AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಸಾಲಗಳ ಬಡ್ಡಿಗೆ ಸಬ್ಸಿಡಿ; ಕೇಂದ್ರದಿಂದ 60,000 ಕೋಟಿ ರೂ ಮೊತ್ತದ ಯೋಜನೆ ಶೀಘ್ರದಲ್ಲೇ?

Home Loan Interest Subsidy: ಸ್ವಾತಂತ್ರ್ಯೋತ್ಸವ ಭಾಷದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ನಗರ ಪ್ರದೇಶಗಳಲ್ಲಿ ಬಡವರು ಮತ್ತು ಮಧ್ಯಮವರ್ಗದವರ ಸ್ವಂತ ಮನೆ ಕನಸು ನನಸು ಮಾಡಲು ಸಹಾಯವಾಗುವ ಯೋಜನೆಯನ್ನು ಘೋಷಿಸಿದ್ದರು. ಆ ಯೋಜನೆಯಲ್ಲಿ ಕಡಿಮೆ ಬಡ್ಡಿದರದಲ್ಲಿ ಗೃಹಸಾಲ ಕೊಡುವುದೂ ಸೇರಿದೆ. ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದ್ದು, ಸಬ್ಸಿಡಿ ದರದಲ್ಲಿ ಸುಮಾರು 60,000 ಕೋಟಿ ರೂ ಮೊತ್ತದ ಗೃಹಸಾಲಗಳನ್ನು ಒದಗಿಸುವ ಇರಾದೆಯಲ್ಲಿ ಸರ್ಕಾರ ಇದೆ.

ಗೃಹಸಾಲಗಳ ಬಡ್ಡಿಗೆ ಸಬ್ಸಿಡಿ; ಕೇಂದ್ರದಿಂದ 60,000 ಕೋಟಿ ರೂ ಮೊತ್ತದ ಯೋಜನೆ ಶೀಘ್ರದಲ್ಲೇ?
ಗೃಹಸಾಲ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 25, 2023 | 6:10 PM

Share

ನವದೆಹಲಿ, ಸೆಪ್ಟೆಂಬರ್ 25: ಮುಂದಿನ ಐದು ವರ್ಷದಲ್ಲಿ ನಗರ ಪ್ರದೇಶಗಳಲ್ಲಿ ಸಣ್ಣ ಗೃಹಸಾಲಗಳಿಗೆ ಸಬ್ಸಿಡಿಗಳನ್ನು (Subsidized Home Loans) ಒದಗಿಸಲು ಕೇಂದ್ರ ಚಿಂತನೆ ನಡೆಸಿದೆ. ಇಬ್ಬರು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದ್ದು, ಸಬ್ಸಿಡಿ ದರದಲ್ಲಿ ಸುಮಾರು 60,000 ಕೋಟಿ ರೂ ಮೊತ್ತದ ಗೃಹಸಾಲಗಳನ್ನು ಒದಗಿಸುವ ಇರಾದೆಯಲ್ಲಿ ಸರ್ಕಾರ ಇದೆ. ಸ್ವಾತಂತ್ರ್ಯೋತ್ಸವ ಭಾಷದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ನಗರ ಪ್ರದೇಶಗಳಲ್ಲಿ ಬಡವರು ಮತ್ತು ಮಧ್ಯಮವರ್ಗದವರ ಸ್ವಂತ ಮನೆ ಕನಸು ನನಸು ಮಾಡಲು ಸಹಾಯವಾಗುವ ಯೋಜನೆಯನ್ನು ಘೋಷಿಸಿದ್ದರು. ಆ ಯೋಜನೆಯಲ್ಲಿ ಕಡಿಮೆ ಬಡ್ಡಿದರದಲ್ಲಿ ಗೃಹಸಾಲ ಕೊಡುವುದೂ ಸೇರಿದೆ.

‘ನಗರಗಳಲ್ಲಿ ಬಾಡಿಗೆ ಮನೆ, ಅಥವಾ ಸ್ಲಂ, ಗುಡಿಸಲು, ಅನಧಿಕೃತ ಕಾಲೊನಿಗಳಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ನೆರವಾಗುವಂತಹ ಹೊಸ ಯೋಜನೆಯನ್ನು ನಾವು ತರುತ್ತಿದ್ದೇವೆ’ ಎಂದು ಪ್ರಧಾನಿಗಳು ಆಗಸ್ಟ್ 15ರಂದು ಘೋಷಿಸಿದ್ದರು. ಈ ಹೊಸ ಯೋಜನೆಯನ್ನು ಅಂತಿಮಗೊಳಿಸಲು ಪ್ರಯತ್ನಗಳಾಗುತ್ತಿವೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಹೊಸ ಮನೆ ಖರೀದಿಸುವ ಮುನ್ನ ಈ ಏಳು ಅಂಶಗಳನ್ನು ಪರಿಗಣಿಸಿ; ಇದು ಜೀವಮಾನದ ಸಾಧನೆ ಎಂಬುದು ನೆನಪಿರಲಿ

ಸದ್ಯ ಈ ಯೋಜನೆ ಬಗ್ಗೆ ತಿಳಿದಿರುವ ಮಾಹಿತಿ ಪ್ರಕಾರ, 9 ಲಕ್ಷ ರೂವರೆಗಿನ ಸಾಲಕ್ಕೆ ವಾರ್ಷಿಕ ಬಡ್ಡಿದರದಲ್ಲಿ ಶೇ. 6.5ರವರೆಗೂ ಸಬ್ಸಿಡಿ ಕೊಡಲಾಗುತ್ತದೆ. ಹಾಗು, 20 ವರ್ಷದವರೆಗಿನ 50 ಲಕ್ಷ ರೂಗಿಂತ ಕಡಿಮೆ ಮೊತ್ತದ ಸಾಲಕ್ಕೂ ಬಡ್ಡಿದರದಲ್ಲಿ ಸಬ್ಸಿಡಿ ಕೊಡುವ ಪ್ರಸ್ತಾಪ ಇದೆ.

ಈ ಪ್ರಸ್ತಾಪಿತ ಯೋಜನೆ ಜಾರಿಯಾದರೆ, ಫಲಾನುಭವಿಗಳು ಬ್ಯಾಂಕುಗಳಿಂದ ಸಾಲ ಪಡೆಯಬಹುದು. ಬಡ್ಡಿ ಸಬ್ಸಿಡಿಯ ಹಣವನ್ನು ಸರ್ಕಾರವೇ ನೇರವಾಗಿ ಫಲಾನುಭವಿಗಳ ಖಾತೆಗೆ ಹಾಕಲಿದೆ. ಬ್ಯಾಂಕುಗಳು ಈಗಾಗಲೇ ಫಲಾನುಭವಿಗಳನ್ನು ಗುರುತಿಸಲು ಆರಂಭಿಸಿವೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು