AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದಿಂದ RDI ಸ್ಕೀಮ್; ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆಗೆ ಉತ್ತೇಜಿಸಲು ಸರ್ಕಾರದಿಂದ ಭರ್ಜರಿ ಯೋಜನೆ

Cabinet approves RDI scheme with Rs 1 lakh crore outlay: ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆಗೆ ಉತ್ತೇಜಿಸಲು ಸರ್ಕಾರವು ಆರ್​​ಡಿಐ ಸ್ಕೀಮ್ ತಂದಿದೆ. ಒಂದು ಲಕ್ಷ ಬಜೆಟ್ ಔಟ್​ಲೇ ಇರುವ ಈ ಯೋಜನೆಗೆ ಕೇಂದ್ರ ಸಂಪುಟ ಜುಲೈ 1ರಂದು ಅನುಮೋದನೆ ನೀಡಿದೆ. ಆರ್ ಅಂಡ್ ಡಿಯಲ್ಲಿ ಖಾಸಗಿ ವಲಯದಿಂದ ಹೂಡಿಕೆ ಹೆಚ್ಚಾಗಲು ಈ ಸ್ಕೀಮ್ ಪ್ರೋತ್ಸಾಹಿಸುವ ಗುರಿ ಹೊಂದಿದೆ.

ಕೇಂದ್ರದಿಂದ RDI ಸ್ಕೀಮ್; ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆಗೆ ಉತ್ತೇಜಿಸಲು ಸರ್ಕಾರದಿಂದ ಭರ್ಜರಿ ಯೋಜನೆ
ಆರ್ ಅಂಡ್ ಡಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jul 01, 2025 | 6:13 PM

Share

ನವದೆಹಲಿ, ಜುಲೈ 1: ಆರ್ ಅಂಡ್ ಡಿ ಚಟುವಟಿಕೆಯಲ್ಲಿ ಹಿಂದುಳಿದಿರುವ ದೇಶದಲ್ಲಿ ಅಂಥದ್ದೊಂದು ಪೂರಕ ವಾತಾವರಣ ನಿರ್ಮಿಸುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ. ಈ ನಿಟ್ಟಿನಲ್ಲಿ ಆರ್​ಡಿಐ ಸ್ಕೀಮ್ (RDI scheme) ಅನ್ನು ಸರ್ಕಾರ ರೂಪಿಸಿದೆ. ಒಂದು ಲಕ್ಷ ಕೋಟಿ ರೂ ಅನುದಾನದೊಂದಿಗೆ ಆರ್​​​ಡಿಐ ಸ್ಕೀಮ್ ತರಲು ಕೇಂದ್ರ ಸಂಪುಟ ಇಂದು ಮಂಗಳವಾರ ಅನುಮೋದನೆ ನೀಡಿದೆ. ಸೋಲಾರ್ ಇತ್ಯಾದಿ ಉದಯೋನ್ಮುಖ ಕ್ಷೇತ್ರಗಳಲ್ಲಿ (sunrise sectors) ತಂತ್ರಜ್ಞಾನ ಅಭಿವೃದ್ಧಿಗೆ ಉತ್ತೇಜಿಸಲು ಈ ಸ್ಕೀಮ್ ನೆರವಾಗುವ ಉದ್ದೇಶ ಹೊಂದಿದೆ.

ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆಗೆ ಪ್ರೋತ್ಸಾಹ ನೀಡಲು ಆರ್​​ಡಿಐ ಸ್ಕೀಮ್ ತರಲಾಗಿದೆ. ಖಾಸಗಿ ವಲಯದಲ್ಲಿ ಆರ್​​ಡಿಐಗೆ ಹೂಡಿಕೆ ಹೆಚ್ಚಿಸುವ ಗುರಿ ಇದೆ. ಬಡ್ಡಿರಹಿತವಾದ ಅಥವಾ ಅತ್ಯಲ್ಪ ಬಡ್ಡಿದರದಲ್ಲಿ ದೀರ್ಘಾವಧಿ ಸಾಲದ ವ್ಯವಸ್ಥೆಯನ್ನು ಮಾಡಲಾಗುತ್ತದೆ.

ಇದನ್ನೂ ಓದಿ: ಇಎಲ್​ಐ ಸ್ಕೀಮ್​​ಗೆ ಲಕ್ಷ ಕೋಟಿ ರೂ ಅನುದಾನ; ಕೇಂದ್ರ ಸಂಪುಟ ಅನುಮೋದನೆ; ಏನಿದು ಯೋಜನೆ?

ಅನುಸಂಧಾನ್ ನ್ಯಾಷನಲ್ ರಿಸರ್ಚ್ ಫೌಂಡೇಶನ್ ಅಡಿಯಲ್ಲಿ ಆರ್​ಡಿಐ ಸ್ಕೀಮ್​​ಗಾಗಿ ಆಡಳಿತ ಮಂಡಳಿ ರಚಿಸಲಾಗುತ್ತದೆ. ಒಂದು ವಿಶೇಷವಾದ ಸ್ಪೆಷಲ್ ಪರ್ಪೋಸ್ ಫಂಡ್ ಅನ್ನು ಸ್ಥಾಪಿಸಲಾಗುತ್ತದೆ. ಈ ಎಸ್​​ಪಿಎಫ್ ಮೂಲಕ ಆರ್​​ಡಿಐ ಸ್ಕೀಮ್ ಅನ್ನು ಅನುಷ್ಠಾನಕ್ಕೆ ತರಲಾಗುತ್ತದೆ. ಈ ಎಸ್​​ಪಿಎಫ್ ಮೊದಲ ಮಟ್ಟದ ಫಂಡ್ ಮ್ಯಾನೇಜರ್ ಆಗಲಿದ್ದು, ಸರ್ಕಾರದಿಂದ ಇದಕ್ಕೆ 50 ವರ್ಷದವರೆಗೆ ಬಡ್ಡಿರಹಿತವಾದ ಸಾಲವನ್ನು ನೀಡಲಾಗುತ್ತದೆ.

ಆರ್​​ಡಿಐ ಸ್ಕೀಮ್​​ನ ಗುರಿ

ಭವಿಷ್ಯದಲ್ಲಿ ಬಹಳ ಅಗತ್ಯ ಇರುವ ಉದಯೋನ್ಮುಖ ಕ್ಷೇತ್ರಗಳು ಅಥವಾ ಸನ್​​ರೈಸರ್ ಸೆಕ್ಟರ್​​ಗಳಲ್ಲಿ ಆರ್ ಅಂಡ್ ಡಿ ಹೂಡಿಕೆಯನ್ನು ಉತ್ತೇಜಿಸುವುದು ಈ ಸ್ಕೀಮ್​​ನ ಪ್ರಮುಖ ಗುರಿಯಾಗಿದೆ.

ಇದನ್ನೂ ಓದಿ: AI in Banking: ಊಹೆಗೂ ನಿಲುಕದ ರೀತಿಯಲ್ಲಿ ಬದಲಾದ ಬ್ಯಾಂಕಿಂಗ್ ಸಿಸ್ಟಂ; ಎಐ ತಂದ ಬದಲಾವಣೆಗಳಿವು

ಬಹಳ ಅಗತ್ಯವಾಗಿರುವ ತಂತ್ರಜ್ಞಾನಗಳನ್ನು ಖರೀದಿಸಲು ಈ ಸ್ಕೀಮ್ ನೆರವು ನೀಡುತ್ತದೆ. ಡೀಪ್ ಟೆಕ್ ಫಂಡ್ ಸ್ಥಾಪಿಸಿ, ತಂತ್ರಜ್ಞಾನ ಅಭಿವೃದ್ಧಿಗೆ ಸಹಕಾರಿಯಾಗುವ ಗುರಿ ಈ ಸ್ಕೀಮ್​​ನದ್ದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:12 pm, Tue, 1 July 25

ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ