತರಲು ಕೇಂದ್ರ ಸಂಪುಟ ಇಂದು ಮಂಗಳವಾರ ಅನುಮೋದನೆ ನೀಡಿದೆ. ಸೋಲಾರ್ ಇತ್ಯಾದಿ ಉದಯೋನ್ಮುಖ ಕ್ಷೇತ್ರಗಳಲ್ಲಿ (sunrise sectors) ತಂತ್ರಜ್ಞಾನ ಅಭಿವೃದ್ಧಿಗೆ ಉತ್ತೇಜಿಸಲು ಈ ಸ್ಕೀಮ್ ನೆರವಾಗುವ ಉದ್ದೇಶ ಹೊಂದಿದೆ.

ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆಗೆ ಪ್ರೋತ್ಸಾಹ ನೀಡಲು ಆರ್​​ಡಿಐ ಸ್ಕೀಮ್ ತರಲಾಗಿದೆ. ಖಾಸಗಿ ವಲಯದಲ್ಲಿ ಆರ್​​ಡಿಐಗೆ ಹೂಡಿಕೆ ಹೆಚ್ಚಿಸುವ ಗುರಿ ಇದೆ. ಬಡ್ಡಿರಹಿತವಾದ ಅಥವಾ ಅತ್ಯಲ್ಪ ಬಡ್ಡಿದರದಲ್ಲಿ ದೀರ್ಘಾವಧಿ ಸಾಲದ ವ್ಯವಸ್ಥೆಯನ್ನು ಮಾಡಲಾಗುತ್ತದೆ.

ಇದನ್ನೂ ಓದಿ: ಇಎಲ್​ಐ ಸ್ಕೀಮ್​​ಗೆ ಲಕ್ಷ ಕೋಟಿ ರೂ ಅನುದಾನ; ಕೇಂದ್ರ ಸಂಪುಟ ಅನುಮೋದನೆ; ಏನಿದು ಯೋಜನೆ?

ಅನುಸಂಧಾನ್ ನ್ಯಾಷನಲ್ ರಿಸರ್ಚ್ ಫೌಂಡೇಶನ್ ಅಡಿಯಲ್ಲಿ ಆರ್​ಡಿಐ ಸ್ಕೀಮ್​​ಗಾಗಿ ಆಡಳಿತ ಮಂಡಳಿ ರಚಿಸಲಾಗುತ್ತದೆ. ಒಂದು ವಿಶೇಷವಾದ ಸ್ಪೆಷಲ್ ಪರ್ಪೋಸ್ ಫಂಡ್ ಅನ್ನು ಸ್ಥಾಪಿಸಲಾಗುತ್ತದೆ. ಈ ಎಸ್​​ಪಿಎಫ್ ಮೂಲಕ ಆರ್​​ಡಿಐ ಸ್ಕೀಮ್ ಅನ್ನು ಅನುಷ್ಠಾನಕ್ಕೆ ತರಲಾಗುತ್ತದೆ. ಈ ಎಸ್​​ಪಿಎಫ್ ಮೊದಲ ಮಟ್ಟದ ಫಂಡ್ ಮ್ಯಾನೇಜರ್ ಆಗಲಿದ್ದು, ಸರ್ಕಾರದಿಂದ ಇದಕ್ಕೆ 50 ವರ್ಷದವರೆಗೆ ಬಡ್ಡಿರಹಿತವಾದ ಸಾಲವನ್ನು ನೀಡಲಾಗುತ್ತದೆ.

ಆರ್​​ಡಿಐ ಸ್ಕೀಮ್​​ನ ಗುರಿ

ಭವಿಷ್ಯದಲ್ಲಿ ಬಹಳ ಅಗತ್ಯ ಇರುವ ಉದಯೋನ್ಮುಖ ಕ್ಷೇತ್ರಗಳು ಅಥವಾ ಸನ್​​ರೈಸರ್ ಸೆಕ್ಟರ್​​ಗಳಲ್ಲಿ ಆರ್ ಅಂಡ್ ಡಿ ಹೂಡಿಕೆಯನ್ನು ಉತ್ತೇಜಿಸುವುದು ಈ ಸ್ಕೀಮ್​​ನ ಪ್ರಮುಖ ಗುರಿಯಾಗಿದೆ.

ಇದನ್ನೂ ಓದಿ: AI in Banking: ಊಹೆಗೂ ನಿಲುಕದ ರೀತಿಯಲ್ಲಿ ಬದಲಾದ ಬ್ಯಾಂಕಿಂಗ್ ಸಿಸ್ಟಂ; ಎಐ ತಂದ ಬದಲಾವಣೆಗಳಿವು

ಬಹಳ ಅಗತ್ಯವಾಗಿರುವ ತಂತ್ರಜ್ಞಾನಗಳನ್ನು ಖರೀದಿಸಲು ಈ ಸ್ಕೀಮ್ ನೆರವು ನೀಡುತ್ತದೆ. ಡೀಪ್ ಟೆಕ್ ಫಂಡ್ ಸ್ಥಾಪಿಸಿ, ತಂತ್ರಜ್ಞಾನ ಅಭಿವೃದ್ಧಿಗೆ ಸಹಕಾರಿಯಾಗುವ ಗುರಿ ಈ ಸ್ಕೀಮ್​​ನದ್ದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:12 pm, Tue, 1 July 25

Follow Us
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ