ಗೃಹಸಾಲಗಳ ಬಡ್ಡಿಗೆ ಸಬ್ಸಿಡಿ; ಕೇಂದ್ರದಿಂದ 60,000 ಕೋಟಿ ರೂ ಮೊತ್ತದ ಯೋಜನೆ ಶೀಘ್ರದಲ್ಲೇ?

Home Loan Interest Subsidy: ಸ್ವಾತಂತ್ರ್ಯೋತ್ಸವ ಭಾಷದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ನಗರ ಪ್ರದೇಶಗಳಲ್ಲಿ ಬಡವರು ಮತ್ತು ಮಧ್ಯಮವರ್ಗದವರ ಸ್ವಂತ ಮನೆ ಕನಸು ನನಸು ಮಾಡಲು ಸಹಾಯವಾಗುವ ಯೋಜನೆಯನ್ನು ಘೋಷಿಸಿದ್ದರು. ಆ ಯೋಜನೆಯಲ್ಲಿ ಕಡಿಮೆ ಬಡ್ಡಿದರದಲ್ಲಿ ಗೃಹಸಾಲ ಕೊಡುವುದೂ ಸೇರಿದೆ. ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದ್ದು, ಸಬ್ಸಿಡಿ ದರದಲ್ಲಿ ಸುಮಾರು 60,000 ಕೋಟಿ ರೂ ಮೊತ್ತದ ಗೃಹಸಾಲಗಳನ್ನು ಒದಗಿಸುವ ಇರಾದೆಯಲ್ಲಿ ಸರ್ಕಾರ ಇದೆ.

ಗೃಹಸಾಲಗಳ ಬಡ್ಡಿಗೆ ಸಬ್ಸಿಡಿ; ಕೇಂದ್ರದಿಂದ 60,000 ಕೋಟಿ ರೂ ಮೊತ್ತದ ಯೋಜನೆ ಶೀಘ್ರದಲ್ಲೇ?
ಗೃಹಸಾಲ

Updated on: Sep 25, 2023 | 6:10 PM

ನವದೆಹಲಿ, ಸೆಪ್ಟೆಂಬರ್ 25: ಮುಂದಿನ ಐದು ವರ್ಷದಲ್ಲಿ ನಗರ ಪ್ರದೇಶಗಳಲ್ಲಿ ಸಣ್ಣ ಗೃಹಸಾಲಗಳಿಗೆ ಸಬ್ಸಿಡಿಗಳನ್ನು (Subsidized Home Loans) ಒದಗಿಸಲು ಕೇಂದ್ರ ಚಿಂತನೆ ನಡೆಸಿದೆ. ಇಬ್ಬರು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದ್ದು, ಸಬ್ಸಿಡಿ ದರದಲ್ಲಿ ಸುಮಾರು 60,000 ಕೋಟಿ ರೂ ಮೊತ್ತದ ಗೃಹಸಾಲಗಳನ್ನು ಒದಗಿಸುವ ಇರಾದೆಯಲ್ಲಿ ಸರ್ಕಾರ ಇದೆ. ಸ್ವಾತಂತ್ರ್ಯೋತ್ಸವ ಭಾಷದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ನಗರ ಪ್ರದೇಶಗಳಲ್ಲಿ ಬಡವರು ಮತ್ತು ಮಧ್ಯಮವರ್ಗದವರ ಸ್ವಂತ ಮನೆ ಕನಸು ನನಸು ಮಾಡಲು ಸಹಾಯವಾಗುವ ಯೋಜನೆಯನ್ನು ಘೋಷಿಸಿದ್ದರು. ಆ ಯೋಜನೆಯಲ್ಲಿ ಕಡಿಮೆ ಬಡ್ಡಿದರದಲ್ಲಿ ಗೃಹಸಾಲ ಕೊಡುವುದೂ ಸೇರಿದೆ.

‘ನಗರಗಳಲ್ಲಿ ಬಾಡಿಗೆ ಮನೆ, ಅಥವಾ ಸ್ಲಂ, ಗುಡಿಸಲು, ಅನಧಿಕೃತ ಕಾಲೊನಿಗಳಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ನೆರವಾಗುವಂತಹ ಹೊಸ ಯೋಜನೆಯನ್ನು ನಾವು ತರುತ್ತಿದ್ದೇವೆ’ ಎಂದು ಪ್ರಧಾನಿಗಳು ಆಗಸ್ಟ್ 15ರಂದು ಘೋಷಿಸಿದ್ದರು. ಈ ಹೊಸ ಯೋಜನೆಯನ್ನು ಅಂತಿಮಗೊಳಿಸಲು ಪ್ರಯತ್ನಗಳಾಗುತ್ತಿವೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಹೊಸ ಮನೆ ಖರೀದಿಸುವ ಮುನ್ನ ಈ ಏಳು ಅಂಶಗಳನ್ನು ಪರಿಗಣಿಸಿ; ಇದು ಜೀವಮಾನದ ಸಾಧನೆ ಎಂಬುದು ನೆನಪಿರಲಿ

ಸದ್ಯ ಈ ಯೋಜನೆ ಬಗ್ಗೆ ತಿಳಿದಿರುವ ಮಾಹಿತಿ ಪ್ರಕಾರ, 9 ಲಕ್ಷ ರೂವರೆಗಿನ ಸಾಲಕ್ಕೆ ವಾರ್ಷಿಕ ಬಡ್ಡಿದರದಲ್ಲಿ ಶೇ. 6.5ರವರೆಗೂ ಸಬ್ಸಿಡಿ ಕೊಡಲಾಗುತ್ತದೆ. ಹಾಗು, 20 ವರ್ಷದವರೆಗಿನ 50 ಲಕ್ಷ ರೂಗಿಂತ ಕಡಿಮೆ ಮೊತ್ತದ ಸಾಲಕ್ಕೂ ಬಡ್ಡಿದರದಲ್ಲಿ ಸಬ್ಸಿಡಿ ಕೊಡುವ ಪ್ರಸ್ತಾಪ ಇದೆ.

ಈ ಪ್ರಸ್ತಾಪಿತ ಯೋಜನೆ ಜಾರಿಯಾದರೆ, ಫಲಾನುಭವಿಗಳು ಬ್ಯಾಂಕುಗಳಿಂದ ಸಾಲ ಪಡೆಯಬಹುದು. ಬಡ್ಡಿ ಸಬ್ಸಿಡಿಯ ಹಣವನ್ನು ಸರ್ಕಾರವೇ ನೇರವಾಗಿ ಫಲಾನುಭವಿಗಳ ಖಾತೆಗೆ ಹಾಕಲಿದೆ. ಬ್ಯಾಂಕುಗಳು ಈಗಾಗಲೇ ಫಲಾನುಭವಿಗಳನ್ನು ಗುರುತಿಸಲು ಆರಂಭಿಸಿವೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us