AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳೆ ಸಮೀಕ್ಷೆಗೆ ಸರ್ಕಾರದಿಂದ ಪ್ರತ್ಯೇಕ ಪೋರ್ಟಲ್ ಮತ್ತು ಮೊಬೈಲ್ ಆ್ಯಪ್ ಬಿಡುಗಡೆ

GCES App for crop estimation: ದೇಶದಲ್ಲಿ ಕೃಷಿ ಚಟುವಟಿಕೆಗಳಲ್ಲಿ ಗಮನಾರ್ಹ ಪರಿವರ್ತನೆ ತರಬಲ್ಲಂತಹ ಬೆಳೆ ಸಮೀಕ್ಷೆ ಪೋರ್ಟಲ್ ಮತ್ತು ಮೊಬೈಲ್ ಆ್ಯಪ್ ಆದ ಜಿಸಿಇಎಸ್ ಅನ್ನು ಸರ್ಕಾರ ಬಿಡುಗಡೆ ಮಾಡಿದೆ. ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್ ಅಹುಜಾ ಜಿಸಿಇಎಸ್ ಪೋರ್ಟಲ್ ಅನ್ನು ಅನಾವರಣಗೊಳಿಸಿದ್ದಾರೆ. ಜನರಲ್ ಕ್ರಾಮ್ ಎಸ್ಟಿಮೇಶನ್ ಸರ್ವೆನಲ್ಲಿ ಸಾಕಷ್ಟು ಫೀಚರ್​ಗಳಿದ್ದು. ಗ್ರಾಮವಾರು ಜಿಸಿಇಎಸ್ ಪ್ಲಾನ್, ಬೆಳೆ ತೂಕ,​ ಇತ್ಯಾದಿ ಸಮಗ್ರ ಬೆಳೆ ಇಳುವರಿ ಅಂದಾಜು ವರದಿ ನೀಡಬಹುದು. ಈ ಆ್ಯಪ್​ನಲ್ಲಿ ಜಿಯೋ ರೆಫರೆನ್ಸಿಂಗ್ ಫೀಚರ್ ಕೂಡ ಇದೆ.

ಬೆಳೆ ಸಮೀಕ್ಷೆಗೆ ಸರ್ಕಾರದಿಂದ ಪ್ರತ್ಯೇಕ ಪೋರ್ಟಲ್ ಮತ್ತು ಮೊಬೈಲ್ ಆ್ಯಪ್ ಬಿಡುಗಡೆ
ಕೃಷಿ
TV9 Web
| Edited By: |

Updated on: Sep 22, 2023 | 6:34 PM

Share

ನವದೆಹಲಿ, ಸೆಪ್ಟೆಂಬರ್ 22: ದೇಶದಲ್ಲಿ ಕೃಷಿ ಚಟುವಟಿಕೆಗಳಲ್ಲಿ ಗಮನಾರ್ಹ ಪರಿವರ್ತನೆ ತರಬಲ್ಲಂತಹ ಬೆಳೆ ಸಮೀಕ್ಷೆ ಪೋರ್ಟಲ್ ಮತ್ತು ಮೊಬೈಲ್ ಆ್ಯಪ್ ಆದ GCES ಅನ್ನು ಸರ್ಕಾರ ಬಿಡುಗಡೆ ಮಾಡಿದೆ. ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್ ಅಹುಜಾ ಜಿಸಿಇಎಸ್ (general crop estimation survey) ಪೋರ್ಟಲ್ ಅನ್ನು ಅನಾವರಣಗೊಳಿಸಿದ್ದಾರೆ. ಕೃಷಿಯಲ್ಲಿ ರಿಯಲ್ ಟೈಮ್ ಸಮೀಕ್ಷೆ ಮತ್ತು ತಂತ್ರಜ್ಞಾನ, ನಿಖರ ಡಾಟಾ ಅವಶ್ಯಕತೆ ಇದೆ ಎಂದು ಹೇಳಿದ ಅಹುಜಾ, ಎಲ್ಲಾ ರಾಜ್ಯಗಳೂ ಕೂಡ ಜಿಸಿಇಎಸ್ ಪೋರ್ಟಲ್ ಮತ್ತು ಮೊಬೈಲ್ ಆ್ಯಪ್ ಅನ್ನು ಅಳವಡಿಸಿಕೊಂಡು ವಿಶ್ವಾಸಾರ್ಹತೆ ಹೆಚ್ಚುವಂತೆ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಪ್ರಮೋದ್ ಕುಮಾರ್ ಮೆಹೆರ್ಡಾ ಕೂಡ ಇದನ್ನು ಪುನರುಚ್ಚರಿಸಿ, ಸರಿಯಾದ ರೀತಿಯಲ್ಲಿ ಬೆಳೆ ಸಮೀಕ್ಷೆ ಬರಲು ಎಲ್ಲಾ ರಾಜ್ಯಗಳೂ ಜಿಸಿಇಎಸ್ ಅಪ್ಲಿಕೇಶನ್​ಗಳನ್ನು ಅಳವಡಿಸಿಕೊಳ್ಳುವುದು ಮುಖ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಜೆಪಿ ಮಾರ್ಗನ್​ನ ಗ್ಲೋಬಲ್ ಬಾಂಡ್ ಇಂಡೆಕ್ಸ್​ನಲ್ಲಿ ಭಾರತವೂ ಸೇರ್ಪಡೆ; ಏನಿದರ ಅನುಕೂಲಗಳು?

ಹೊಸ ವ್ಯವಸ್ಥೆಯಿಂದ ಏನು ಪ್ರಯೋಜನ?

ಸದ್ಯ, ರಾಜ್ಯಗಳಲ್ಲಿ ಬೆಳೆ ಸಮೀಕ್ಷೆಯಲ್ಲಿ ಮ್ಯಾನುಯಲ್ ಆಗಿ ಮಾಡಲಾಗುತ್ತಿದೆ. ಡಾಟಾ ಸಂಗ್ರಹ, ಬೆಳೆ ಇಳುವರಿ ಅಂದಾಜು ಇತ್ಯಾದಿಯನ್ನು ಸಾಂಪ್ರದಾಯಿಕ ಪದ್ಧತಿಯಲ್ಲಿ ಮಾಡಲಾಗುತ್ತಿದೆ. ಇದರಿಂದ ಪ್ರಕ್ರಿಯೆ ವಿಳಂಬವಾಗುತ್ತಿದೆ. ಹೊಸ ವಿಧಾನದಲ್ಲಿ, ಜಿಪಿಎಸ್ ಚಾಲಿತ ಮೊಬೈಲ್ ಆ್ಯಪ್​ಗಳಿಂದ ಬೆಳೆ ಸಮೀಕ್ಷೆ ವಿವರ ಸಂಗ್ರಹಿಸಲಾಗುತ್ತದೆ. ಇದರ ದತ್ತಾಂಶವು ಸರ್ವರ್​ನಲ್ಲಿ ಸಂಗ್ರಹವಾಗುತ್ತದೆ. ಇದನ್ನು ರಿಯಲ್ ಟೈಮ್​ನಲ್ಲಿ ನೋಡಲು ಸಾಧ್ಯವಾಗುತ್ತದೆ. ಈ ಹೊಸ ವ್ಯವಸ್ಥೆ ಪಾರದರ್ಶಕವೂ ಆಗಿರುತ್ತದೆ.

ಇದನ್ನೂ ಓದಿ: ಕೆನಡಾದಲ್ಲಿದ್ದ ಮಹೀಂದ್ರ ಅಂಗಸಂಸ್ಥೆ ಬಂದ್; ದಿಢೀರ್ ಮುಚ್ಚಿದ ಪರಿಣಾಮ ಭಾರತೀಯ ಕಂಪನಿಗೆ ಸಾವಿರಾರು ಕೋಟಿ ನಷ್ಟ

ಜನರಲ್ ಕ್ರಾಮ್ ಎಸ್ಟಿಮೇಶನ್ ಸರ್ವೆನಲ್ಲಿ ಸಾಕಷ್ಟು ಫೀಚರ್​ಗಳಿದ್ದು. ಗ್ರಾಮವಾರು ಜಿಸಿಇಎಸ್ ಪ್ಲಾನ್, ಬೆಳೆ ತೂಕ,​ ಇತ್ಯಾದಿ ಸಮಗ್ರ ಬೆಳೆ ಇಳುವರಿ ಅಂದಾಜು ವರದಿ ನೀಡಬಹುದು. ಈ ಆ್ಯಪ್​ನಲ್ಲಿ ಜಿಯೋ ರೆಫರೆನ್ಸಿಂಗ್ ಫೀಚರ್ ಕೂಡ ಇದೆ. ಪ್ರಾಯೋಗಿಕ ಜಮೀನಿನ ಅಳತೆ ರಚಿಸುವ ಮತ್ತು ಅದರ ಹಾಗೂ ಬೆಳೆಗಳ ಫೋಟೋ ಅಪ್​ಲೋಡ್ ಮಾಡಲು ಅವಕಾಶ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್