AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Canara Bank: ಆರ್​ಬಿಐ ರೆಪೋ ದರ ಏರಿಕೆ ಎಫೆಕ್ಟ್, ಕೆನರಾ ಬ್ಯಾಂಕ್ ಸಾಲದ ಬಡ್ಡಿ ದರ ಹೆಚ್ಚಳ

Canara bank: ಕೆನರಾ ಬ್ಯಾಂಕ್ ಎಂಸಿಎಲ್ಆರ್ ಆಧಾರಿತ ಸಾಲದ ಮೇಲಿನ ಬಡ್ಡಿ ದರವನ್ನು ಗರಿಷ್ಠ ಶೇ. 0.15ಕ್ಕೆ ಹೆಚ್ಚಿಸಿದೆ. ಈ ಹೆಚ್ಚಳದಿಂದ ಸಾಲದ ಮೇಲಿನ ಬಡ್ಡಿ ದರ ಮತ್ತಷ್ಟು ಏರಿಕೆಯಾಗಲಿದೆ. ಸಾಲ ಪಡೆದುಕೊಳ್ಳುವ ಗ್ರಾಹಕ ಈಗ ಇರುವ ಬಡ್ಡಿ ದರಷಕ್ಕಿಂತ ಹೆಚ್ಚಿನ ಹಣ ನೀಡಬೇಕಾಗುತ್ತದೆ.

Canara Bank: ಆರ್​ಬಿಐ ರೆಪೋ ದರ ಏರಿಕೆ ಎಫೆಕ್ಟ್, ಕೆನರಾ ಬ್ಯಾಂಕ್ ಸಾಲದ ಬಡ್ಡಿ ದರ ಹೆಚ್ಚಳ
Canara Bank
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Sep 07, 2022 | 5:56 PM

ದೆಹಲಿ: ಕೆನರಾ ಬ್ಯಾಂಕ್ ಎಂಸಿಎಲ್ಆರ್ ಆಧಾರಿತ ಸಾಲದ ಮೇಲಿನ ಬಡ್ಡಿ ದರವನ್ನು ಗರಿಷ್ಠ ಶೇ. 0.15ಕ್ಕೆ ಹೆಚ್ಚಿಸಿದೆ. ಈ ಹೆಚ್ಚಳದಿಂದ ಸಾಲದ ಮೇಲಿನ ಬಡ್ಡಿ ದರ ಮತ್ತಷ್ಟು ಏರಿಕೆಯಾಗಲಿದೆ. ಸಾಲ ಪಡೆದುಕೊಳ್ಳುವ ಗ್ರಾಹಕ ಈಗ ಇರುವ ಬಡ್ಡಿ ದರಷಕ್ಕಿಂತ ಹೆಚ್ಚಿನ ಹಣ ನೀಡಬೇಕಾಗುತ್ತದೆ. ಸೆ. 7ರಿಂದಲೇ ಹೊಸ ದರ ಅನ್ವಯವಾಗಲಿದೆ ಎಂದು ಬ್ಯಾಂಕ್ ತಿಳಿಸಿದೆ. ಒಂದು ವರ್ಷದ ಅವಧಿಯ ಎಂಸಿಎಲ್ ಆರ್ ಆಧಾರಿತ ಸಾಲಕ್ಕೆ ಅನ್ವಯವಾಗಲಿದ್ದು ಈ ಹಿಂದೆ ಬಡ್ಡಿ ದರ ಶೇ. 7.65 ಇತ್ತು ಈಗ ಅದು ಶೇ. 7.75 ಕ್ಕೆ ಏರಿಕೆಯಾಗಲಿದೆ. ವಾಹನ ಸಾಲ, ಗೃಹ ಸಾಲ, ಪರ್ಸನಲ್ ಲೋನ್ ಸಮತೋಲಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ.

ನ್ಯೂ ಮಾರ್ಜಿನಲ್ ಕಾಸ್ಟ್ ಆಫ್ ಫಂಡ್ ಬೇಸ್ಡ್ ಲೆಂಡಿಂಗ್ ರೇಟ್ (ಎಂಸಿಎಲ್‌ಆರ್) ಲೋನ್ ಎಂದರೇನು?

ಸರಳವಾಗಿ ಹೇಳುವುದಾದರೆ ಇದನ್ನು ಕನಿಷ್ಠ ಬಡ್ಡಿ ದರದ ಸಾಲ ಎನ್ನಬಹುದು. ಬ್ಯಾಂಕ್ ಇರಲಿ ಅಥವಾ ಹಣಕಾಸು ಸಂಸ್ಥೆ ಇರಲಿ ಇಷ್ಟು ಕಡಿಮೆ ದರದಲ್ಲಿ ಬೇರೆಯವರಿಗೆ ಸಾಲ ನೀಡುವುದಿಲ್ಲ. ದೀರ್ಘಾವಧಿ ವ್ಯವಹಾರಕ್ಕೆ ಇದು ಯೋಗ್ಯವಲ್ಲ ಎಂದೇ ಭಾವಿಸಿಕೊಳ್ಳಬೇಕಾಗುತ್ತದೆ. ಈ ಸಾಲದ ಅಡಿಯಲ್ಲಿ ಬ್ಯಾಂಕ್ ಗಳು ಪ್ರತಿ ತಿಂಗಳು ತಮ್ಮ ಬಡ್ಡಿ ದರವನ್ನು ಘೋಷಣೆ ಮಾಡುತ್ತಿರಬೇಕಾಗುತ್ತದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2016 ರ ತನ್ನ ಹಣಕಾಸು ವರ್ಷದಲ್ಲಿ ಈ ವ್ಯವಸ್ಥೆಯನ್ನು ಪರಿಚಯಿಸಿತ್ತು.

ಕೆನರಾ ಬ್ಯಾಂಕ್ ಶೇಕಡ 0.15ರಷ್ಟು ಅಧಿಕ ಮಾಡಿದ್ದು ಆರ್ ಬಿಐ ರೆಪೋ ದರ ಏರಿಕೆ ನಂತರದ ಪ್ರಮುಖ ಬೆಳವಣಿಗೆ ಎಂದೇ ವಿಶ್ಲೇಷಿಸಲಾಗಿದೆ. ಆರ್‌ಬಿಐ ರೆಪೋ ದರವನ್ನು 50 ಮೂಲಾಂಕ ಏರಿಕೆ ಮಾಡಿದ್ದು, ಶೇಕಡ 5.4ಕ್ಕೆ ತಲುಪಿದೆ. ದೇಶದಲ್ಲಿ ಹಣದುಬ್ಬರವನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಆರ್‌ಬಿಯ ಹಲವು ಬಾರಿ ರೆಪೋ ದರವನ್ನು ಏರಿಕೆ ಮಾಡಿದೆ. ಏಪ್ರಿಲ್‌ನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್‌ನ (ಆರ್‌ಬಿಐ) ಸತತ 10 ಬಾರಿಯೂ ರೆಪೋ ದರದಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಂಡಿತ್ತು.

Published On - 5:55 pm, Wed, 7 September 22

ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ