AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Onion Export Ban: ಮಾರ್ಚ್​ವರೆಗೂ ಈರುಳ್ಳಿ ರಫ್ತು ನಿಷೇಧ; ಕೇಂದ್ರ ಸರ್ಕಾರದ ಕ್ರಮಕ್ಕೆ ಮಹಾರಾಷ್ಟ್ರದಲ್ಲಿ ವಿರೋಧ

Protection Measure To Control Onion Price Hike: ಈರುಳ್ಳಿ ಬೆಲೆ ಹೆಚ್ಚಳ ನಿಯಂತ್ರಿಸಲು ಕೇಂದ್ರ ಸರ್ಕಾರ ಈರುಳ್ಳಿ ರಫ್ತನ್ನು ಮಾರ್ಚ್ ತಿಂಗಳವರೆಗೂ ನಿಷೇಧಿಸಿದೆ. ಅಕ್ಟೋಬರ್ 29ರಿಂದ ಸರ್ಕಾರ ಈರುಳ್ಳಿ ರಫ್ತಿಗೆ ಕನಿಷ್ಠ ಬೆಲೆಯಾಗಿ ಮೆಟ್ರಿಕ್ ಟನ್​ಗೆ 800 ಡಾಲರ್ ನಿಗದಿ ಮಾಡಿತ್ತು. ಸರ್ಕಾರ ಈರುಳ್ಳಿ ರಫ್ತನ್ನು ನಿಷೇಧಿಸಿರುವ ಕ್ರಮಕ್ಕೆ ಮಹಾರಾಷ್ಟ್ರದಲ್ಲಿ ವಿರೋಧ ವ್ಯಕ್ತವಾಗಿದೆ.

Onion Export Ban: ಮಾರ್ಚ್​ವರೆಗೂ ಈರುಳ್ಳಿ ರಫ್ತು ನಿಷೇಧ; ಕೇಂದ್ರ ಸರ್ಕಾರದ ಕ್ರಮಕ್ಕೆ ಮಹಾರಾಷ್ಟ್ರದಲ್ಲಿ ವಿರೋಧ
ಈರುಳ್ಳಿ ರಫ್ತು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 08, 2023 | 1:04 PM

Share

ನವದೆಹಲಿ, ಡಿಸೆಂಬರ್ 8: ಈರುಳ್ಳಿ ಬೆಲೆ ಹೆಚ್ಚಳವಾಗುವುದನ್ನು ತಡೆಯಲು ಮತ್ತು ಈರುಳ್ಳಿ ಲಭ್ಯತೆ ಹೆಚ್ಚಿಸಲು ಸರ್ಕಾರ ರಫ್ತು ನಿಷೇಧ ಕ್ರಮ (Onion export ban) ಕೈಗೊಂಡಿದೆ. 2024ರ ಮಾರ್ಚ್ ತಿಂಗಳವರೆಗೂ ಈರುಳ್ಳಿ ರಫ್ತನ್ನು ಸರ್ಕಾರ ನಿಷೇಧಿಸಿದೆ. ‘ಈರುಳ್ಳಿ ರಫ್ತು ನೀತಿಯನ್ನು ಬದಲಿಸಲಾಗಿದೆ. ಮುಕ್ತವಾಗಿದ್ದ ಈರುಳ್ಳಿ ರಫ್ತನ್ನು 2024ರ ಮಾರ್ಚ್ 31ರವರೆಗೂ ನಿಷೇಧ ಎಂದು ಬದಲಿಸಲಾಗಿದೆ,’ ಎಂದು ವಿದೇಶೀ ವ್ಯಾಪಾರ ಮಹಾ ನಿರ್ದೇಶನಲಯ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅಕ್ಟೋಬರ್ ತಿಂಗಳಲ್ಲಿ ಈರುಳ್ಳಿ ಬೆಲೆ ಎರಡು ಪಟ್ಟು ಹೆಚ್ಚಾಗಿತ್ತು. ರಾಷ್ಟ್ರರಾಜಧಾನಿಯಲ್ಲಿ ಅಕ್ಟೋಬರ್ 25ರಂದು ಕಿಲೋಗೆ 40 ರೂ ಇದ್ದ ಈರುಳ್ಳಿ ಬೆಲೆ ನಾಲ್ಕು ದಿನದ ಅಂತರದಲ್ಲಿ 80 ರೂ ಆಗಿತ್ತು. ಅದಾದ ಬಳಿಕ ಈರುಳ್ಳಿ ರಫ್ತಿನ ಮೇಲೆ ಸರ್ಕಾರ ನಿರ್ಬಂಧ ಹೇರಿತ್ತು. ಇದೀಗ ನಿಷೇಧವನ್ನೇ ಜಾರಿಗೆ ತರಲಾಗಿದೆ.

ಅಕ್ಟೋಬರ್ 29ರಿಂದ ಈರುಳ್ಳಿ ರಫ್ತಿಗೆ ಕನಿಷ್ಠ ಬೆಲೆ ಹೆಚ್ಚಳ

ಈರುಳ್ಳಿ ಬೆಲೆ ಅಕ್ಟೋಬರ್ ಕೊನೆಯ ವಾರದಲ್ಲಿ ದಿಢೀರನೇ ಹೆಚ್ಚಾಗತೊಡಗಿದ್ದಾಗ ಸರ್ಕಾರ ರಫ್ತನ್ನು ನಿಯಂತ್ರಿಸಲು ಕೆಲ ನಿರ್ಬಂಧಗಳನ್ನು ಹಾಕಿತು. ಅದರಂತೆ ಈರುಳ್ಳಿಯ ಕನಿಷ್ಠ ರಫ್ತು ಬೆಲೆಯನ್ನು (ಎಂಇಪಿ) ಪ್ರತೀ ಮೆಟ್ರಿಕ್ ಟನ್​ಗೆ 800 ಡಾಲರ್​ಗೆ ಏರಿಸಿತು. ಅಂದರೆ, ಮೆಟ್ರಿಕ್ ಟನ್ ಈರುಳ್ಳಿಯನ್ನು ಇದಕ್ಕಿಂತ ಕಡಿಮೆ ಬೆಲೆಗೆ ರಫ್ತು ಮಾಡುವಂತಿರಲಿಲ್ಲ. ಕಿಲೋಗೆ 67 ರೂಗಿಂತ ಕಡಿಮೆ ಬೆಲೆಗೆ ಈರುಳ್ಳಿ ರಫ್ತು ಮಾಡುವಂತಿರಲಿಲ್ಲ. ದೇಶೀಯವಾಗಿ ಈರುಳ್ಳಿ ಲಭ್ಯತೆ ಹೆಚ್ಚಿಸಲು ಆ ಕ್ರಮ ಪಾಲಿಸಲಾಗಿತ್ತು.

ಇದನ್ನೂ ಓದಿ: 2023-24ರಲ್ಲಿ ರೀಟೇಲ್ ಹಣದುಬ್ಬರ ಶೇ. 5.4 ಸಾಧ್ಯತೆ; ಹೆಡ್​ಲೈನ್ ಇನ್​ಫ್ಲೇಶನ್ ಬಗ್ಗೆ ಆರ್​​ಬಿಐ ಸಮಾಧಾನ

ಇದೀಗ ಈರುಳ್ಳಿಯ ರಫ್ತನ್ನೇ ನಿಷೇಧಿಸಿದೆ ಸರ್ಕಾರ. ಹಣದುಬ್ಬರ ನಿರೀಕ್ಷಿತ ವೇಗದಲ್ಲಿ ಇಳಿಕೆ ಆಗದೇ ಇರುವುದು ಸರ್ಕಾರಕ್ಕೆ ತಲೆನೋವಾಗಿದೆ. ಆಹಾರ ವಸ್ತುಗಳ ಬೆಲೆ ಏರಿಕೆಯು ಹಣದುಬ್ಬರ ಇಳಿಕೆಗೆ ತಡೆಯಾಗಿದೆ. ಈ ಕಾರಣಕ್ಕೆ ಸರ್ಕಾರ ಈರುಳ್ಳಿ ಬೆಲೆ ಏರಿಕೆ ನಿಯಂತ್ರಿಸಲು ರಫ್ತು ನಿಷೇಧ ಕೈಗೊಂಡಿದೆ.

ಮಹಾರಾಷ್ಟ್ರದ ಈರುಳ್ಳಿ ಬೆಳೆಗಾರರಿಂದ ವಿರೋಧ

ಸರ್ಕಾರ ಈರುಳ್ಳಿ ರಫ್ತನ್ನು ನಿಷೇಧಿಸುವ ಕ್ರಮ ಕೈಗೊಂಡಿರುವುದಕ್ಕೆ ಮಹಾರಾಷ್ಟ್ರದಲ್ಲಿ ವಿರೋಧ ವ್ಯಕ್ತವಾಗಿದೆ. ಅಲ್ಲಿನ ರೈತರು ಮತ್ತು ವರ್ತಕರು ಸರಕಾರದ ಈ ಕ್ರಮವನ್ನು ಪ್ರಶ್ನಿಸಿ ಪ್ರತಿಭಟನೆ ನಡೆಸಿರುವ ಸುದ್ದಿ ಬಂದಿದೆ. ಭಾರತದಲ್ಲಿ ಅತಿಹೆಚ್ಚು ಈರುಳ್ಳಿ ಬೆಳೆಯುವ ರಾಜ್ಯ ಮಹಾರಾಷ್ಟ್ರ. ರಫ್ತು ಮೂಲಕ ಸಾಕಷ್ಟು ಲಾಭ ಮಾಡಿಕೊಳ್ಳುತ್ತಿದ್ದ ರೈತರಿಗೆ ಮತ್ತು ವರ್ತಕರಿಗೆ ಈಗ ನಿಷೇಧ ಕ್ರಮ ಇರಿಸು ಮುರುಸು ತಂದಿದೆ.

ಇದನ್ನೂ ಓದಿ: ಬೆಂಗಳೂರು ಸಮೀಪ ದೇಶದ ಅತಿದೊಡ್ಡ ಐಫೋನ್ ಘಟಕ; ಹೊಸೂರಿನಲ್ಲಿ ಟಾಟಾ ಯೋಜನೆ; 50,000 ಮಂದಿಗೆ ಉದ್ಯೋಗ

ಅಕ್ಟೋಬರ್​ನಲ್ಲಿ ಈರುಳ್ಳಿ ಬೆಲೆ ಏರಿಕೆಗೂ ಮುನ್ನ ಟೊಮೆಟೋ ಬೆಲೆ ದೇಶಾದ್ಯಂತ ದುಬಾರಿಯಾಗಿತ್ತು. ಕಿಲೋಗೆ 200-300 ರೂವರೆಗೂ ಟೊಮೆಟೋ ಬೆಲೆ ಏರಿಹೋಗಿತ್ತು. ಅದನ್ನು ನಿಯಂತ್ರಿಸುವಷ್ಟರಲ್ಲಿ ಸರ್ಕಾರಕ್ಕೆ ಸಾಕುಸಾಕಾಗಿ ಹೋಗಿತ್ತು. ಭಾರತೀಯ ಅಡುಗೆಗಳಲ್ಲಿ ಈರುಳ್ಳಿ ಮತ್ತು ಟೊಮೆಟೋ ಬಹಳ ಸಾಮಾನ್ಯವಾಗಿ ಬಳಕೆ ಆಗುತ್ತದಾದ್ದರಿಂದ ಇವೆರಡರ ಬೆಲೆ ಏರಿಕೆ ಪರಿಣಾಮವಾಗಿ ಜನಸಾಮಾನ್ಯರ ಅಡುಗೆ ವೆಚ್ಚವೂ ಹೆಚ್ಚಾಗಿದ್ದುದು ಇತ್ತೀಚಿನ ಕ್ರಿಸಿಲ್ ರಿಸರ್ಚ್ ವರದಿಯಿಂದ ತಿಳಿದುಬಂದಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು