AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Edible Oil: ಖಾದ್ಯ ತೈಲಗಳ ಮೇಲಿನ ಆಮದು ಸುಂಕವನ್ನು ಇಳಿಕೆ ಮಾಡಿದ ಕೇಂದ್ರ ಸರ್ಕಾರ; ಗ್ರಾಹಕರಿಗೆ ನಿರಾಳ

ಕೇಂದ್ರ ಸರ್ಕಾರವು ಖಾದ್ಯ ತೈಲದ ಮೇಲಿನ ಆಮದು ಸುಂಕವನ್ನು ಇಳಿಕೆ ಮಾಡಿದೆ. ಯಾವ ಪ್ರಮಾಣದಲ್ಲಿ ಇಳಿಸಿದೆ ಮತ್ತು ಅದರ ಪರಿಣಾಮ ಏನು ಎಂಬುದರ ವಿವರ ಈ ಲೇಖನದಲ್ಲಿದೆ.

Edible Oil: ಖಾದ್ಯ ತೈಲಗಳ ಮೇಲಿನ ಆಮದು ಸುಂಕವನ್ನು ಇಳಿಕೆ ಮಾಡಿದ ಕೇಂದ್ರ ಸರ್ಕಾರ; ಗ್ರಾಹಕರಿಗೆ ನಿರಾಳ
ಖಾದ್ಯ ತೈಲ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Oct 13, 2021 | 6:46 PM

Share

ಸರಕುಗಳ ಜಾಗತಿಕ ಬೆಲೆಯ ಏರಿಕೆಯಿಂದ ಗ್ರಾಹಕರಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಬುಧವಾರ ಖಾದ್ಯ ತೈಲಗಳ ಆಮದು ಸುಂಕವನ್ನು ಕಡಿತಗೊಳಿಸಿದೆ. ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (ಸಿಬಿಐಸಿ) ಎರಡು ಪ್ರತ್ಯೇಕ ಆದೇಶಗಳಲ್ಲಿ ಮೂಲ ಕಸ್ಟಮ್ಸ್ ಸುಂಕ ಮತ್ತು ನಿರ್ದಿಷ್ಟ ಖಾದ್ಯ ತೈಲಗಳ ಮೇಲಿನ ಕೃಷಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸೆಸ್ ಅನ್ನು ಕಡಿತಗೊಳಿಸಿದೆ. ಕಚ್ಚಾ ತಾಳೆ ಎಣ್ಣೆ, ಕಚ್ಚಾ ಸೋಯಾ-ಬೀನ್ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಬೀಜದ ಎಣ್ಣೆಯ ಮೇಲಿನ ಮೂಲ ಕಸ್ಟಮ್ಸ್ ಸುಂಕವನ್ನು ಶೇ 2.5ರಿಂದ ಶೂನ್ಯಕ್ಕೆ ಇಳಿಸಲಾಗಿದೆ. ಕಚ್ಚಾ ತಾಳೆ ಎಣ್ಣೆಯು ಕೃಷಿ ಸೆಸ್ ಅನ್ನು ಶೇ 20ರಿಂದ ಶೇ 7.5ಕ್ಕೆ ಭಾರೀ ಪ್ರಮಾಣದಲ್ಲಿ ಇಳಿಕೆ ಮಾಡಿರುವುದರ ಅನುಕೂಲ ಗ್ರಾಹಕರಿಗೆ ಆಗಲಿದೆ. ಕಚ್ಚಾ ಸೋಯಾ-ಬೀನ್ ಎಣ್ಣೆ ಮತ್ತು ಕಚ್ಚಾ ಸೂರ್ಯಕಾಂತಿ ಎಣ್ಣೆ ಎರಡರ ಮೇಲಿನ ಕೃಷಿ ಸೆಸ್ ಅನ್ನು ಶೇ 20ರಿಂದ ಶೇ 5ಕ್ಕೆ ಇಳಿಸಲಾಗಿದೆ. ಈ ಎಲ್ಲ ಬದಲಾವಣೆಗಳು ಗುರುವಾರದಿಂದ (ಅಕ್ಟೋಬರ್ 14, 2021ರಿಂದ 2021ರ ಮಾರ್ಚ್ ರ ಅಂತ್ಯದವರೆಗೆ) ಜಾರಿಯಲ್ಲಿರುತ್ತವೆ ಎಂದು ಆದೇಶಗಳಲ್ಲಿ ತೋರಿಸಲಾಗಿದೆ.

ಅಲ್ಲದೆ, ಖಾದ್ಯ ದರ್ಜೆಯ ಸೋಯಾಬೀನ್ ಎಣ್ಣೆ, ಖಾದ್ಯ ದರ್ಜೆಯ ಸೂರ್ಯಕಾಂತಿ ಎಣ್ಣೆ, ಸಂಸ್ಕರಿಸಿದ ಬ್ಲೀಚ್ ಡಿಯೋಡರೈಸ್ಡ್ (ಆರ್​ಬಿಡಿ) ಪಾಮ್ ಆಯಿಲ್, ಆರ್​ಬಿಡಿ ಪಾಮೋಲಿನ್, ಆರ್​ಬಿಡಿ ಪಾಮ್ ಸ್ಟೀರಿನ್ ಮತ್ತು ಕಚ್ಚಾ ತಾಳೆ ಎಣ್ಣೆಯನ್ನು ಹೊರತುಪಡಿಸಿ ಯಾವುದೇ ಪಾಮ್ ಎಣ್ಣೆಯನ್ನು ಶೇ 32.5ರಿಂದ ಶೇ 17.5ಕ್ಕೆ ಕಡಿಮೆ ಮಾಡಲಾಗಿದೆ. ಅಕ್ರಮವಾಗಿ ಸಂಗ್ರಹಣೆ ತಡೆಯಲು ಮತ್ತು ಬೆಲೆಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರವು ಮಾರ್ಚ್ ಅಂತ್ಯದವರೆಗೆ ಖಾದ್ಯ ತೈಲಗಳು ಮತ್ತು ಎಣ್ಣೆಬೀಜಗಳ ಮೇಲೆ ಸ್ಟಾಕ್ ಮಿತಿಗಳನ್ನು ಹೇರಿದ ನಂತರ ಈ ಕ್ರಮವು ಬಂದಿದೆ. ಅಕ್ಟೋಬರ್ 8ರಿಂದ ಜಾರಿಗೆ ಬರುವಂತೆ ನ್ಯಾಷನಲ್ ಕಮಾಡಿಟಿ ಮತ್ತು ಡೆರಿವೇಟಿವ್ಸ್ ಎಕ್ಸ್‌ಚೇಂಜ್ ಲಿಮಿಟೆಡ್ (NCDEX)ನಲ್ಲಿ ಸಾಸಿವೆ ಎಣ್ಣೆ ಮತ್ತು ಎಣ್ಣೆಬೀಜಗಳ ಮೇಲೆ ಸ್ಪೆಕ್ಯುಲೆಟಿವ್ (ಸಟ್ಟಾ) ವ್ಯಾಪಾರವನ್ನು ಸರ್ಕಾರ ಸ್ಥಗಿತಗೊಳಿಸಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖಾದ್ಯ ತೈಲದ ಹೆಚ್ಚಿನ ಬೆಲೆಗಳು ದೇಶೀಯ ಬೆಲೆಯ ಮೇಲೆ ಗಣನೀಯ ಪರಿಣಾಮ ಬೀರುತ್ತವೆ. ಗ್ರಾಹಕ ಬೆಲೆ ಸೂಚ್ಯಂಕ ಆಧಾರಿತ ತೈಲಗಳು ಮತ್ತು ಫ್ಯಾಟ್​ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ವರ್ಷದಿಂದ ವರ್ಷಕ್ಕೆ ಶೇ 34.19 ಹೆಚ್ಚಾಗಿದೆ ಎಂದು ಅಂಕಿಅಂಶಗಳ ಸಚಿವಾಲಯದಿಂದ ಲಭ್ಯವಿರುವ ಮಾಹಿತಿಯ ಪ್ರಕಾರ ತಿಳಿದುಬಂದಿದೆ. ಗ್ರಾಹಕರ ಆಹಾರ ಬೆಲೆ ಸೂಚ್ಯಂಕವನ್ನು ಆಧರಿಸಿದ ಒಟ್ಟಾರೆ ಆಹಾರ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ಶೇ 0.68ರಷ್ಟಿತ್ತು, ಇದು ಹಿಂದಿನ ವರ್ಷದ ಅವಧಿಯಲ್ಲಿ ಶೇ 10.68ರಷ್ಟಿತ್ತು.

ಆಮದು ಸುಂಕವನ್ನು ಕಡಿಮೆ ಮಾಡುವುದು ಖಾದ್ಯ ತೈಲ ಬೆಲೆಗಳನ್ನು ಇಳಿಕೆ ಮಾಡುವ ಸರ್ಕಾರದ ಪ್ರಮುಖ ಕಾರ್ಯತಂತ್ರದ ಒಂದು ಭಾಗವಾಗಿದೆ. ಖಾದ್ಯ ತೈಲಗಳ ದೇಶೀಯ ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಸರ್ಕಾರವು ಪ್ರಸ್ತುತ ರಾಷ್ಟ್ರೀಯ ಪ್ರಾಯೋಜಿತ ಯೋಜನೆ ಮಿಷನ್ ಆನ್ ಎಡಿಬಲ್ ಆಯಿಲ್ಸ್-ಆಯಿಲ್ ಪಾಮ್ (NMEO-OP) ಎಂದು ಕರೆಯುತ್ತಿದೆ. ಅಂದಹಾಗೆ ಮಲೇಷ್ಯಾ ಮತ್ತು ಇಂಡೋನೇಷ್ಯಾ ದೇಶಗಳು ಭಾರತಕ್ಕೆ ಖಾದ್ಯ ತೈಲ ಆಮದುಗಳ ಪ್ರಮುಖ ಮೂಲಗಳಾಗಿವೆ.

ಇದನ್ನೂ ಓದಿ: Edible Oil: ಖಾದ್ಯ ತೈಲ ಬೆಲೆ ತಗ್ಗಿಸಲು ಅವುಗಳ ದಾಸ್ತಾನು ಮಿತಿ ಮೇಲೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ