AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​​ಬಿಐ ಗವರ್ನರ್​ ಶಕ್ತಿಕಾಂತ್​ ದಾಸ್ ಅಧಿಕಾರ ಅವಧಿ ವಿಸ್ತರಣೆ; ಮುಂದಿನ 3ವರ್ಷಕ್ಕೆ ಅವರೇ ಮತ್ತೆ ಗವರ್ನರ್​

Shaktikanta Das: ಶಕ್ತಿಕಾಂತ್​ ದಾಸ್​ 2018ರ ಡಿಸೆಂಬರ್​ 11ರಂದು ಆರ್​ಬಿಐ ಗವರ್ನರ್​ ಆಗಿ ನೇಮಕಗೊಂಡಿದ್ದರು. ಅದಕ್ಕೂ ಮೊದಲು ಆರ್ಥಿಕ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿದ್ದರು. 

ಆರ್​​ಬಿಐ ಗವರ್ನರ್​ ಶಕ್ತಿಕಾಂತ್​ ದಾಸ್ ಅಧಿಕಾರ ಅವಧಿ ವಿಸ್ತರಣೆ; ಮುಂದಿನ 3ವರ್ಷಕ್ಕೆ ಅವರೇ ಮತ್ತೆ ಗವರ್ನರ್​
ಶಕ್ತಿಕಾಂತ್​ ದಾಸ್​
Lakshmi Hegde
|

Updated on:Oct 29, 2021 | 9:36 AM

Share

ದೆಹಲಿ:  ಆರ್​​ಬಿಐ (ರಿಸರ್ವ್​ ಬ್ಯಾಂಕ್​ ಆಫ್​ ಇಂಡಿಯಾ) ಗವರ್ನರ್​ ಶಕ್ತಿಕಾಂತ್​ ದಾಸ್​ (RBI Governor Shaktikanta Das) ಅವರ ಅಧಿಕಾರ ಅವಧಿಯನ್ನು ಮತ್ತೆ ಮೂರು ವರ್ಷಗಳಿಗೆ ವಿಸ್ತರಿಸಿ ಶುಕ್ರವಾರ ಆದೇಶ ಹೊರಡಿಸಿದೆ. ಶಕ್ತಿಕಾಂತ್​ ದಾಸ್​ ಅಧಿಕಾರ ಅವಧಿ 2021ರ ಡಿಸೆಂಬರ್​ 10ಕ್ಕೆ ಮುಕ್ತಾಯವಾಗಬೇಕಿತ್ತು. ಆದರೆ ಈಗ ಕೇಂದ್ರ ಸರ್ಕಾರ ಅದನ್ನು ವಿಸ್ತರಿಸಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಲಾಗಿದ್ದು, ಆರ್​ಬಿಐ ಗವರ್ನರ್​  ಶಕ್ತಿಕಾಂತ್​ ದಾಸ್​ ಅವರ ಮರುನೇಮಕಾತಿಗೆ ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ ಎಂದು ಹೇಳಲಾಗಿದೆ.  

ಶಕ್ತಿಕಾಂತ್​ ದಾಸ್​ 2018ರ ಡಿಸೆಂಬರ್​ 11ರಂದು ಆರ್​ಬಿಐ ಗವರ್ನರ್​ ಆಗಿ ನೇಮಕಗೊಂಡಿದ್ದರು. ಅದಕ್ಕೂ ಮೊದಲು ಆರ್ಥಿಕ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿದ್ದರು.  ಹಣಕಾಸು, ಟ್ಯಾಕ್ಸೇಶನ್​​, ಉದ್ಯಮ, ಮೂಲಸೌಕರ್ಯಗಳಿಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ ಬಹುಮುಖ್ಯ ಹುದ್ದೆಗಳನ್ನು ನಿಭಾಯಿಸಿದ ಅನುಭವ ಅವರಿಗೆ ಇದೆ.  ಹಾಗೇ, ವಿಶ್ವ ಬ್ಯಾಂಕ್​, ಏಷ್ಯನ್​ ಡೆವಲಪ್​ಮೆಂಟ್​ ಬ್ಯಾಂಕ್​ (ADB), ನ್ಯೂ ಡೆವಲಪ್​ಮೆಂಟ್​ ಬ್ಯಾಂಕ್ (NDB), ಏಷ್ಯನ್​ ಇನ್​ಫ್ರಾಸ್ಟ್ರಕ್ಚರ್​​ ಇನ್ವೆಸ್ಟ್​ಮೆಂಟ್ ಬ್ಯಾಂಕ್​ (AHB)ಗಳಲ್ಲಿ ಭಾರತದ ಪರ್ಯಾಯ ಗವರ್ನರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.  ಹಣಕಾಸು ಸಚಿವಾಲಯದಲ್ಲಿ ಸುದೀರ್ಘ ಅವಧಿಗೆ ಕಾರ್ಯನಿರ್ವಹಿಸಿರುವ ಶಕ್ತಿಕಾಂತ್​ ದಾಸ್​ ಒಟ್ಟು 8 ಕೇಂದ್ರ ಬಜೆಟ್​​ಗಳ ತಯಾರಿಕೆಯಲ್ಲಿ ನೇರವಾಗಿ ಕಾರ್ಯನಿರ್ವಹಿಸಿದ್ದಾರೆ.

ಶಕ್ತಿಕಾಂತ್​ ದಾಸ್​ ಗವರ್ನರ್​ ಆಗುವುದಕ್ಕೂ ಮೊದಲು ಆ ಸ್ಥಾನದಲ್ಲಿ ಊರ್ಜಿತ್​ ಪಟೇಲ್​ ಇದ್ದರು. ಆದರೆ ಅವರಿಗೂ ಕೇಂದ್ರ ಸರ್ಕಾರಕ್ಕೂ ಪದೇಪದೆ ವೈಮನಸ್ಯ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ಆಕಸ್ಮಿಕವಾಗಿ ರಾಜೀನಾಮೆ ನೀಡಿದ್ದರು.  ಇದೀಗ ಶಕ್ತಿಕಾಂತ್​ ದಾಸ್​ ಅವಧಿ ಮತ್ತೆ ಮೂರು ವರ್ಷಕ್ಕೆ ವಿಸ್ತರಣೆಯಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಧಿಕಾರ ವಿಸ್ತರಣೆಯಾದ ಆರ್​ಬಿಐನ ಮೊದಲ ಗವರ್ನರ್​ ಇವರಾಗಿದ್ದಾರೆ.

ಇದನ್ನೂ ಓದಿ: ಚನ್ನಪಟ್ಟಣ ಡಿವೈಎಸ್​​ಪಿ ರಮೇಶ್ ಪೊಲೀಸ್​ ಸಮವಸ್ತ್ರದಲ್ಲಿಯೇ ಭಜನೆಗೆ ಕುಳಿತರು!

ಜಿ20 ಶೃಂಗಸಭೆಗಾಗಿ ರೋಮ್​​ಗೆ ತೆರಳಿದ ನರೇಂದ್ರ ಮೋದಿ; ಪ್ರಧಾನಿಯಾದ ಬಳಿಕ ಇದು ಮೊದಲ ಭೇಟಿ

Published On - 9:25 am, Fri, 29 October 21

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ