AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸಲು 1300 ಕೋಟಿ ರೂಪಾಯಿ ಪಿಎಲ್​ಐ ಯೋಜನೆಗೆ ಕೇಂದ್ರ ಅನುಮೋದನೆ

ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಸಂಪುಟವು 1300 ಕೋಟಿ ರೂಪಾಯಿಯ ಪಿಎಲ್​ಐ ಯೋಜನೆಯನ್ನು ಅನುಮೋದಿಸಿದೆ.

ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸಲು 1300 ಕೋಟಿ ರೂಪಾಯಿ ಪಿಎಲ್​ಐ ಯೋಜನೆಗೆ ಕೇಂದ್ರ ಅನುಮೋದನೆ
ಕೇಂದ್ರ ಸಚಿವ ಅನುರಾಗ್ ಠಾಕೂರ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 15, 2021 | 6:47 PM

Share

ರುಪೇ ಡೆಬಿಟ್ ಕಾರ್ಡ್ ಮತ್ತು ಭೀಮ್ ಯುಪಿಐ ಮೂಲಕ ಸಣ್ಣ ಮೊತ್ತದ ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸಲು ಪ್ರೋತ್ಸಾಹ ನೀಡುವ ಯೋಜನೆಗೆ ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಡಿಸೆಂಬರ್ 15ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಯೋಜನೆಗೆ ಸುಮಾರು 1,300 ಕೋಟಿ ರೂಪಾಯಿ ವೆಚ್ಚ ಆಗಲಿದೆ ಎಂದು ತಿಳಿಸಿದ್ದಾರೆ. ಯೋಜನೆಯನ್ನು ಮತ್ತಷ್ಟು ವಿವರಿಸಿದ ಮಾಹಿತಿ ತಂತ್ರಜ್ಞಾನ ಸಚಿವರಾದ ಅಶ್ವಿನಿ ವೈಷ್ಣವ್, ವ್ಯಾಪಾರಿ ರಿಯಾಯಿತಿ ದರದ (MDR) ಭಾಗವಾಗಿ ವ್ಯಾಪಾರಿಗಳಿಗೆ ವ್ಯಕ್ತಿಗಳು ಮಾಡಿದ ಡಿಜಿಟಲ್ ಪಾವತಿಗಳ ಮೇಲೆ ವಿಧಿಸಲಾದ ವಹಿವಾಟು ಶುಲ್ಕವನ್ನು ಸರ್ಕಾರ ಮರುಪಾವತಿ ಮಾಡುತ್ತದೆ ಎಂದು ಹೇಳಿದ್ದಾರೆ.

“ಮುಂಬರುವ ಒಂದು ವರ್ಷದಲ್ಲಿ ಸರ್ಕಾರವು ಸುಮಾರು 1,300 ಕೋಟಿ ರೂಪಾಯಿ ಹೂಡಿಕೆ ಮಾಡಲಿದೆ. ಇದರಿಂದ ಹೆಚ್ಚು ಹೆಚ್ಚು ಜನರು ಡಿಜಿಟಲ್ ಪಾವತಿಯತ್ತ ಸಾಗುತ್ತಾರೆ,” ಎಂದು ವೈಷ್ಣವ್ ಹೇಳಿದ್ದಾರೆ. ನವೆಂಬರ್‌ನಲ್ಲಿ 7.56 ಲಕ್ಷ ಕೋಟಿ ಮೌಲ್ಯದ 423 ಕೋಟಿ ಡಿಜಿಟಲ್ ವಹಿವಾಟು ನಡೆದಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ. ಇನ್ನು ಇದರ ಜತೆಗೆ ಮೈಕ್ರೋಚಿಪ್‌ಗಳ ಕೊರತೆಯು ಕೈಗಾರಿಕಾ ಉತ್ಪಾದನೆಯನ್ನು ಘಾಸಿಗೊಳಿಸುವುದರಿಂದ ದೇಶವನ್ನು ಎಲೆಕ್ಟ್ರಾನಿಕ್ಸ್ ಹಬ್ ಮಾಡುವ ಮಹತ್ವಾಕಾಂಕ್ಷೆಯೊಂದಿಗೆ ಸೆಮಿ ಕಂಡಕ್ಟರ್​ಗಳಿಗೆ ಉತ್ಪಾದನಾ ಸಂಬಂಧಿತ ಪ್ರೋತ್ಸಾಹ ಯೋಜನೆ (ಪಿಎಲ್‌ಐ) ಅನ್ನು ಸಹ ಕೇಂದ್ರ ಸಂಪುಟ ಅನುಮೋದಿಸಿತು.

“ಸೆಮಿಕಂಡಕ್ಟರ್‌ಗಳ ಸಂಪೂರ್ಣ ಎಕೋ ಸಿಸ್ಟಮ್ ಸ್ಥಾಪಿಸುವ ಮತ್ತು ಡಿಸ್​ಪ್ಲೇ ತಯಾರಿಕೆಯ ಮಹತ್ವಾಕಾಂಕ್ಷೆ ಯೋಜನೆಯನ್ನು ಮಂಜೂರು ಮಾಡಲಾಗಿದೆ. ಈ ಯೋಜನೆಗೆ 6 ವರ್ಷಗಳಲ್ಲಿ 76,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗುವುದು,” ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಸಂಪುಟ ಅನುಮೋದಿಸಿದ ಮತ್ತೊಂದು ಯೋಜನೆಯು 2021-26ರ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅನುಷ್ಠಾನವಾಗಿದೆ. ಈ ಯೋಜನೆಯು 2.5 ಲಕ್ಷ ಪರಿಶಿಷ್ಟ ಜಾತಿ ಮತ್ತು 2 ಲಕ್ಷ ಪರಿಶಿಷ್ಟ ಪಂಗಡದ ರೈತರು ಸೇರಿದಂತೆ ಸುಮಾರು 22 ಲಕ್ಷ ರೈತರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: PLI Scheme: ಪಿಎಲ್​ಐ ಯೋಜನೆ ಅಡಿ ಸೆಮಿಕಂಡಕ್ಟರ್​ಗೆ 76 ಸಾವಿರ ಕೋಟಿ ರೂ. ಕೇಂದ್ರ ಸಂಪುಟ ಅನುಮೋದನೆ

Published On - 6:46 pm, Wed, 15 December 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ