AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಸಾಲಗಳ ಬಡ್ಡಿಗೆ ಸಬ್ಸಿಡಿ; ಕೇಂದ್ರದಿಂದ 60,000 ಕೋಟಿ ರೂ ಮೊತ್ತದ ಯೋಜನೆ ಶೀಘ್ರದಲ್ಲೇ?

Home Loan Interest Subsidy: ಸ್ವಾತಂತ್ರ್ಯೋತ್ಸವ ಭಾಷದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ನಗರ ಪ್ರದೇಶಗಳಲ್ಲಿ ಬಡವರು ಮತ್ತು ಮಧ್ಯಮವರ್ಗದವರ ಸ್ವಂತ ಮನೆ ಕನಸು ನನಸು ಮಾಡಲು ಸಹಾಯವಾಗುವ ಯೋಜನೆಯನ್ನು ಘೋಷಿಸಿದ್ದರು. ಆ ಯೋಜನೆಯಲ್ಲಿ ಕಡಿಮೆ ಬಡ್ಡಿದರದಲ್ಲಿ ಗೃಹಸಾಲ ಕೊಡುವುದೂ ಸೇರಿದೆ. ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದ್ದು, ಸಬ್ಸಿಡಿ ದರದಲ್ಲಿ ಸುಮಾರು 60,000 ಕೋಟಿ ರೂ ಮೊತ್ತದ ಗೃಹಸಾಲಗಳನ್ನು ಒದಗಿಸುವ ಇರಾದೆಯಲ್ಲಿ ಸರ್ಕಾರ ಇದೆ.

ಗೃಹಸಾಲಗಳ ಬಡ್ಡಿಗೆ ಸಬ್ಸಿಡಿ; ಕೇಂದ್ರದಿಂದ 60,000 ಕೋಟಿ ರೂ ಮೊತ್ತದ ಯೋಜನೆ ಶೀಘ್ರದಲ್ಲೇ?
ಗೃಹಸಾಲ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 25, 2023 | 6:10 PM

Share

ನವದೆಹಲಿ, ಸೆಪ್ಟೆಂಬರ್ 25: ಮುಂದಿನ ಐದು ವರ್ಷದಲ್ಲಿ ನಗರ ಪ್ರದೇಶಗಳಲ್ಲಿ ಸಣ್ಣ ಗೃಹಸಾಲಗಳಿಗೆ ಸಬ್ಸಿಡಿಗಳನ್ನು (Subsidized Home Loans) ಒದಗಿಸಲು ಕೇಂದ್ರ ಚಿಂತನೆ ನಡೆಸಿದೆ. ಇಬ್ಬರು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದ್ದು, ಸಬ್ಸಿಡಿ ದರದಲ್ಲಿ ಸುಮಾರು 60,000 ಕೋಟಿ ರೂ ಮೊತ್ತದ ಗೃಹಸಾಲಗಳನ್ನು ಒದಗಿಸುವ ಇರಾದೆಯಲ್ಲಿ ಸರ್ಕಾರ ಇದೆ. ಸ್ವಾತಂತ್ರ್ಯೋತ್ಸವ ಭಾಷದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ನಗರ ಪ್ರದೇಶಗಳಲ್ಲಿ ಬಡವರು ಮತ್ತು ಮಧ್ಯಮವರ್ಗದವರ ಸ್ವಂತ ಮನೆ ಕನಸು ನನಸು ಮಾಡಲು ಸಹಾಯವಾಗುವ ಯೋಜನೆಯನ್ನು ಘೋಷಿಸಿದ್ದರು. ಆ ಯೋಜನೆಯಲ್ಲಿ ಕಡಿಮೆ ಬಡ್ಡಿದರದಲ್ಲಿ ಗೃಹಸಾಲ ಕೊಡುವುದೂ ಸೇರಿದೆ.

‘ನಗರಗಳಲ್ಲಿ ಬಾಡಿಗೆ ಮನೆ, ಅಥವಾ ಸ್ಲಂ, ಗುಡಿಸಲು, ಅನಧಿಕೃತ ಕಾಲೊನಿಗಳಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ನೆರವಾಗುವಂತಹ ಹೊಸ ಯೋಜನೆಯನ್ನು ನಾವು ತರುತ್ತಿದ್ದೇವೆ’ ಎಂದು ಪ್ರಧಾನಿಗಳು ಆಗಸ್ಟ್ 15ರಂದು ಘೋಷಿಸಿದ್ದರು. ಈ ಹೊಸ ಯೋಜನೆಯನ್ನು ಅಂತಿಮಗೊಳಿಸಲು ಪ್ರಯತ್ನಗಳಾಗುತ್ತಿವೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಹೊಸ ಮನೆ ಖರೀದಿಸುವ ಮುನ್ನ ಈ ಏಳು ಅಂಶಗಳನ್ನು ಪರಿಗಣಿಸಿ; ಇದು ಜೀವಮಾನದ ಸಾಧನೆ ಎಂಬುದು ನೆನಪಿರಲಿ

ಸದ್ಯ ಈ ಯೋಜನೆ ಬಗ್ಗೆ ತಿಳಿದಿರುವ ಮಾಹಿತಿ ಪ್ರಕಾರ, 9 ಲಕ್ಷ ರೂವರೆಗಿನ ಸಾಲಕ್ಕೆ ವಾರ್ಷಿಕ ಬಡ್ಡಿದರದಲ್ಲಿ ಶೇ. 6.5ರವರೆಗೂ ಸಬ್ಸಿಡಿ ಕೊಡಲಾಗುತ್ತದೆ. ಹಾಗು, 20 ವರ್ಷದವರೆಗಿನ 50 ಲಕ್ಷ ರೂಗಿಂತ ಕಡಿಮೆ ಮೊತ್ತದ ಸಾಲಕ್ಕೂ ಬಡ್ಡಿದರದಲ್ಲಿ ಸಬ್ಸಿಡಿ ಕೊಡುವ ಪ್ರಸ್ತಾಪ ಇದೆ.

ಈ ಪ್ರಸ್ತಾಪಿತ ಯೋಜನೆ ಜಾರಿಯಾದರೆ, ಫಲಾನುಭವಿಗಳು ಬ್ಯಾಂಕುಗಳಿಂದ ಸಾಲ ಪಡೆಯಬಹುದು. ಬಡ್ಡಿ ಸಬ್ಸಿಡಿಯ ಹಣವನ್ನು ಸರ್ಕಾರವೇ ನೇರವಾಗಿ ಫಲಾನುಭವಿಗಳ ಖಾತೆಗೆ ಹಾಕಲಿದೆ. ಬ್ಯಾಂಕುಗಳು ಈಗಾಗಲೇ ಫಲಾನುಭವಿಗಳನ್ನು ಗುರುತಿಸಲು ಆರಂಭಿಸಿವೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ