AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fertilizer Subsidy: ಮುಂಗಾರು ಬೆಳೆಗೆ ಒಂದು ಲಕ್ಷ ಕೋಟಿ ರೂ ರಸಗೊಬ್ಬರ ಸಬ್ಸಿಡಿ: ಕೇಂದ್ರ ಸಮಿತಿ ಅನುಮೋದನೆ; 12ಕೋಟಿ ರೈತರಿಗೆ ಪ್ರಯೋಜನ

Central Cabinet Approves Fertilizer Subsidy: ಮುಂಗಾರು ಸೀಸನ್​ಗೆ 1.08 ಲಕ್ಷ ಕೋಟಿ ರೂ ರಸಗೊಬ್ಬರ ಸಬ್ಸಿಡಿಗೆ ಸಂಪುಟ ಅನುಮೋದನೆ ಕೊಟ್ಟಿರುವ ಸಂಗತಿಯನ್ನು ಕೇಂದ್ರ ರಸಗೊಬ್ಬರ ಸಚಿವ ಮನ್​ಸುಖ್ ಮಾಂಡವೀಯ ತಿಳಿಸಿದ್ದಾರೆ.

Fertilizer Subsidy: ಮುಂಗಾರು ಬೆಳೆಗೆ ಒಂದು ಲಕ್ಷ ಕೋಟಿ ರೂ ರಸಗೊಬ್ಬರ ಸಬ್ಸಿಡಿ: ಕೇಂದ್ರ ಸಮಿತಿ ಅನುಮೋದನೆ; 12ಕೋಟಿ ರೈತರಿಗೆ ಪ್ರಯೋಜನ
ರೈತ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:May 17, 2023 | 6:26 PM

ನವದೆಹಲಿ: ಈ ವರ್ಷದ ಮುಂಗಾರು ಬೆಳೆಗೆ (Kharif Crop) ರೈತರಿಗೆ ಸಹಾಯವಾಗಿ ಕೇಂದ್ರ ಸರ್ಕಾರ 1.08 ಲಕ್ಷ ಕೋಟಿ ರೂ ಮೊತ್ತದಷ್ಟು ರಸಗೊಬ್ಬರ ಸಬ್ಸಿಡಿ ಹಣ ಬಿಡುಗಡೆ ಮಾಡಲಿದೆ. ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (Economic Affairs Cabinet Committee) ಮೇ 17, ಮಂಗಳವಾರದಂದು ಅನುಮೋದನೆ ನೀಡಿರುವುದು ವರದಿಯಾಗಿದೆ. ಯೂರಿಯಾ ಮತ್ತು ಡಿಎಪಿ, ಎಂಒಪಿ ಮತ್ತಿತರ ರಸಗೊಬ್ಬರಗಳಿಗೆ (fertilizers) ಈ ಸಬ್ಸಿಡಿ ಸಿಗಲಿದೆ. ಮುಂಗಾರು ಸೀಸನ್​ಗೆ 1.08 ಲಕ್ಷ ಕೋಟಿ ರೂ ರಸಗೊಬ್ಬರ ಸಬ್ಸಿಡಿಗೆ ಸಂಪುಟ ಅನುಮೋದನೆ ಕೊಟ್ಟಿರುವ ಸಂಗತಿಯನ್ನು ಕೇಂದ್ರ ರಸಗೊಬ್ಬರ ಸಚಿವ ಮನ್​ಸುಖ್ ಮಾಂಡವೀಯ ತಿಳಿಸಿದ್ದಾರೆ. ಕೇಂದ್ರದ ಈ ಸಬ್ಸಿಡಿಯು 12 ಕೋಟಿ ರೈತರಿಗೆ ಉಪಯೋಗವಾಗುವ ನಿರೀಕ್ಷೆ ಇದೆ.

ಯೂರಿಯಾ ರಸಗೊಬ್ಬರಕ್ಕೆ 70,000 ಕೋಟಿ ರೂ, ಡೈ ಅಮೋನಿಯಂ ಫಾಸ್​ಫೇಟ್ (ಡಿಎಪಿ) ಹಾಗೂ ಇತರ ರಸಗೊಬ್ಬರಗಳಿಗೆ 38,000 ಕೋಟಿ ರೂ ಸಬ್ಸಿಡಿ ಸಿಗಲಿದೆ. ಈ ಹೊಸ ದರ ಏಪ್ರಿಲ್​ನಿಂದಲೇ ಅನ್ವಯ ಆಗಲಿದ್ದು, 2023 ಸೆಪ್ಟಂಬರ್​ವರೆಗೂ ಇರಲಿದೆ. ರೈತರಿಗೆ ರಸಗೊಬ್ಬರ ಬೆಲೆಯಲ್ಲಿ ಹೆಚ್ಚಳ ಆಗದಿರಲೆಂದು ಸಬ್ಸಿಡಿ ನೀಡಲಾಗುತ್ತಿದೆ.

ಇದನ್ನೂ ಓದಿWistron Workers: ಕರ್ನಾಟಕದಲ್ಲಿ ಟಾಟಾಗೆ ವಿಸ್ಟ್ರಾನ್ ಭೂತ; ಐಫೋನ್ ಫ್ಯಾಕ್ಟರಿಯಲ್ಲಿ ಮತ್ತೆ ಕಾರ್ಮಿಕರ ಪ್ರತಿಭಟನೆ ಶುರು

ಕೇಂದ್ರದ ಈ ರಸಗೊಬ್ಬರ ಸಬ್ಸಿಡಿಯಿಂದಾಗಿ ಬಜೆಟ್​ನಲ್ಲಿ ನಿಗದಿ ಮಾಡಲಾಗಿದ್ದ ಮೊತ್ತ ದಾಟಿ ಹೋಗಲಾಗಿದೆ. ಕಳೆದ ಬಜೆಟ್​ನಲ್ಲಿ ರಸಗೊಬ್ಬರ ಸಬ್ಸಿಡಿಗೆ 1.75 ಲಕ್ಷ ಕೋಟಿ ರೂ ಔಟ್​ಲೇ ಹಾಕಲಾಗಿತ್ತು. 2023-24ರ ಹಣಕಾಸ ವರ್ಷದಲ್ಲಿ ಒಟ್ಟಾರೆ ಫರ್ಟಿಲೈಸರ್ ಸಬ್ಸಿಡಿ 2 ಲಕ್ಷ ಕೋಟಿ ರೂ ಮುಟ್ಟುವ ನಿರೀಕ್ಷೆ ಇದೆ. ಹಾಗೆಯೇ, ಅಂತಾರಾಷ್ಟ್ರೀಯ ದರಗಳು ಕಡಿಮೆಗೊಂಡಿರುವುದರಿಂದ ಎನ್​ಪಿಕೆ ಪೋಷಕಾಂಶ ಆಧಾರಿತ ರಸಗೊಬ್ಬರ ಸಬ್ಸಿಡಿಯನ್ನು ಕಡಿಮೆ ಮಾಡಲಾಗಿದೆ.

ಇದನ್ನೂ ಓದಿSubsidy Cut: ಅತ್ತ ರೈತ, ಇತ್ತ ಐಟಿ; ರಸಗೊಬ್ಬರ ಸಬ್ಸಿಡಿಗೆ ಖೋತಾ; ಐಟಿ ಹಾರ್ಡ್​ವೇರ್​ಗೆ ಜಿಗಿತ; ಕೇಂದ್ರ ಸಂಪುಟದಿಂದ ಸದ್ಯದಲ್ಲೇ ಅನುಮೋದನೆ?

ಸದ್ಯ ಒಂದು ಚೀಲ ಯೂರಿಯಾ ಗೊಬ್ಬರದ ಬೆಲೆ 276 ರೂ ಇದೆ. ಡೈ ಅಮೋನಿಯಮ್ ಫಾಸ್​ಫೇಟ್ ಅಥವಾ ಡಿಎಪಿ ರಸಗೊಬ್ಬರದ ಬೆಲೆ ಒಂದು ಚೀಲಕ್ಕೆ 1,350 ರೂ ಇದೆ. ರೈತರಿಗೆ ಈಗ ಬಹುತೇಕ ಇದೇ ಬೆಲೆಗೆ ರಸಗೊಬ್ಬರ ಸಿಗುವ ಸಾಧ್ಯತೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:22 pm, Wed, 17 May 23

ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು