AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಥಿಕತೆಗೆ ಪುಷ್ಟಿ ಕೊಡಲು ಇನ್​ಫ್ರಾಸ್ಟ್ರಕ್ಚರ್ ಅಭಿವೃದ್ಧಿಗೆ ಹೆಚ್ಚು ಹಣ ವ್ಯಯಿಸಿ: ತಜ್ಞರ ಸಲಹೆ

Union Budget 2026-27, infrastructure capex: ಕಳೆದ ಬಾರಿಯ ಬಜೆಟ್​ನಲ್ಲಿ ಸ್ಮಾರ್ಟ್ ಸಿಟಿ, ಹೆದ್ದಾರಿ ಪ್ರಾಜೆಕ್ಟ್​ಗಳಿಗೆ 1.5 ಲಕ್ಷ ಕೋಟಿ ರೂ ಅನುದಾನ ಕೊಡಲಾಗಿತ್ತು. 2026-27ರ ಬಜೆಟ್​ನಲ್ಲಿ ಸರ್ಕಾರದ ಈ ಬಂಡವಾಳ ವೆಚ್ಚ ಎರಡು ಪಟ್ಟು ಹೆಚ್ಚಾಗಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ. ದೇಶವು ಆರ್ಥಿಕವಾಗಿ ಪ್ರಬಲವಾಗಬೇಕಾದರೆ ಮೂಲಸೌಕರ್ಯಗಳು ದೃಢಗೊಳ್ಳಬೇಕು ಎಂಬುದು ಅವರ ಅನಿಸಿಕೆ.

ಆರ್ಥಿಕತೆಗೆ ಪುಷ್ಟಿ ಕೊಡಲು ಇನ್​ಫ್ರಾಸ್ಟ್ರಕ್ಚರ್ ಅಭಿವೃದ್ಧಿಗೆ ಹೆಚ್ಚು ಹಣ ವ್ಯಯಿಸಿ: ತಜ್ಞರ ಸಲಹೆ
ಇನ್​ಫ್ರಾಸ್ಟ್ರಕ್ಚರ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 31, 2026 | 4:55 PM

Share

ನವದೆಹಲಿ, ಜನವರಿ 31: ಫೆಬ್ರುವರಿ 1ರಂದು ನಿರ್ಮಲಾ ಸೀತಾರಾಮನ್ ಬಜೆಟ್ (Union Budget) ಮಂಡಿಸುತ್ತಿದ್ದು ಉದ್ಯಮ ವಲಯದಲ್ಲಿ ಅಪಾರ ನಿರೀಕ್ಷೆಗಳಿವೆ. ಜಾಗತಿಕ ಸಂಕಷ್ಟಗಳ ನಡುವೆ ಆರ್ಥಿಕ ಬೆಳವಣಿಗೆಯ ವೇಗ ಹೆಚ್ಚಿಸಲು ಸರ್ಕಾರ ಸಂಕಲ್ಪ ತೊಟ್ಟಿದೆ. ಕಳೆದ ವರ್ಷದ ಬಜೆಟ್​ನಲ್ಲಿ (2025) ಹಲವಾರು ಸೆಕ್ಟರ್​ಗಳ ಮೂಲಸೌಕರ್ಯಕ್ಕಾಗಿ ಸರ್ಕಾರ ಬಹಳಷ್ಟು ಹಣ ವ್ಯಯಿಸಿತ್ತು. ಈ ಬಾರಿಯ ಬಜೆಟ್​ನಲ್ಲೂ ಇದೇ ನಿಲುವು ಮುಂದುವರಿಯಬಹುದು ಎಂದು ಉದ್ಯಮ ವಲಯ ನಿರೀಕ್ಷಿಸುತ್ತಿದೆ.

ಇನ್​ಫ್ರಾಸ್ಟ್ರಕ್ಚರ್ ಪ್ರಾಜೆಕ್ಟ್​ಗಳಿಗೆ 3 ಲಕ್ಷ ಕೋಟಿ ರೂ ಬರಲಿ

ಭಾರತವು ಜಾಗತಿಕ ಆರ್ಥಿಕ ಪ್ರಬಲ ಶಕ್ತಿಯಾಗಬೇಕಾದರೆ ಈ ಬಜೆಟ್​ನಲ್ಲಿ ಇನ್​ಫ್ರಾಸ್ಟ್ರಕ್ಚರ್ ಅಭಿವೃದ್ಧಿಗೆ ಒತ್ತು ಕೊಡಬೇಕು ಎಂದು ಲಾಜಿಸ್ಟಿಕ್ಸ್ ಸೆಕ್ಟರ್ ಸ್ಕಿಲ್ ಕೌನ್ಸಿಲ್ ನಡೆಸಿದ ಇತ್ತೀಚಿನ ಸಮೀಕ್ಷೆಯಲ್ಲಿ ಹೇಳಲಾಗಿದೆ. ಹೆದ್ದಾರಿ, ನಗರ ಸಾರಿಗೆ, ಸ್ಮಾರ್ಟ್​ಸಿಟಿ ನಿರ್ಮಾಣ ಯೋಜನೆಗಳಲ್ಲಿ ಹೂಡಿಕೆ ಮಾಡಲು, ಹಾಗೂ ರಾಜ್ಯಗಳಿಗೆ ಬಡ್ಡಿರಹಿತ ಸಾಲ ಕೊಡಲು ಕಳೆದ ವರ್ಷದ ಬಜೆಟ್​ನಲ್ಲಿ 1.5 ಲಕ್ಷ ಕೋಟಿ ರೂ ಹಣ ನೀಡಲಾಗಿತ್ತು. ಈ ಬಾರಿಯ ಬಜೆಟ್​ನಲ್ಲಿ ಅದು 3 ಲಕ್ಷ ಕೋಟಿ ರೂಗೆ ಏರಿಸಬೇಕು ಎಂದು ತಜ್ಞರು ಸಲಹೆ ಕೊಟ್ಟಿದ್ದಾರೆ.

‘ಉತ್ಪನ್ನತೆಗೆ ಪುಷ್ಟಿ ಕೊಡಲು, ಲಾಜಿಸ್ಟಿಕ್ಸ್​ನ ಕ್ಷಮತೆ ಸುಧಾರಿಸಲು, ನಮ್ಮ ಜನಸಂಖ್ಯಾ ಬಲವನ್ನು ಆರ್ಥಿಕ ಪ್ರಗತಿಗೆ ಅನುಕೂಲಕರವಾಗಿ ಮಾಡಿಕೊಳ್ಳಲು ಇನ್​ಫ್ರಾಸ್ಟ್ರಕ್ಚರ್ ಸಮರ್ಪಕವಾಗಿರುವುದು ಬಹಳ ಮುಖ್ಯ. ಮೂಲಸೌಕರ್ಯ ಯೋಜನೆಗಳಿಗೆ ಸರ್ಕಾರ ಮಾಡುವ ವೆಚ್ಚ ಒಂದೆರಡು ವರ್ಷಕ್ಕೆ ಸೀಮಿತವಾಗದೆ ಹಲವು ವರ್ಷಗಳು ನಿರಂತರವಾಗಿ ಹೂಡಿಕೆ ಆಗಬೇಕು’ ಎಂದು ಸಲಾಸರ್ ಟೆಕ್ನೋ ಎಂಜಿನಿಯರಿಂಗ್ ಕಂಪನಿಯ ಜಂಟಿ ಎಂಡಿಯಾದ ಶಶಾಂಕ್ ಅಗರ್ವಾಲ್ ಹೇಳುತ್ತಾರೆ.

ಇದನ್ನೂ ಓದಿ: ಬಲಿಷ್ಠ ಭಾರತಕ್ಕೆ ಬೇಕು ತಂತ್ರಜ್ಞಾನ ಪ್ರಾವೀಣ್ಯತೆ; ಬಜೆಟ್​ನಲ್ಲಿ ಟೆಕ್ ಸೆಕ್ಟರ್​ಗೆ ಏನು ಸಿಗುತ್ತೆ?

ಸಾಂಪ್ರದಾಯಿಕ ಮೂಲಸೌಕರ್ಯಗಳ ಜೊತೆಗೆ ಎಐ ಶಕ್ತ ಡಾಟಾ ಸೆಂಟರ್, ರೋಬೋಟಿಕ್ಸ್, ಎಡ್ಜ್ ಇಂಟೆಲಿಜೆನ್ಸ್, ಎಐ ಅಳವಡಿಕೆ ಇತ್ಯಾದಿ ಇನ್​ಫ್ರಾಸ್ಟ್ರಕ್ಚರ್​ಗೆ ಪುಷ್ಟಿ ನೀಡುವ ನೀತಿ ಬರಬೇಕು. ಆಗ ದೇಶದಲ್ಲಿ ಉತ್ಪನ್ನಶೀಲತೆ, ಆರ್ಥಿಕ ಕ್ಷಮತೆ, ಜಾಗತಕ ಸ್ಪರ್ಧಾತ್ಮಕತೆ ಗಣನೀಯವಾಗಿ ಹೆಚ್ಚಲು ಸಹಕಾರಿಯಾಗುತ್ತದೆ ಎಂದು ಗ್ಲೋಬಲ್​ಲಾಜಿಕ್​ನ ಪಿಯೂಶ್ ಝಾ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?