AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Direct Tax: ಒಟ್ಟು ನೇರ ತೆರಿಗೆ ಸಂಗ್ರಹ ಬರೋಬ್ಬರಿ ಶೇ 26ರಷ್ಟು ಹೆಚ್ಚಳ

ಡಿಸೆಂಬರ್​ 17ರ ವರೆಗೆ 2.28 ಲಕ್ಷ ಕೋಟಿ ಮರುಪಾವತಿ ಮಾಡಲಾಗಿದೆ. ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇಕಡಾ 68ರಷ್ಟು ಹೆಚ್ಚಾಗಿದೆ. ಹಿಂದಿನ ವರ್ಷ 1.35 ಲಕ್ಷ ಕೋಟಿ ಆಗಿತ್ತು ಎಂದು ಸಿಬಿಡಿಟಿ ತಿಳಿಸಿದೆ.

Direct Tax: ಒಟ್ಟು ನೇರ ತೆರಿಗೆ ಸಂಗ್ರಹ ಬರೋಬ್ಬರಿ ಶೇ 26ರಷ್ಟು ಹೆಚ್ಚಳ
ಸಾಂದರ್ಭಿಕ ಚಿತ್ರImage Credit source: Reuters
TV9 Web
| Edited By: |

Updated on: Dec 19, 2022 | 10:28 AM

Share

ನವದೆಹಲಿ: ದೇಶದ ಒಟ್ಟು ನೇರ ತೆರಿಗೆ (Direct Tax) ಸಂಗ್ರಹ 23ನೇ ಹಣಕಾಸು ವರ್ಷದಲ್ಲಿ ಈವರೆಗೆ ಶೇಕಡಾ 26ರಷ್ಟು ಹೆಚ್ಚಳವಾಗಿದ್ದು, 13.63 ಲಕ್ಷ ಕೋಟಿ ರೂ. ಆಗಿದೆ. ಮರುಪಾವತಿಗೆ ಸರಿಹೊಂದಿಸುವ ಮೊದಲು ಈ ವರ್ಷ ನೇರ ತೆರಿಗೆಗಳ ಒಟ್ಟು ಸಂಗ್ರಹ 13.63 ಲಕ್ಷ ಕೋಟಿ ರೂ. ಆಗಿದೆ. ಕಳೆದ ವರ್ಷ ಇದು 10.83 ಲಕ್ಷ ಕೋಟಿ ರೂ. ಇತ್ತು ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (CBDT) ಪ್ರಕಟಣೆಯಲ್ಲಿ ತಿಳಿಸಿದೆ. ಮರುಪಾವತಿಗಳನ್ನು ಸರಿಹೊಂದಿಸಿದ ಬಳಿಕ ನಿವ್ವಳ ನೇರ ತೆರಿಗೆ ಸಂಗ್ರಹ 11.35 ಲಕ್ಷ ಕೋಟಿ ರೂ. ಆಗಿದೆ. ಕಳೆದ ವರ್ಷ ಇದು 9.47 ಲಕ್ಷ ಕೋಟಿ ರೂ. ಇತ್ತು ಎಂದು ಮಂಡಳಿ ತಿಳಿಸಿದೆ.

ಡಿಸೆಂಬರ್​ 17ರ ವರೆಗೆ 2.28 ಲಕ್ಷ ಕೋಟಿ ಮರುಪಾವತಿ ಮಾಡಲಾಗಿದೆ. ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇಕಡಾ 68ರಷ್ಟು ಹೆಚ್ಚಾಗಿದೆ. ಹಿಂದಿನ ವರ್ಷ 1.35 ಲಕ್ಷ ಕೋಟಿ ಆಗಿತ್ತು. ನೇರ ತೆರಿಗೆಗಳ ಒಟ್ಟು ಸಂಗ್ರಹದಲ್ಲಿ ಕಾರ್ಪೊರೇಷನ್ ತೆರಿಗೆ 7.25 ಲಕ್ಷ ಕೋಟಿ ರೂ., ಸೆಕ್ಯುರಿಟೀಸ್ ಟ್ರಾನ್ಸಾಕ್ಷನ್ ಟ್ಯಾಕ್ಸ್ ಒಳಗೊಂಡಂತೆ ಆದಾಯ ತೆರಿಗೆ 6.35 ಲಕ್ಷ ಕೋಟಿ ರೂ. ಇದೆ ಎಂದು ಸಿಬಿಡಿಟಿ ತಿಳಿಸಿದೆ.

ಇದನ್ನೂ ಓದಿ: Direct Tax Collection: ನೇರ ತೆರಿಗೆ ಸಂಗ್ರಹದಲ್ಲಿ ಶೇ 24ರಷ್ಟು ಹೆಚ್ಚಳ; ಹಣಕಾಸು ಸಚಿವಾಲಯ ಮಾಹಿತಿ

ಮುಂಗಡ ತೆರಿಗೆ 5.21 ಲಕ್ಷ ಕೋಟಿ ರೂ, ಟ್ಯಾಕ್ಸ್ ಡಿಡಕ್ಟೆಡ್ ಎಟ್ ಸೋರ್ಸ್ 6.45 ಲಕ್ಷ ಕೋಟಿ ರೂ, ಸೆಲ್ಫ್ ಅಸೆಸ್​ಮೆಂಟ್ ಟ್ಯಾಕ್ಸ್ 1.40 ಲಕ್ಷ ಕೋಟಿ ರೂ, ರೆಗ್ಯುಲರ್ ಅಸೆಸ್​​ಮೆಂಟ್ ಟ್ಯಾಕ್ಸ್ 46,244 ಕೋಟಿ ರೂ, ಇತರ ಮೂಲಗಳಿಂದ ಸ್ವೀಕರಿಸಿದ ತೆರಿಗೆ 11,237 ಕೋಟಿ ರೂ. ಆಗಿದೆ ಎಂದು ಮಂಡಳಿ ತಿಳಿಸಿದೆ.

ಪ್ರಸಕ್ತ ವರ್ಷದ ಸಂಚಿತ ಮುಂಗಡ ತೆರಿಗೆ ಮೊದಲ, ಎರಡನೇ ಹಾಗೂ ಮೂರನೇ ತ್ರೈಮಾಸಿಕಗಳಲ್ಲಿ 5.21 ಲಕ್ಷ ಕೋಟಿ ರೂ. ಇತ್ತು. ಕಳೆದ ವರ್ಷ ಇದು 4.62 ಲಕ್ಷ ಕೋಟಿ ರೂ. ಆಗಿತ್ತು. ಒಟ್ಟು ಶೇಕಡಾ 12.83ರ ಬೆಳವಣಿಗೆ ಸಾಧಿಸಲಾಗಿದೆ. ಸಲ್ಲಿಕೆ​ಯಾಗಿರುವ ಆದಾಯ ತೆರಿಗೆ ರಿಟರ್ನ್ಸ್ ಅನ್ನು ದೃಢೀಕರಿಸುವ ಈ ಬಾರಿ ವೇಗಪಡೆದುಕೊಂಡಿದೆ. ಡಿಸೆಂಬರ್ 17ರ ಒಳಗೆ ಶೇಕಡಾ 96.5ರಷ್ಟು ದೃಢೀಕರಣ ಪ್ರಕ್ರಿಯೆ ಮುಗಿದಿದೆ. ಇದು ಪ್ರಸ್ತುತ ಹಣಕಾಸು ವರ್ಷದಲ್ಲಿ ನೀಡಿದ ಮರುಪಾವತಿಗಳ ಸಂಖ್ಯೆಯಲ್ಲಿ ಶೇಕಡಾ 109ರಷ್ಟು ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಸಿಬಿಡಿಟಿ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ