AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಮೊದಲ ಬಾರಿಗೆ ರೈತರಿಗೆ ಕಾರ್ಬನ್ ಕ್ರೆಡಿಟ್; ಎಂಟು ರಾಜ್ಯಗಳ ರೈತರಿಗೆ ಅವಕಾಶ

Carbon credit for farmers: ಗ್ರೋ ಇಂಡಿಗೋ ಸಂಸ್ಥೆ ಭಾರತದಲ್ಲಿ ಆಯ್ದ ರೈತರಿಗೆ ಕಾರ್ಬನ್ ಕ್ರೆಡಿಟ್ ಕೊಡಲು ನಿರ್ಧರಿಸಿದೆ. ಹರ್ಯಾಣ, ಆಂಧ್ರ ಸೇರಿದ ಎಂಟು ರಾಜ್ಯಗಳ 80,000 ರೈತರಿಗೆ ಕಾರ್ಬನ್ ಕ್ರೆಡಿಟ್ ಪಡೆಯುವ ಅವಕಾಶ ಕೊಡಲಾಗಿದೆ. ಒಟ್ಟು 40,000 ಹೆಕ್ಟೇರ್ ಪ್ರದೇಶವು ಈ ಸ್ಕೀಮ್​ನ ವ್ಯಾಪ್ತಿಯಲ್ಲಿದೆ.

ಭಾರತದಲ್ಲಿ ಮೊದಲ ಬಾರಿಗೆ ರೈತರಿಗೆ ಕಾರ್ಬನ್ ಕ್ರೆಡಿಟ್; ಎಂಟು ರಾಜ್ಯಗಳ ರೈತರಿಗೆ ಅವಕಾಶ
ರೈತ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 23, 2024 | 2:01 PM

Share

ನವದೆಹಲಿ, ಅಕ್ಟೋಬರ್ 23: ಪರಿಸರಸ್ನೇಹಿ ಕೃಷಿ ವಿಧಾನಗಳನ್ನು ಅನುಸರಿಸಲು ರೈತರಿಗೆ ಪ್ರೇರಣೆ ನೀಡಬಲ್ಲಂತಹ ಕಾರ್ಬನ್ ಕ್ರೆಡಿಟ್ (Carbon Credit) ಪ್ರಯೋಗ ಭಾರತದಲ್ಲಿ ಮೊದಲ ಬಾರಿಗೆ ಆರಂಭವಾಗುತ್ತಿದೆ. ಭಾರತದ ಪ್ರಮುಖ ಬೀಜ ಕಂಪನಿ ಮಹಿಕೋ ಮತ್ತು ಅಮೆರಿಕದ ಇಂಡಿಗೋ ಜಂಟಿಯಾಗಿ ಸ್ಥಾಪಿಸಿರುವ ಗ್ರೋ ಇಂಡಿಗೋ ಸಂಸ್ಥೆ ಇಂಥದ್ದೊಂದು ಪ್ರಯೋಗ ನಡೆಸುತ್ತಿದೆ. ಮೊದಲಿಗೆ ದೇಶದ ಎಂಟು ರಾಜ್ಯಗಳ 80,000 ಸಣ್ಣ ರೈತರನ್ನು ಈ ಸ್ಕೀಮ್​ಗೆ ಆಯ್ದುಕೊಳ್ಳಲಾಗಿದೆ. ಪರಿಸರಸ್ನೇಹಿ ಕೃಷಿ ವಿಧಾನಗಳನ್ನು ಅಳವಡಿಸಿಕೊಳ್ಳುವ ರೈತರಿಗೆ ಕಾರ್ಬನ್ ಕ್ರೆಡಿಟ್ ರೂಪದಲ್ಲಿ ಹಣ ಸಿಗಲಿದೆ.

ಮಿತವಾಗಿ ನೀರು ಬಳಕೆ, ಕಡಿಮೆ ಹೊಲ ಉಳುವಿಕೆ, ಡಿಎಸ್​ಆರ್ ತಂತ್ರ ಬಳಕೆ, ಮಣ್ಣಿನ ಸಾರ ಉಳಿಸುವಿಕೆ, ನೈಟ್ರೋಜನ್ ಗೊಬ್ಬರ ನಿರ್ವಹಣೆ, ಕೃಷಿ ಅರಣ್ಯ ಇತ್ಯಾದಿ ವಿಧಾನಗಳನ್ನು ಅನುಸರಿಸುವ ರೈತರಿಗೆ ಅಗತ್ಯ ಕಾರ್ಬನ್ ಕ್ರೆಡಿಟ್ ಸಿಗುತ್ತದೆ. ಈ ಕಾರ್ಬನ್ ಕ್ರೆಡಿಟ್ ಅನ್ನು ಯಾವುದಾದರೂ ಕೈಗಾರಿಕೆಗಳು ಹಣಕ್ಕೆ ಖರೀದಿಸಬಹುದು. ಈ ಮೂಲಕ ರೈತರಿಗೆ ಪರಿಸರಸ್ನೇಹಿ ಕೃಷಿ ವಿಧಾನ ಅನುಸರಿಸಿದ್ದಕ್ಕೆ ಕಾರ್ಬನ್ ಕ್ರೆಡಿಟ್ ಮೂಲಕ ಆದಾಯವೂ ಪ್ರಾಪ್ತವಾಗುತ್ತದೆ.

ಇದನ್ನೂ ಓದಿ: ಪಿಎಂ ಇಂಟರ್ನ್​ಶಿಪ್ ಸ್ಕೀಮ್; ಕಂಪನಿಗಳಿಗೆ ನೊಂದಣಿ ಮುಕ್ತಾಯ; ಲಕ್ಷಕ್ಕೂ ಹೆಚ್ಚು ಯುವಕರಿಗೆ ತರಬೇತಿ ಅವಕಾಶ

ಹರ್ಯಾಣ, ಪಂಜಾಬ್, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ, ಉತ್ತರಪ್ರದೇಶ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿನ 80,000 ರೈತರನ್ನು ಇದಕ್ಕಾಗಿ ಆಯ್ದುಕೊಳ್ಳಲಾಗಿದೆ. ಈ ಸ್ಕೀಮ್ ವ್ಯಾಪ್ತಿಯಲ್ಲಿ ಒಟ್ಟು ಕೃಷಿ ಜಮೀನು 40,000 ಹೆಕ್ಟೇರ್​ನಷ್ಟಿದೆ.

ಏನಿದು ಕಾರ್ಬನ್ ಕ್ರೆಡಿಟ್ ಯೋಜನೆ?

ಜಗತ್ತಿನಾದ್ಯಂತ ಪರಿಸರಕ್ಕೆ ಹಾನಿಯಾಗುವುದನ್ನು ಸಾಧ್ಯವಾದಷ್ಟೂ ತಗ್ಗಿಸಲು ವಿಶ್ವಸಂಸ್ಥೆ ಗುರಿ ಇಟ್ಟಿದೆ. ಕಾರ್ಬನ್ ನ್ಯೂಟ್ರಲ್ ಅಥವಾ ಶೂನ್ಯ ಮಾಲಿನ್ಯ ಹೊರಸೂಸುವಿಕೆ ಇತ್ಯಾದಿ ಉಪಗುರಿಗಳನ್ನು ಇಡಲಾಗಿದೆ. ವಿವಿಧ ಕೈಗಾರಿಕೆಗಳು ಪರಿಸರಕ್ಕೆ ಹಾನಿಯಾಗದಂತೆ ನಿರ್ವಹಣೆ ಆಗಬೇಕು ಎನ್ನುವ ಆಶಯ ಇದೆ. ಆದರೆ, ಮೈನಿಂಗ್, ವಿಮಾನಯಾನ ಮೊದಲಾದ ಕ್ಷೇತ್ರದ ಕಂಪನಿಗಳಿಂದ ಮಾಲಿನ್ಯ ಉತ್ಪತ್ತಿ ನಿಯಂತ್ರಣ ಬಹಳ ಕಷ್ಟ. ಈ ಸಂದರ್ಭದಲ್ಲಿ ಇಂಥ ಕೈಗಾರಿಕೆಗಳು ಕಾರ್ಬನ್ ಕ್ರೆಡಿಟ್ ಖರೀದಿಸಬೇಕು ಎನ್ನುವ ನಿಯಮ ಇದೆ.

ಇದನ್ನೂ ಓದಿ: 2024-26ರಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಶೇ. 7ರಿಂದ 8; ಡಲಾಯ್ಟ್, ಐಎಂಎಫ್, ಆರ್​ಬಿಐ ಅಂದಾಜು

ಒಂದು ಕಡೆ ಪರಿಸರ ಹಾನಿಯಾದರೆ, ಇನ್ನೊಂದೆಡೆ ಅಷ್ಟೇ ಪ್ರಮಾಣದಲ್ಲಿ ಪರಿಸರ ಬೆಳವಣಿಗೆ ಆಗಬೇಕು. ಇದರಿಂದ ಪರಿಸರ ಹಾಳಾಗುವಿಕೆ ಪ್ರಮಾಣ ಶೂನ್ಯ ಇರುತ್ತದೆ. ಹೆಚ್ಚು ಗಿಡಮರ ಬೆಳೆಸುವುದು, ಮಾಲಿನ್ಯ ತಗ್ಗಿಸುವುದು ಇವೇ ಮುಂತಾದ ಕಾರ್ಯಗಳನ್ನು ಕೈಗೊಳ್ಳುವ ವ್ಯಕ್ತಿಗಳು, ಸಂಸ್ಥೆಗಳು ಸರ್ಕಾರದಿಂದ ಕಾರ್ಬನ್ ಕ್ರೆಡಿಟ್ ಪಡೆಯಬಹುದು. ಇದನ್ನು ಅವಶ್ಯಕತೆ ಇದ್ದವರು ಖರೀದಿಸಬಹುದು. ಪರಿಸರ ಉಳಿತಾಯ ಎಷ್ಟು ಆಗಿರುತ್ತದೋ ಅದಕ್ಕೆ ಅನುಗುಣವಾಗಿ ಕಾರ್ಬನ್ ಕ್ರೆಡಿಟ್ ಸಿಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?