AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಕ್ಸಿಸ್ ಬ್ಯಾಂಕ್​ನಲ್ಲಿ 5,100 ಕೋಟಿ ರೂ ಅವ್ಯವಹಾರ: ದೆಹಲಿ ಹೈಕೋರ್ಟ್​ನಲ್ಲಿ ಸುಬ್ರಮಣಿಯನ್ ಸ್ವಾಮಿ ಪ್ರಕರಣ ದಾಖಲು

Subramanian Swamy Moves to Court Against Axis Bank: ಮ್ಯಾಕ್ಸ್ ಲೈಫ್ ಮತ್ತು ಎಕ್ಸಿಸ್ ಬ್ಯಾಂಕ್​ನ ಸಹ-ಸಂಸ್ಥೆಗಳ ವಿರುದ್ಧ ಸುಬ್ರಮಣಿಯನ್ ಸ್ವಾಮಿ ದೆಹಲಿ ಹೈಕೋರ್ಟ್​ನಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮ್ಯಾಕ್ಸ್ ಲೈಫ್ ಇನ್ಷೂರೆನ್ಸ್​ನ ಷೇರು ವಹಿವಾಟಿನಲ್ಲಿ ಎಕ್ಸಿಸ್ ಬ್ಯಾಂಕ್​ನ ಕಂಪನಿಗಳು ಅಕ್ರಮವಾಗಿ ಲಾಭ ಮಾಡಿವೆ ಎಂದು ದೂರಲಾಗಿದೆ. ನ್ಯಾಯಾಲಯದಿಂದ ತಜ್ಞರ ಸಮಿತಿ ನೇಮಕವಾಗಿ ಅದರ ಮೂಲಕ ಈ ಪ್ರಕರಣದ ತನಿಖೆ ನಡೆಸಬೇಕು ಎಂದು ಸ್ವಾಮಿ ಮನವಿ ಮಾಡಿದ್ದಾರೆ.

ಎಕ್ಸಿಸ್ ಬ್ಯಾಂಕ್​ನಲ್ಲಿ 5,100 ಕೋಟಿ ರೂ ಅವ್ಯವಹಾರ: ದೆಹಲಿ ಹೈಕೋರ್ಟ್​ನಲ್ಲಿ ಸುಬ್ರಮಣಿಯನ್ ಸ್ವಾಮಿ ಪ್ರಕರಣ ದಾಖಲು
ಎಕ್ಸಿಸ್ ಬ್ಯಾಂಕ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 15, 2024 | 4:44 PM

Share

ನವದೆಹಲಿ, ಫೆಬ್ರುವರಿ 15: ಷೇರು ವಹಿವಾಟಿನಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಮ್ಯಾಕ್ಸ್ ಲೈಫ್ ಇನ್ಷೂರೆನ್ಸ್, ಎಕ್ಸಿಸ್ ಬ್ಯಾಂಕ್ ಹಾಗು ಅವುಗಳ ಸಹ-ಸಂಸ್ಥೆಗಳ ವಿರುದ್ಧ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ (Subramanian Swamy) ದೆಹಲಿ ಹೈಕೋರ್ಟ್​ನಲ್ಲಿ ದೂರು ದಾಖಲಿಸಿದ್ದಾರೆ. ಮ್ಯಾಕ್ಸ್ ಲೈಫ್ ಇನ್ಷೂರೆನ್ಸ್​ನ ಷೇರು ವಹಿವಾಟಿನಲ್ಲಿ ಎಕ್ಸಿಸ್ ಬ್ಯಾಂಕ್ ಅಕ್ರಮವಾಗಿ ಲಾಭ ಮಾಡಿದೆ. ಇದರ ತನಿಖೆ ನಡೆಯಬೇಕು ಎಂದು ಬಿಜೆಪಿ ರಾಜ್ಯಸಭಾ ಸಂಸದರು ತಮ್ಮ ದೂರಿನಲ್ಲಿ ಆಗ್ರಹಿಸಿದ್ದಾರೆ.

ಮ್ಯಾಕ್ಸ್ ಲೈಫ್ ಇನ್ಷೂರೆನ್ಸ್​ನ ಷೇರುದಾರರಲ್ಲಿ ಎಕ್ಸಿಸ್ ಬ್ಯಾಂಕ್ ಒಂದು. ಎಕ್ಸಿಸ್ ಸೆಕ್ಯೂರಿಟೀಸ್ ಮತ್ತು ಎಕ್ಸಿಸ್ ಕ್ಯಾಪಿಟಲ್ ಸಂಸ್ಥೆಗಳಿಗೆ ಮ್ಯಾಕ್ಸ್ ಲೈಫ್ ಇನ್ಷೂರೆನ್ಸ್ ಸಂಸ್ಥೆ ತನ್ನ ಷೇರುಗಳನ್ನು ಅಕ್ರಮವಾಗಿ ಖರೀದಿಸಿ ಮಾರಲು ಅನುವು ಮಾಡಿಕೊಟ್ಟಿದೆ. ಈ ವಂಚನೆಯ ಬಗ್ಗೆ ತನಿಖೆ ಆಗಬೇಕು ಎಂದು ಸ್ವಾಮಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: 2023ರ ಅಂತ್ಯದಲ್ಲಿ ಆರ್ಥಿಕ ಹಿಂಜರಿತಕ್ಕೆ ಸಿಲುಕಿದ ಬ್ರಿಟನ್; ರಿಸಿಶನ್ ಎಂದು ಪರಿಗಣಿಸಲು ಲೆಕ್ಕಾಚಾರ ಏನು? ಇಲ್ಲಿದೆ ಡೀಟೇಲ್ಸ್

ಮ್ಯಾಕ್ಸ್ ಲೈಫ್ ಇನ್ಷೂರೆನ್ಸ್ ಕೋ ಲಿ, ಮ್ಯಾಕ್ಸ್ ಫೈನಾನ್ಷಿಯಲ್ ಸರ್ವಿಸ್ ಲಿ, ಎಕ್ಸಿಸ್ ಬ್ಯಾಂಕ್, ಎಕ್ಸಿಸ್ ಸೆಕ್ಯೂರಿಟೀಸ್ ಲಿ, ಎಕ್ಸಿಸ್ ಕ್ಯಾಪಿಟಲ್ ಲಿ ಸಂಸ್ಥೆಗಳನ್ನು ಸುಬ್ರಮಣಿಯನ್ ಸ್ವಾಮಿ ತಮ್ಮ ದೂರಿನಲ್ಲಿ ಹೆಸರಿಸಿದ್ದಾರೆ.

ಷೇರುಗಳ ವರ್ಗಾವಣೆಗೆ ಪೂರ್ವಾನುಮತಿ ಪಡೆಯುವ ವಿಚಾರದಲ್ಲಿ ಮ್ಯಾಕ್ಸ್ ಲೈಫ್ ಇನ್ಷೂರೆನ್ಸ್ ಸಂಸ್ಥೆ ನಿಯಮ ಪಾಲಿಸಿಲ್ಲ. ಮ್ಯಾಕ್ಸ್ ಲೈಫ್​ನ ಈಕ್ವಿಟಿ ಷೇರುಗಳ ಖರೀದಿ ಮತ್ತು ಮಾರಾಟದಿಂದ ಅಕ್ರಮವಾಗಿ ಲಾಭ ಮಾಡಲು ಎಕ್ಸಿಸ್ ಬ್ಯಾಂಕ್ ಹಾಗೂ ಅದರ ಗ್ರೂಪ್ ಕಂಪನಿಗಳಿಗೆ ಅನುವಾಗುವ ರೀತಿಯಲ್ಲಿ ಬಹಳ ಯೋಜಿತ ರೀತಿಯಲ್ಲಿ ಸಂಚು ರೂಪಿಸಲಾಗಿದೆ. ಮ್ಯಾಕ್ಸ್ ಲೈಫ್​ನ ಷೇರುದಾರರು ಮತ್ತು ಕಾರ್ಪೊರೇಟ್ ಏಜೆಂಟ್ ಆಗಿ ಹೊಂದಿರುವ ಸಂಬಂಧವನ್ನು ದುರುಪಯೋಗಿಸಿಕೊಳ್ಳಲಾಗಿದೆ ಎಂದು ಬಿಜೆಪಿ ಸಂಸದರು ಆರೋಪಿಸಿದ್ದಾರೆ.

ಇದನ್ನೂ ಓದಿ: ಚುನಾವಣಾ ಬಾಂಡ್, ಇಲ್ಲಿಯವರೆಗೆ ಸಂಗ್ರಹವಾದ ಹಣ ಎಷ್ಟು? ರಾಜಕೀಯ ಪಕ್ಷಗಳಿಗೆ ಚಿನ್ನದ ಮೊಟ್ಟೆಯಾಗಿದ್ದ ಈ ಬಾಂಡ್​ಗೆ ಸುಪ್ರೀಂ ಕೊಕ್ಕೆ

ಎಕ್ಸಿಸ್ ಬ್ಯಾಂಕ್ ಈ ಹಿಂದೆಯೂ ಅಕ್ರಮವಾಗಿ ಲಾಭ ಮಾಡಲು ಮುಂದಾಗಿದ್ದಿದೆ. ಹಲವು ಬಾರಿ ಅದಕ್ಕೆ ದಂಡ ಹಾಕಲಾಗಿದ್ದರೂ ಇದು ನಿಂತಿಲ್ಲ. ಹೀಗಾಗಿ, ಈಗ ನಡೆದಿರುವ ವಹಿವಾಟನ್ನೂ ಸಂಶಯದಿಂದ ನೋಡಬೇಕಾಗುತ್ತದೆ. ಕೋರ್ಟ್​ನಿಂದ ತಜ್ಞರ ಸಮಿತಿಯೊಂದನ್ನು ನೇಮಕ ಮಾಡಿ, ಅದರ ಮೂಲಕ ಈ ಪ್ರಕರಣದ ತನಿಖೆ ನಡೆಸಬೇಕು ಎಂದು ಜನತಾ ಪಕ್ಷದ ಮಾಜಿ ಅಧ್ಯಕ್ಷರೂ ಆದ ಸ್ವಾಮಿ ಕೇಳಿಕೊಂಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ