AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲ್ ಇಂಡಿಯಾ ಮತ್ತು ಇತರ ಪಿಎಸ್​ಯುಗಳಿಂದ ಕೇಂದ್ರ ಸರ್ಕಾರಕ್ಕೆ ಬಂಪರ್ ಡಿವಿಡೆಂಡ್

ಕೇಂದ್ರ ಸರ್ಕಾರವು ಕೋಲ್ ಇಂಡಿಯಾ ಸೇರಿದಂತೆ ಇತರ ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳಿಂದ ಭಾರೀ ಪ್ರಮಾಣದ ಡಿವಿಡೆಂಡ್ ಪಡೆದುಕೊಂಡಿದೆ.

ಕೋಲ್ ಇಂಡಿಯಾ ಮತ್ತು ಇತರ ಪಿಎಸ್​ಯುಗಳಿಂದ ಕೇಂದ್ರ ಸರ್ಕಾರಕ್ಕೆ ಬಂಪರ್ ಡಿವಿಡೆಂಡ್
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Dec 24, 2021 | 11:13 PM

Share

ಕೇಂದ್ರ ಸರ್ಕಾರವು ಕೋಲ್ ಇಂಡಿಯಾದಿಂದ ಲಾಭಾಂಶದ ಭಾಗವಾಗಿ ರೂ. 3,668 ಕೋಟಿಗಳನ್ನು ಪಡೆದುಕೊಂಡಿದೆ. ಇದುವರೆಗೆ FY22ಕ್ಕಾಗಿ ಸಾರ್ವಜನಿಕ ವಲಯದ ಉದ್ಯಮಗಳ ಲಾಭಾಂಶದಿಂದ ಒಟ್ಟು ಆದಾಯ ರೂ. 33,479 ಕೋಟಿ ತೆಗೆದುಕೊಂಡಿದೆ. ಇನ್ನು ಟೆಲಿಕಮ್ಯುನಿಕೇಷನ್ಸ್ ಇಂಡಿಯಾ ಲಿಮಿಟೆಡ್, IRCON, RITES ಮತ್ತು NIIFLನಿಂದ ಲಾಭಾಂಶದ ಭಾಗವಾಗಿ ರೂ. 21ಕೋಟಿ, ರೂ. 48 ಕೋಟಿ, ರೂ. 69 ಕೋಟಿ ಮತ್ತು ರೂ. 23 ಕೋಟಿಗಳನ್ನು ಪಡೆದುಕೊಂಡಿದೆ. “ಸರ್ಕಾರವು ಕೋಲ್ ಇಂಡಿಯಾ ಲಿಮಿಟೆಡ್‌ನಿಂದ ಸುಮಾರು ರೂ. 3668 ಕೋಟಿ ಮತ್ತು ಟೆಲಿಕಮ್ಯುನಿಕೇಷನ್ಸ್ ಇಂಡಿಯಾ ಲಿಮಿಟೆಡ್‌ನಿಂದ ರೂ. 21 ಕೋಟಿಯನ್ನು ಲಾಭಾಂಶದ ಭಾಗವಾಗಿ ಸ್ವೀಕರಿಸಿದೆ,” ಎಂದು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆ (ಡಿಐಪಿಎಎಂ) ಕಾರ್ಯದರ್ಶಿ ತುಹಿನ್ ಕಾಂತಾ ಪಾಂಡೆ ಶುಕ್ರವಾರ ಸಂಜೆ ಟ್ವಿಟರ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ಸರ್ಕಾರವು ಕ್ರಮವಾಗಿ ರೂ. 48 ಕೋಟಿ, ರೂ. 69 ಕೋಟಿ ಮತ್ತು ರೂ. 23 ಕೋಟಿಗಳನ್ನು IRCON, RITES ಮತ್ತು NIIFLನಿಂದ ಲಾಭಾಂಶದ ಭಾಗವಾಗಿ ಸ್ವೀಕರಿಸಿದೆ,” ಎಂದು ಅವರು ಹೇಳಿದ್ದಾರೆ. ಸರ್ಕಾರವು ಬಂಡವಾಳ ಹಿಂತೆಗೆತ ಮತ್ತು ಲಾಭಾಂಶದಿಂದ ಇದುವರೆಗೆ ಒಟ್ಟು ರೂ. 42,809.48 ಕೋಟಿಗಳನ್ನು ಪಡೆದಿದೆ. ಇದರಲ್ಲಿ ಕೇವಲ ರೂ. 9,329.9 ಕೋಟಿ ಮಾತ್ರ ಆಯಕಟ್ಟಿನ ಮತ್ತು ಕಾರ್ಯತಂತ್ರವಲ್ಲದ ಮಾರಾಟದಿಂದ ಬಂದಿದೆ. ಜೊತೆಗೆ ಎನ್​ಎಂಡಿಸಿ, ಹುಡ್ಕೋ ಮತ್ತು ಹಿಂದೂಸ್ತಾನ್ ಕಾಪರ್‌ ಲಿಮಿಟೆಡ್​ನ ಒಎಫ್​ಎಸ್ ಮತ್ತು ಉದ್ಯೋಗಿ OFS ಮಾರ್ಗವಾಗಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ 2022ರ ಹೂಡಿಕೆಯಿಂದ ರೂ. 1.75 ಲಕ್ಷ ಕೋಟಿಗಳ ಗುರಿಯನ್ನು ಸರ್ಕಾರ ಹೊಂದಿದೆ. ಇದು ಬಿಪಿಸಿಎಲ್, ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ, ಬಿಇಎಂಎಲ್​ ಮತ್ತು ಪವನ್ ಹನ್ಸ್‌ನಂತಹ ಪಿಎಸ್​ಯುಗಳ ಕಾರ್ಯತಂತ್ರದ ಬಂಡವಾಳ ಹಿಂತೆಗೆದುಕೊಳ್ಳುವಿಕೆಯಿಂದ ಹೆಚ್ಚಿನ ಆದಾಯವನ್ನು ನಿರೀಕ್ಷಿಸುತ್ತದೆ.

ಇದನ್ನೂ ಓದಿ: Government Asset Sale: ಸರ್ಕಾರದಿಂದ ಎಂಟಿಎನ್ಎಲ್​, ಬಿಎಸ್​ಎನ್​ಎಲ್ ರಿಯಲ್ ಎಸ್ಟೇಟ್ ಆಸ್ತಿ 1100 ಕೋಟಿಗೆ ಮಾರಾಟ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?