AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NSE co-location scam: ಫೋನ್​ ಕದ್ದಾಲಿಕೆ ಪ್ರಕರಣದಲ್ಲಿ ಚಿತ್ರಾ, ರವಿ ನರೇನ್ ಹಾಗೂ ಸಂಜಯ್ ಪಾಂಡೆ ವಿರುದ್ಧ ಎಫ್​ಐಆರ್​

ಕೇಂದ್ರೀಯ ತನಿಖಾ ದಳದಿಂದ ಎನ್​ಎಸ್​ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ, ರವಿ ನರೇನ್ ಹಾಗೂ ಮಾಜಿ ಪೊಲೀಸ್ ಕಮಿಷನರ್ ಸಂಜಯ್ ಪಾಂಡೆ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.

NSE co-location scam: ಫೋನ್​ ಕದ್ದಾಲಿಕೆ ಪ್ರಕರಣದಲ್ಲಿ ಚಿತ್ರಾ, ರವಿ ನರೇನ್ ಹಾಗೂ ಸಂಜಯ್ ಪಾಂಡೆ ವಿರುದ್ಧ ಎಫ್​ಐಆರ್​
ಚಿತ್ರಾ ರಾಮಕೃಷ್ಣ (ಸಂಗ್ರಹ ಚಿತ್ರ)
TV9 Web
| Edited By: |

Updated on: Jul 08, 2022 | 5:39 PM

Share

ರಾಷ್ಟ್ರೀಯ ವಿನಿಮಯ ಕೇಂದ್ರ- ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ (NSE)ನ ಮಾಜಿ ಮುಖ್ಯಸ್ಥೆ ಚಿತ್ರಾ ರಾಮಕೃಷ್ಣ, ರವಿ ನರೇನ್ ಮತ್ತು ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಸಂಜಯ್ ಪಾಂಡೆ ವಿರುದ್ಧ ಕೇಂದ್ರೀಯ ತನಿಖಾ ದಳವು (CBI) ಹೊಸದಾಗಿ ಪ್ರಕರಣ ದಾಖಲಿಸಿಕೊಂಡಿದೆ. 2009ರಿಂದ 2017ರ ಮಧ್ಯೆ ಎನ್​ಎಸ್​ಇ ಉದ್ಯೋಗಿಗಳ ಫೋನ್​ ಕದ್ದಾಲಿಕೆ ಮಾಡಿರುವ ಆರೋಪದಲ್ಲಿ ಗೃಹ ವ್ಯವಹಾರಗಳ ಸಚಿವಾಲಯದ (MHA) ನಿರ್ದೇಶನದ ಮೇರೆಗೆ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಈ ಹೊಸ ವರದಿಯಲ್ಲಿ ಸಿಬಿಐನಿಂದ ಇತರ ಆರೋಪಗಳು ಕೂಡ ಸೇರ್ಪಡೆ ಆಗಿದೆ. ಭಾರತದ ವಿವಿಧೆಡೆ ಇರುವ ಮಾಜಿ ಪೊಲೀಸ್​ ಕಮಿಷನರ್​ ಸಂಜಯ್​ ಪಾಂಡೆಗೆ ಸೇರಿದ ಜಾಗಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿದೆ.

ಎಫ್​ಐಆರ್​ನಲ್ಲಿ ತಿಳಿಸಿರುವಂತೆ, ಮೂವರು ಆರೋಪಿಗಳು ಕಾನೂನುಬಾಹಿರವಾಗಿ 2009ರಿಂದ 2017ರ ಮಧ್ಯೆ ಎನ್​ಎಸ್​ಇ ಉದ್ಯೋಗಿಗಳ ಫೋನ್ ಕದ್ದಾಲಿಕೆ ಮಾಡಿದ್ದಾರೆ. ಈ ಕಾನೂನು ಬಾಹಿರ ನಿಗಾಗೆ ಚಿತ್ರಾ ಮತ್ತು ನರೇನ್ ಇವರಿಬ್ಬರು ಸಂಜಯ್ ಪಾಂಡೆಯ ಸಹಾಯ ಪಡೆದಿದ್ದಾರೆ ಎಂದು ಹೇಳಲಾಗಿದೆ. ಕಳೆದ ತಿಂಗಳು ಸೆಕ್ಯೂರಿಟೀಸ್ ಎಕ್ಸ್​ಚೇಂಜ್ ಬೋರ್ಡ್​ ಆಫ್ ಇಂಡಿಯಾ (SEBI)ದಿಂದ 2015ರ ಡಾರ್ಕ್ ಫೈಬರ್ ಪ್ರಕರಣದಲ್ಲಿ ಎನ್ಎಸ್​​ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ, ಎನ್​ಎಸ್​ಇ ಸಿಒಒ ಆನಂದ್ ಸುಬ್ರಮಣಿಯನ್ ಮತ್ತು ಎನ್​ಎಸ್​ಇ ಸೇರಿದಂತೆ 18 ಸಂಸ್ಥೆಗಳನ್ನು ಕಂಡು ಹಿಡಿಯಲಾಗಿತ್ತು.

ಬಂಡವಾಳ ಮಾರುಕಟ್ಟೆಯ ನಿಯಂತ್ರಕ ಸಂಸ್ಥೆಯಾದ ಸೆಬಿ ಕ್ಯುಮುಲೇಟಿವ್ (ಸಂಚಿತ) ದಂಡ 43.8 ಕೋಟಿ ರೂಪಾಯಿಯನ್ನು 18 ಸಂಸ್ಥೆಗಳ ಮೇಲೆ ಹಾಕಲಾಗಿತ್ತು. ಅದರಲ್ಲಿ ಎನ್​ಎಸ್​ಇವೊಂದಕ್ಕೇ 7 ಕೋಟಿ ರೂಪಾಯಿ ದಂಡ ಹಾಕಲಾಗಿತ್ತು. ಎನ್​ಎಸ್​ಇ ಮುಖ್ಯ ಬಿಜಿನೆಸ್ ಡೆವಲಪ್​ಮೆಂಟ್ ಅಧಿಕಾರಿ ರವಿ ವಾರಾಣಸಿ ಅವರಿಗೆ 5 ಕೋಟಿ ಹಾಗೂ ಚಿತ್ರಾ ರಾಮಕೃಷ್ಣಗೆ 5 ಕೋಟಿ ದಂಡ ಹಾಕಲಾಗಿತ್ತು.

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ