AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರದಿಂದ ಕಡಿಮೆ ಬಡ್ಡಿಗೆ ಗೃಹಸಾಲ; ಸೆಪ್ಟೆಂಬರ್​ನಲ್ಲಿ ಹೊಸ ಸ್ಕೀಮ್ ಜಾರಿ ಸಾಧ್ಯತೆ

Home Loan Scheme: ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಘೋಷಿಸಲಾದಂತೆ ಕಡಿಮೆ ಬಡ್ಡಿದರಕ್ಕೆ ಗೃಹ ಸಾಲ ಕೊಡಿಸುವ ಸ್ಕೀಮ್ ಅನ್ನು ಸರ್ಕಾರ ಸೆಪ್ಟೆಂಬರ್​ನಲ್ಲಿ ಜಾರಿಗೊಳಿಸಬಹುದು ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. ನಗರದಲ್ಲಿ ಸ್ವಂತ ಮನೆ ಹೊಂದಿರದ ಮತ್ತು ಅನಧಿಕೃತ ಕಾಲೊನಿಗಳಲ್ಲಿ ವಾಸಿಸುತ್ತಿರುವ ಜನರು ಈ ಸಾಲದ ಸ್ಕೀಮ್ ಅನ್ನು ಪಡೆಯಬಹುದ ಎನ್ನಲಾಗಿದೆ.

ಕೇಂದ್ರ ಸರ್ಕಾರದಿಂದ ಕಡಿಮೆ ಬಡ್ಡಿಗೆ ಗೃಹಸಾಲ; ಸೆಪ್ಟೆಂಬರ್​ನಲ್ಲಿ ಹೊಸ ಸ್ಕೀಮ್ ಜಾರಿ ಸಾಧ್ಯತೆ
ಗೃಹಸಾಲ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 31, 2023 | 4:08 PM

Share

ನವದೆಹಲಿ, ಆಗಸ್ಟ್ 31: ಕೇಂದ್ರ ಸರ್ಕಾರದ ಪ್ರಸ್ತಾವಿತ ಗೃಹಸಾಲ ಯೋಜನೆ (Home Loan scheme) ಸೆಪ್ಟೆಂಬರ್ ತಿಂಗಳಲ್ಲಿ ಜಾರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕೇಂದ್ರ ಸಚಿವ ಹರದೀಪ್ ಸಿಂಗ್ ಪುರಿ ಅವರು ಈ ಯೋಜನೆಯ ರೂಪುರೇಖೆ (Modalities) ಅಂತಿಮಗೊಳಿಸಲಾಗುತ್ತಿರುವ ಸಂಗತಿಯನ್ನು ಇಂದು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡಿದ್ದಾರೆ.

‘ನಗರಗಳಲ್ಲಿ ಮನೆಗಳನ್ನು ಖರೀದಿಸಲು ಬಯಸುವ ಜನರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲವನ್ನು ನೀಡುವ ಈ ಸ್ಕೀಂ ಅನ್ನು ಸೆಪ್ಟೆಂಬರ್​ನಲ್ಲಿ ಆರಂಭಿಸಲಾಗುವುದು,’ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಮನೋಜ್ ಜೋಷಿ ತಿಳಿಸಿದ್ದಾರೆ.

ಎರಡು ವಾರದ ಹಿಂದೆ, ಆಗಸ್ಟ್ 15ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮಾತನಾಡುತ್ತಾ ನಗರವಾಸಿ ಮಧ್ಯಮವರ್ಗದ ಕುಟುಂಬಗಳ ಕನಸಿನ ಮನೆ ಸಾಕಾರಗೊಳಿಸುವ ಯೋಜನೆಯನ್ನು ಘೋಷಿಸಿದ್ದರು.

ಇದನ್ನೂ ಓದಿ: ಸೆಪ್ಟೆಂಬರ್​​ನಲ್ಲಿ ಬ್ಯಾಂಕ್​​ಗಳಿಗೆ ಸಾಲು ಸಾಲು ರಜಾ ಇದೆ: 2000 ರೂ ನೋಟು ಬದಲಾಯಿಸಿಕೊಳ್ಳಲು ಗಡುವು ಸಮೀಪಿಸುತ್ತಿದೆ, ಗಡಿಬಿಡಿ ಮಾಡಿಕೊಳ್ಳಬೇಡಿ

‘ಮಧ್ಯಮವರ್ಗದ ಕುಟುಂಬಗಳು ನಗರಗಳಲ್ಲಿ ತಮ್ಮದೇ ಸ್ವಂತ ಮನೆ ಹೊಂದುವ ಕನಸು ಕಾಣುತ್ತಾರೆ. ಅವರಿಗಾಗಿ ನಾವು ಯೋಜನೆಯೊಂದನ್ನು ಶೀಘ್ರದಲ್ಲೇ ಜಾರಿಗೆ ತರುತ್ತೇವೆ.

‘ನಗರಗಳಲ್ಲಿ ಬಾಡಿಗೆ ಮನೆಯಲ್ಲಿರುವ, ಅನಧಿಕೃತ ಕಾಲೊನಿ ಮತ್ತು ಸ್ಲಂಗಳಲ್ಲಿರುವ ಕುಟುಂಬಗಳಿಗೆ ಸ್ವಂತ ಮನೆ ಪಡೆಯಲು ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕ್ ಸಾಲ ಕೊಡಿಸಲಾಗುವುದು’ ಎಂದು ಪ್ರಧಾನಿ ನರೇಂದ್ರ ಮೋದಿ ಅಂದು ಹೇಳಿದ್ದರು.

ಇದನ್ನೂ ಓದಿ: ಪಿಎಲ್​ಐ ಸ್ಕೀಮ್ ಅಡಿಯಲ್ಲಿ ಐಟಿ ಹಾರ್ಡ್​ವೇರ್ ತಯಾರಿಕೆಗೆ 40 ಕಂಪನಿಗಳಿಂದ ಅರ್ಜಿ, 75 ಸಾವಿರ ಉದ್ಯೋಗಸೃಷ್ಟಿ ಸಾಧ್ಯತೆ

ಆದರೆ, ಈ ಸ್ಕೀಮ್ ಅಡಿಯಲ್ಲಿ ಎಷ್ಟು ಬಡ್ಡಿದರಕ್ಕೆ ಬ್ಯಾಂಕ್ ಸಾಲದ ವ್ಯವಸ್ಥೆ ಆಗುತ್ತದೆ ಎಂಬ ವಿವರ ಗೊತ್ತಾಗಿಲ್ಲ. ಬ್ಯಾಂಕ್​ನ ಮಾಮೂಲಿಯ ಗೃಹಸಾಲ ದರಕ್ಕಿಂತ ತುಸು ಕಡಿಮೆ ಬಡ್ಡಿಯಲ್ಲಿ ಸಾಲ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಸ್ಕೀಮ್ ಬಗ್ಗೆ ಸದ್ಯ ಗೊತ್ತಾಗಿರುವ ಮಾಹಿತಿ ಪ್ರಕಾರ, ನಗರದಲ್ಲಿ ಸ್ವಂತ ಮನೆ ಹೊಂದಿರದ ಕುಟುಂಬಕ್ಕೆ ಮಾತ್ರ ಈ ಸೌಲಭ್ಯ ಇರುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!