AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚುವರಿ ಸೂಪರ್ ಕಂಪ್ಯೂಟರ್​ಗಳ ಸ್ಥಾಪನೆಯಿಂದ ಹಿಡಿದು ಹಲವು ಮಹತ್ವದ ಸುಧಾರಣೆಗಳು; ಡಿಜಿಟಲ್ ಇಂಡಿಯಾ ಯೋಜನೆ ವಿಸ್ತರಣೆಗೆ ಸಂಪುಟ ಒಪ್ಪಿಗೆ

Digital India Extension: ವೃತ್ತಿಕೌಶಲ್ಯ ಅಭಿವೃದ್ಧಿ, ಹೊಸ ಸೂಪರ್ ಕಂಪ್ಯೂಟರುಗಳು, ನಾಲೆಡ್ಜ್ ನೆಟ್ವರ್ಕ್ ಆಧುನಿಕರಣ, ಎಲ್ಲಾ ಅಧಿಕೃತ ಭಾಷೆಗಳಿಗೂ ಎಐ ಶಕ್ತ ಭಾಷಿಣಿ ಟೂಲ್ ಸೇವೆ ಲಭ್ಯ, ಹೀಗೆ ವಿವಿಧ ಯೋಜನೆಗಳನ್ನು ಒಳಗೊಂಡ ಡಿಜಿಟಲ್ ಇಂಡಿಯಾ ವಿಸ್ತರಣೆಗೆ ಕೇಂದ್ರ ಸರ್ಕಾರ 14,903 ಕೋಟಿ ರೂ ವಿನಿಯೋಗಿಸುತ್ತಿದೆ.

ಹೆಚ್ಚುವರಿ ಸೂಪರ್ ಕಂಪ್ಯೂಟರ್​ಗಳ ಸ್ಥಾಪನೆಯಿಂದ ಹಿಡಿದು ಹಲವು ಮಹತ್ವದ ಸುಧಾರಣೆಗಳು; ಡಿಜಿಟಲ್ ಇಂಡಿಯಾ ಯೋಜನೆ ವಿಸ್ತರಣೆಗೆ ಸಂಪುಟ ಒಪ್ಪಿಗೆ
ಡಿಜಿಟಲ್ ಇಂಡಿಯಾ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 16, 2023 | 6:30 PM

Share

ನವದೆಹಲಿ, ಆಗಸ್ಟ್ 16: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಡಿಜಿಟಲ್ ಇಂಡಿಯಾ ಯೋಜನೆಯ ವಿಸ್ತರಣೆಗೆ (Digital India expansion) ಸಂಪುಟದಿಂದ ಹಸಿರುನಿಶಾನೆ ದೊರೆತಿದೆ. ಈ ವಿಸ್ತರಣೆಯಲ್ಲಿ ಕೇಂದ್ರ ಸರ್ಕಾರ ಡಿಜಿಟಲ್ ಇಂಡಿಯಾ ಯೋಜನೆಗೆ 14,903 ಕೋಟಿ ರೂ ವಿನಿಯೋಗಿಸಲಿದೆ. ಡಿಜಿಟಲ್ ಇಂಡಿಯಾದ ಹಿಂದಿನ ಯೋಜನೆಗಳಲ್ಲಿ ಮಾಡಲಾಗಿದ್ದ ಕೆಲಸಗಳಿಗೆ ಪೂರಕವಾಗಿ ಮತ್ತು ಹೆಚ್ಚುವರಿಯಾಗಿ ಹೊಸ ಕಾರ್ಯಗಳು ಇರಲಿವೆ. ಇಂದು ಆಗಸ್ಟ್ 16ರಂದು ಪ್ರಧಾನಿಗಳ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯ ವಿಸ್ತರಣೆಗೆ ಅನುಮೋದನೆ ಕೊಡಲಾಯಿತು ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಡಿಜಿಟಲ್ ಇಂಡಿಯಾ ವಿಸ್ತರಣೆಯಲ್ಲಿ ಏನೇನು ಇರಲಿದೆ?

  • ಫ್ಯೂಚರ್​ಸ್ಕಿಲ್ಸ್ ಪ್ರೈಮ್ ಯೋಜನೆ ಅಡಿ 6.25 ಲಕ್ಷ ಐಟಿ ವೃತ್ತಿಪರರರಿಗೆ ವೃತ್ತಿಕೌಶಲ್ಯದ ಮರುಪೂರಣ ಮಾಡಲಾಗುವುದು
  • ಇನ್ಫಾರ್ಮೇಶನ್ ಸೆಕ್ಯೂರಿಟಿ ಅಂಡ್ ಎಜುಕೇಶನ್ ಅವೇರ್ನೆಸ್ ಫೇಸ್ (ಐಎಸ್​ಇಎ) ಯೋಜನೆ ಅಡಿ 2.65 ಲಕ್ಷ ವ್ಯಕ್ತಿಗಳಿಗೆ ಮಾಹಿತಿ ಭದ್ರತೆ ಬಗ್ಗೆ ತರಬೇತಿ ಕೊಡಲಾಗುವುದು.
  • ಉಮಂಗ್ ಆ್ಯಪ್​ನಲ್ಲಿ ಈಗಾಗಲೇ ಇರುವ 1,700 ಸೇವೆಗಳ ಜೊತೆಗೆ 540 ಹೆಚ್ಚುವರಿ ಸೇವೆಗಳನ್ನು ತರಲಾಗುವುದು.

ಇದನ್ನೂ ಓದಿ: Vishwakarma scheme Loan: ಕರಕುಶಲಕರ್ಮಿಗಳಿಗೆ 1 ಲಕ್ಷ ರೂವರೆಗೆ ಸಾಲ: ಕೇಂದ್ರ ಅನುಮೋದನೆ

  • ನ್ಯಾಷನಲ್ ಸೂಪರ್ ಕಂಪ್ಯೂಟರ್ ಮಿಷನ್ ಯೋಜನೆ ಅಡಿಯಲ್ಲಿ 9 ಸೂಪರ್ ಕಂಪ್ಯೂಟರ್​ಗಳನ್ನು ಸ್ಥಾಪಿಸಲಾಗುವುದು. ಈಗಾಗಲೇ ನಿಯೋಜನೆಯಾಗಿರುವ 18 ಸೂಪರ್ ಕಂಪ್ಯೂಟರುಗಳ ಜೊತೆಗೆ 9 ಸೂಪರ್ ಕಂಪ್ಯೂಟರ್​ಗಳು ಹೆಚ್ಚುವರಿ.
  • ಆರ್ಟಿಫಿಶಿಯಲ್ ಇಂಟೆಲಿಜೆನ್ಸ್​ನಿಂದ ಶಕ್ತವಾದ ಬಹುಭಾಷಾ ತರ್ಜುಮೆ ಸಾಧನವಾದ ಭಾಷಿಣಿಯ ಸೌಲಭ್ಯವನ್ನು 22 ಭಾಷೆಗಳಿಗೆ ವಿಸ್ತರಿಸಲಾಗುತ್ತದೆ. ಸದ್ಯ 10 ಭಾಷೆಗಳಲ್ಲಿ ಭಾಷಿಣಿ ಟೂಲ್ ಸೌಲಭ್ಯ ಇದೆ. ಸಂವಿಧಾನದ ಎಂಟನೇ ಶ್ಕೆಡ್ಯೂಲ್​ನಲ್ಲಿ ನಮೂದಾಗಿರುವ ಎಲ್ಲಾ 22 ಅಧಿಕೃತ ಭಾಷೆಗಳಿಗೂ ಈ ಟೂಲ್ ಇರುತ್ತದೆ. ಇದರಲ್ಲಿ ಕನ್ನಡ, ಹಿಂದಿ, ತಮಿಳು ಇತ್ಯಾದಿ ಪ್ರಮುಖ ಭಾಷೆಗಳ ಜೊತೆಗೆ, ಸಿಂಧಿ, ಸಂತಾಲಿ, ಮೈಥಿಲಿ, ಡೋಗ್ರಿ ಮೊದಲಾದ ಭಾಷೆಗಳೂ ಸೇರಿವೆ.
  • 1,787 ಶೈಕ್ಷಣಿಕ ಸಂಸ್ಥೆಗಳನ್ನು ಕನೆಕ್ಟ್ ಮಾಡುವ ನ್ಯಾಷನಲ್ ನಾಲೆಜ್ ನೆಟ್ವರ್ಕ್ ಅನ್ನು (ಎನ್​ಕೆಎನ್) ಆಧುನೀಕರಣಗೊಳಿಸಲಾಗುತ್ತದೆ.
  • ಡಿಜಿಲಾಕರ್ ಮೂಲಕ ಡಿಜಿಟಲ್ ದಾಖಲೆ ವೆರಿಫಿಕೇಶನ್ ಸೌಲಭ್ಯವನ್ನು ಎಂಎಸ್​ಎಂಇ ಮತ್ತಿತರ ಸಂಸ್ಥೆಗಳಿಗೆ ಲಭ್ಯ ಇರಲಿದೆ.

ಇದನ್ನೂ ಓದಿ: ನಿಮ್ಮ ಪಿಎಫ್ ಖಾತೆಗೆ ಕಂಪನಿಯಿಂದ ಹಣ ಜಮೆ ಆಗಿಲ್ಲವಾ? ಹೀಗೆ ಮಾಡಿ

  • ಎರಡನೇ ಮತ್ತು ಮೂರನೇ ಸ್ತರದ ನಗರಗಳಲ್ಲಿ 1,200 ಸ್ಟಾರ್ಟಪ್​ಗಳಿಗೆ ಬೆಂಬಲ
  • ಆರೋಗ್ಯ, ಕೃಷಿ ಮತ್ತು ಸುಸ್ಥಿರ ನಗರ ಯೋಜನೆಗಳಲ್ಲಿ 3 ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸೆಂಟರ್ಸ್ ಆಫ್ ಎಕ್ಸಲೆನ್ಸ್ ಅನ್ನು ಸ್ಥಾಪಿಸಲಾಗುವುದು.
  • 12 ಕೋಟಿ ಕಾಲೇಜು ವಿದ್ಯಾರ್ಥಿಗಳಿಗೆ ಸೈಬರ್ ಜಾಗೃತಿ ಕೋರ್ಸ್​ಗಳನ್ನು ಆಫರ್ ಮಾಡಲಾಗುವುದು.
  • ಟೂಲ್ ಡೆವಲಪ್ಮೆಂಟ್ ಸೇರಿದಂತೆ ಸೈಬರ್ ಸೆಕ್ಯೂರಿಟಿ ಕ್ಷೇತ್ರದಲ್ಲಿ ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುವುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:26 pm, Wed, 16 August 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ