AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MRP: ಗರಿಷ್ಠ ಮಾರಾಟ ದರಕ್ಕಿಂತ ಹೆಚ್ಚು ಹಣ ತೆಗೆದುಕೊಳ್ಳುತ್ತಿದ್ದಾರಾ? ಮೋಸ ಮಾಡುವ ಅಂಗಡಿಯವರಿಗೆ ಹೀಗೆ ಶಾಕ್ ಕೊಡಿ

MRP: ಯಾವುದೇ ಸರಕನ್ನು ಗರಿಷ್ಠ ಮಾರಾಟ ದರಕ್ಕಿಂತ (ಎಂಆರ್‌ಪಿ) ಹೆಚ್ಚು ಶುಲ್ಕ ವಿಧಿಸಿ, ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ.. ಗಮನಿಸಿ, ಹಾಗೆ ಹೆಚ್ಚಿನ ಹಣ ನೀಡುವುದೂ ಕೂಡ ಅಪರಾಧವೇ.

MRP: ಗರಿಷ್ಠ ಮಾರಾಟ ದರಕ್ಕಿಂತ ಹೆಚ್ಚು ಹಣ ತೆಗೆದುಕೊಳ್ಳುತ್ತಿದ್ದಾರಾ? ಮೋಸ ಮಾಡುವ ಅಂಗಡಿಯವರಿಗೆ ಹೀಗೆ ಶಾಕ್ ಕೊಡಿ
ಗರಿಷ್ಠ ಮಾರಾಟ ದರಕ್ಕಿಂತ ಹೆಚ್ಚು ಹಣ ತೆಗೆದುಕೊಳ್ಳುತ್ತಿದ್ದಾರಾ? ಮೋಸ ಮಾಡುವ ಅಂಗಡಿಯವರಿಗೆ ಹೀಗೆ ಶಾಕ್ ಕೊಡಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Aug 16, 2022 | 9:21 PM

ಯಾವುದೇ ಸರಕನ್ನು ಗರಿಷ್ಠ ಮಾರಾಟ ದರಕ್ಕಿಂತ (ಎಂಆರ್‌ಪಿ -MRP) ಹೆಚ್ಚು ಶುಲ್ಕ ವಿಧಿಸಿ, ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ.. ಗಮನಿಸಿ, ಹಾಗೆ ಹೆಚ್ಚಿನ ಹಣ ನೀಡುವುದೂ ಕೂಡ ಅಪರಾಧವೇ. ಯಾವುದೇ ಚಿಲ್ಲರೆ ವ್ಯಾಪಾರಿ ಯಾವುದೇ ವಸ್ತುವಿಗೆ ಗ್ರಾಹಕರಿಂದ ಗರಿಷ್ಠ ಚಿಲ್ಲರೆ ಬೆಲೆಗಿಂತ ಹೆಚ್ಚಿನದನ್ನು ಬೇಡಿಕೆಯಿಡುವುದು ಅಪರಾಧವಾಗಿದೆ.

ಕಾನೂನು ಮಾಪನಶಾಸ್ತ್ರ ಕಾಯ್ದೆಯ ಪ್ರಕಾರ ಯಾವುದೇ ಅಂಗಡಿಯವರು ಯಾವುದೇ ವಸ್ತುವಿಗೆ ಎಂಆರ್‌ಪಿಗಿಂತ ಹೆಚ್ಚು ಕೇಳಬಾರದು. ಆದರೆ ಆಗಾಗ ಅಂಗಡಿಯವರು ಕುಡಿಯುವ ನೀರು ಅಥವಾ ತಂಪು ಪಾನೀಯ ಮಾರಾಟ ಮಾಡಲು ಎಂಆರ್ ಪಿ ಜೊತೆಗೆ ಕೂಲಿಂಗ್ ಚಾರ್ಜ್ (ರೆಫ್ರಿಜರೇಟರ್) ಹೆಸರಿನಲ್ಲಿ ಎರಡು ರೂಪಾಯಿ ವಸೂಲಿ ಮಾಡುತ್ತಾರೆ. ಗ್ರಾಹಕರೂ ಅಷ್ಟೇಯಾ ಜಸ್ಟ್​ 2 ರೂ ಅಷ್ಟೇ ಅಲ್ಲವಾ, ಕೊಡೋಣಾ ಬಿಡೀ ಎಂಬ ಉದಾರ ಮನೋಭಾವ ತೋರುತ್ತಾರೆ. ಆದರೆ ಈ ಮೂಲಕ ಗ್ರಾಹಕ ಕಾನೂನು ಮುರಿಯಲು ಸಹಾಯವಾಗುತ್ತಿದ್ದಾರೆ ಎಂಬುದು ಗಮನಾರ್ಹ.

ಕಾನೂನು ಏನು ಹೇಳುತ್ತದೆ?

ಕೇಂದ್ರ ಮಾಪನಶಾಸ್ತ್ರ ಕಾಯಿದೆಯಡಿ ಶೀತಲೀಕರಣ, ಸಾರಿಗೆ ಇತ್ಯಾದಿ ನೆಪದಲ್ಲಿ ಯಾವುದೇ ವಸ್ತುವಿನ ಮೇಲೆ MRP ಗಿಂತ ಹೆಚ್ಚಿನ ಶುಲ್ಕವನ್ನು ಚಿಲ್ಲರೆ ವ್ಯಾಪಾರಿ ಕೇಳುವುದು ಕಾನೂನುಬದ್ಧ ಅಪರಾಧವಾಗಿದೆ. ಅಷ್ಟೇ ಅಲ್ಲ. ಅಂತಹ ವ್ಯಾಪಾರಿಗಳಿಗೆ ಎರಡು ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗುತ್ತದೆ.

ವಾಸ್ತವವಾಗಿ, ಪ್ರತಿ ಐಟಂಗೆ MRP ಅನ್ನು ನಿರ್ಧರಿಸಿದಾಗ ಐಟಂ ತಯಾರಿಕೆಯ ವೆಚ್ಚ ಮತ್ತು ಸಂಗ್ರಹಣೆ, ಸಾಗಣೆ ಇತ್ಯಾದಿಗಳ ವೆಚ್ಚವನ್ನು ಸಹ ಅಂದಾಜು ಮಾಡಲಾಗುತ್ತದೆ. ಆ ವಸ್ತುವಿನ ಗರಿಷ್ಠ ಚಿಲ್ಲರೆ ಬೆಲೆಯನ್ನು ನಿರ್ಧರಿಸಲಾಗುತ್ತದೆ. ಆದ್ದರಿಂದಲೇ ಯಾವುದೇ ಚಿಲ್ಲರೆ ಹೆಚ್ಚು ಹಣ ಕೇಳುವುದು ತಪ್ಪು.

ಎಲ್ಲಿ ದೂರು ನೀಡಬೇಕು?

ಯಾವುದೇ ಚಿಲ್ಲರೆ ವ್ಯಾಪಾರಿಗಳು ಅಥವಾ ಅಂಗಡಿಯವರು MRP ಗಿಂತ ಹೆಚ್ಚಿನ ಹಣವನ್ನು ನಿಮ್ಮಿಂದ ಬೇಡಿಕೆಯಿದ್ದರೆ, ತಕ್ಷಣವೇ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ ಸಂಖ್ಯೆ 1915 ಗೆ ಕರೆ ಮಾಡಿ ಮತ್ತು ನಿಮ್ಮ ದೂರನ್ನು ನೋಂದಾಯಿಸಿ. ನೀವು ಬಯಸಿದರೆ, ನೀವು ರಾಷ್ಟ್ರೀಯ ಗ್ರಾಹಕ ಸಹಾಯವಾಣಿಯ ಅಧಿಕೃತ ವೆಬ್‌ಸೈಟ್ ಮೂಲಕವೂ ದೂರು ಸಲ್ಲಿಸಬಹುದು.

To read more in Telugu click here

ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ