Credit Card Shocker: ಭಾರತದ ಹೊರಗೆ ಕ್ರೆಡಿಟ್ ಕಾರ್ಡ್ ಬಳಸಿದರೆ ಶೇ. 20ರಷ್ಟು ಟಿಸಿಎಸ್; ಸರ್ಕಾರದಿಂದ ಅಧಿಸೂಚನೆ; ಏನಿದು ಟಿಸಿಎಸ್?

20% TCS For International Credit Card Usage: ಭಾರತೀಯರು ವಿದೇಶಗಳಿಗೆ ಹೋಗಿ ಅಲ್ಲಿ ಅಂತಾರಾಷ್ಟ್ರೀಯ ಕ್ರೆಡಿಟ್ ಕಾರ್ಡ್ ಬಳಸಿ ಮಾಡುವ ವೆಚ್ಚಕ್ಕೆ ವಿಧಿಸಲಾಗುವ ಟಿಸಿಎಸ್ ಅನ್ನು ಶೇ. 5ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಇದು ವೈದ್ಯಕೀಯ ಮತ್ತು ಶಿಕ್ಷಣ ವೆಚ್ಚಕ್ಕೆ ಅನ್ವಯ ಅಗುವುದಿಲ್ಲ.

Credit Card Shocker: ಭಾರತದ ಹೊರಗೆ ಕ್ರೆಡಿಟ್ ಕಾರ್ಡ್ ಬಳಸಿದರೆ ಶೇ. 20ರಷ್ಟು ಟಿಸಿಎಸ್; ಸರ್ಕಾರದಿಂದ ಅಧಿಸೂಚನೆ; ಏನಿದು ಟಿಸಿಎಸ್?
ಅಂತಾರಾಷ್ಟ್ರೀಯ ಕ್ರೆಡಿಟ್ ಕಾರ್ಡ್
Follow us
|

Updated on: May 18, 2023 | 1:08 PM

ನವದೆಹಲಿ: ಇಂಟರ್ನ್ಯಾಷನಲ್ ಕ್ರೆಡಿಟ್ ಕಾರ್ಡ್​ಗಳಿಂದ ಮಾಡಲಾಗುವ ವೆಚ್ಚವನ್ನು ಕೇಂದ್ರ ಸರ್ಕಾರ ಎಲ್​ಆರ್​ಎಸ್ ಸ್ಕೀಮ್ (LRS- Liberalized Remittance Scheme) ವ್ಯಾಪ್ತಿಗೆ ತರಲಾಗುವಂತೆ ಫೆಮಾ ನಿಯಮಗಳಲ್ಲಿ ಬದಲಾವಣೆ ಮಾಡಿದೆ. ಇದರ ಪರಿಣಾಮವಾಗಿ ಇಂಟರ್ನ್ಯಾಷನಲ್ ಕ್ರೆಡಿಟ್ ಕಾರ್ಡ್ ಮೂಲಕ ಮಾಡುವ ವೆಚ್ಚಕ್ಕೆ ಶೇ. 20ರಷ್ಟು ಟಿಸಿಎಸ್ ವಿಧಿಸಲು ಸಾಧ್ಯವಾಗುತ್ತದೆ. ಟಿಸಿಎಸ್ ಎಂದರೆ ಟ್ಯಾಕ್ಸ್ ಕಲೆಕ್ಟೆಡ್ ಅಟ್ ಸೋರ್ಸ್. ಅಂದರೆ ವಹಿವಾಟುಗಳನ್ನು ನಡೆಸುವಾಗಲೇ ತೆರಿಗೆಯನ್ನು ಮುರಿದುಕೊಳ್ಳಲಾಗುತ್ತದೆ. ಭಾರತೀಯರು ವಿದೇಶಗಳಿಗೆ ಹೋಗಿ ಮಾಡುವ ವೆಚ್ಚಕ್ಕೆ ಶೇ. 20ರಷ್ಟು ತೆರಿಗೆ ಬೀಳುತ್ತದೆ. ಆರ್​ಬಿಐ ಜೊತೆ ಸಮಾಲೋಚನೆ ನಡೆಸಿ ಕೇಂದ್ರ ಹಣಕಾಸು ಸಚಿವಾಲಯ ಈ ನಿರ್ಧಾರ ಕೈಗೊಂಡು ಮೊನ್ನೆ ಅಧಿಸೂಚನೆ ಹೊರಡಿಸಿದೆ. ಇದೇ ವೇಳೆ, ಐಟಿ ರಿಟರ್ನ್ ಫೈಲ್ ಮಾಡುವಾಗ ಈ ತೆರಿಗೆ ಮೊತ್ತದ ರೀಫಂಡ್​ಗೆ ಬೇಕಾದರೆ ಮನವಿ ಸಲ್ಲಿಸುವ ಅವಕಾಶವಂತೂ ಇರುತ್ತದೆ. ಜುಲೈ 1ರಿಂದ ಈ ಹೊಸ ನಿಯಮ ಅನುಷ್ಠಾನಕ್ಕೆ ಬರಲಿದೆ.

ವಿದೇಶಗಳಲ್ಲಿ ಕ್ರೆಡಿಟ್ ಕಾರ್ಡ್ ಬಳಸಿ ಮಾಡಲಾಗುವ ವೆಚ್ಚಕ್ಕೆ ಮಾತ್ರ ಈ ಟಿಸಿಎಸ್ ಶುಲ್ಕ ಇರುತ್ತದೆ. ಇಂಟರ್ನ್ಯಾಷನಲ್ ಕ್ರೆಡಿಟ್ ಕಾರ್ಡ್ ಬಳಸಿ ಭಾರತದಲ್ಲಿ ವಿದೇಶೀ ಸರಕು ಮತ್ತು ಸೇವೆಗಳನ್ನು ಖರೀದಿಸಿದರೆ ಈ ನಿಯಮ ಅನ್ವಯ ಆಗುವುದಿಲ್ಲ. ಹಾಗೆಯೇ ವಿದೇಶಗಳಲ್ಲಿ ವೈದ್ಯಕೀಯ ಮತ್ತು ಶಿಕ್ಷಣಕ್ಕಾಗಿ ಮಾಡುವ ವೆಚ್ಚಕ್ಕೂ ಟಿಸಿಎಸ್ ಕಟ್ಟಬೇಕಿಲ್ಲ.

ಇದನ್ನೂ ಓದಿSP Hinduja Passes Away: ಹಿಂದೂಜಾ ಗ್ರೂಪ್ ಛೇರ್ಮನ್ ಎಸ್.ಪಿ. ಹಿಂದೂಜಾ ನಿಧನ; 109 ವರ್ಷದ ಹಳೆಯ ಕಂಪನಿಯ ನೊಗ ಹೊತ್ತು ಮುನ್ನಡೆಸಿದ್ದ ಧೀಮಂತ ಉದ್ಯಮಿ

ಈ ಹಿಂದೆ ಇದ್ದ ಫಾರೀನ್ ಎಕ್ಸ್​ಚೇಂಜ್ ಮ್ಯಾನೇಜ್ಮೆಂಟ್ ರೂಲ್ಸ್​ನ ರೂಲ್ ನಂಬರ್ 7 ಇಂಟರ್ನ್ಯಾಷನಲ್ ಕ್ರೆಡಿಟ್ ಕಾರ್ಡ್​ಗಳಿಂದ ಮಾಡಲಾಗುವು ವೆಚ್ಚವನ್ನು ಎಲ್​ಆರ್​ಎಸ್ ವ್ಯಾಪ್ತಿಯಿಂದ ಹೊರಗಿಡಲಾಗಿತ್ತು. ಕೇಂದ್ರ ಸರ್ಕಾರ ಈಗ ಈ ನಿಯಮದಲ್ಲಿ ತಿದ್ದುಪಡಿಸಿ ಮಾಡಿ ವಿದೇಶಗಳಲ್ಲಿ ಇಂಟರ್ನ್ಯಾಷನಲ್ ಕ್ರೆಡಿಟ್ ಕಾರ್ಡ್ ಮಾಡಲಾಗುವ ವೆಚ್ಚವನ್ನು ಎಲ್​ಆರ್​ಎಸ್ ವ್ಯಾಪ್ತಿಗೆ ತಂದಿದೆ. ದೇಶೀಯ ಪ್ರವಾಸೋದ್ಯಮದಿಂದ ಈ ಹೊಸ ನಿಯಮಕ್ಕಾಗಿ ಬೇಡಿಕೆ ಬಂದಿದ್ದರಿಂದ ಈ ಬದಲಾವಣೆ ಮಾಡಲಾಗಿರುವುದು ತಿಳಿದುಬಂದಿದೆ.

ವಿದೇಶ ಪ್ರವಾಸಗಳಿಗೆ ಹೋಗಿ ದಂಡಿ ಖರ್ಚು ಮಾಡುತ್ತಿರುವ ಭಾರತೀಯರು

ಇಂಟರ್ನ್ಯಾಷನಲ್ ಕ್ರೆಡಿಟ್ ಕಾರ್ಡ್ ವೆಚ್ಚಕ್ಕೆ ಶೇ. 20ರಷ್ಟು ಟಿಸಿಎಸ್ ವಿಧಿಸಬೇಕೆನ್ನುವ ಬೇಡಿಕೆ ಬಂದಿದ್ದು ಭಾರತೀಯ ಪ್ರವಾಸೋದ್ಯಮದಿಂದ ಎಂಬುದು ಕುತೂಹಲ ಮೂಡಿಸುತ್ತದೆ. ಇದಕ್ಕೆ ಕಾರಣವೂ ಉಂಟು. ಭಾರತೀಯರು ವಿದೇಶ ಪ್ರವಾಸಕ್ಕೆ ಹೋಗಿ ಖರ್ಚು ಮಾಡುವುದು ಹೆಚ್ಚಾಗಿದೆಯಂತೆ. 2022-23ರ ಹಣಕಾಸು ವರ್ಷದಲ್ಲಿ ವಿದೇಶೀ ಪ್ರವಾಸಗಳಿಗೆ ಭಾರತೀಯರು 12.51 ಬಿಲಿಯನ್ ಡಾಲರ್​ನಷ್ಟು ಹಣ ಖರ್ಚು ಮಾಡಿದ್ದಾರಂತೆ. ಅಂದರೆ, ಸುಮಾರು 1 ಲಕ್ಷ ಕೋಟಿ ರೂಪಾಯಿಯಷ್ಟು ಹಣವನ್ನು ಭಾರತೀಯರು ವಿದೇಶಗಳಿಗೆ ಹೋಗಿ ವೆಚ್ಚ ಮಾಡಿದ್ದಾರೆ.

ಇದನ್ನೂ ಓದಿFertilizer Subsidy: ಮುಂಗಾರು ಬೆಳೆಗೆ ಒಂದು ಲಕ್ಷ ಕೋಟಿ ರೂ ರಸಗೊಬ್ಬರ ಸಬ್ಸಿಡಿ: ಕೇಂದ್ರ ಸಮಿತಿ ಅನುಮೋದನೆ; 12ಕೋಟಿ ರೈತರಿಗೆ ಪ್ರಯೋಜನ

ಟಿಸಿಎಸ್ ಹೇಗೆ ವಿಧಿಸಲಾಗುತ್ತದೆ?

ವಿದೇಶಗಳಲ್ಲಿ ಭಾರತೀಯರು ಮಾಡುವ ವೆಚ್ಚದ ಮೇಲೆ ಕಣ್ಗಾವಲು ಇಡಲು ಎಲ್​ಆರ್​ಎಸ್ ಅನ್ವಯ ಮಾಡಲಾಗಿದೆ. ಈವರೆಗೂ ಇಂಥ ಅಂತಾರಾಷ್ಟ್ರೀಯ ವೆಚ್ಚಕ್ಕೆ ಶೇ. 5ರಷ್ಟು ಮಾತ್ರವೇ ಟಿಸಿಎಸ್ ಇತ್ತು. ಈಗ ಅದನ್ನು ಶೇ. 20ಕ್ಕೆ ಏರಿಸಲಾಗಿದೆ. ಜೂನ್ 30ರವರೆಗೂ ಶೇ. 5ರಷ್ಟು ಮಾತ್ರವೇ ಟಿಸಿಎಸ್ ಇರುತ್ತದೆ.

ಹೊರ ದೇಶಗಳಿಗೆ ಹೋಗಿ ಅಲ್ಲಿ ಭಾರತೀಯರು ಕ್ರೆಡಿಟ್ ಕಾರ್ಡ್ ಬಳಸಿ ಪೇಮೆಂಟ್ ಮಾಡಿದಾಗ ಕ್ರೆಡಿಟ್ ಕಾರ್ಡ್​ನ ಬ್ಯಾಂಕ್ ಈ ಟಿಸಿಎಸ್ ವಿಧಿಸುತ್ತದೆ. ಅಂದರೆ ಟಿಸಿಎಸ್ ಶುಲ್ಕವನ್ನು ವಹಿವಾಟಿನ ವೇಳೆಯೇ ಕಟ್ಟಬೇಕಾಗುತ್ತದೆ. ಈ ಶುಲ್ಕವನ್ನು ಬ್ಯಾಂಕ್​ನವರು ಕೇಂದ್ರಕ್ಕೆ ರವಾನಿಸಬೇಕಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!