AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LTC rules: ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಖುಷಿ ಸುದ್ದಿ; ಎಲ್​ಟಿಸಿಯ ಬಿಗಿನಿಯಮ ಸಡಿಲಗೊಳಿಸಿದ ಸರ್ಕಾರ

central government employees' LTC re-imbursement: ಕೇಂದ್ರ ಸರ್ಕಾರ ರಜಾ ಕಾಲದ ಪ್ರಯಾಣ ರಿಯಾಯಿತಿ ಅಥವಾ ಪ್ರಯಾಣ ಭತ್ಯೆ (ಎಲ್​ಟಿಸಿ) ವಿಚಾರದಲ್ಲಿ ನಿಯಮ ಸಡಿಲಿಕೆ ಮಾಡಿದೆ. ಜಂಟಿ ಕಾರ್ಯದರ್ಶಿ ದರ್ಜೆಗಿಂತ ಕಡಿಮೆ ಇಲ್ಲದ ಇಲಾಖಾ ಮುಖ್ಯಸ್ಥರ ಎಲ್​ಟಿಸಿ ಅರ್ಜಿಗಳನ್ನು ಅನುಮೋದನೆ ಮಾಡಬಹುದು. ಉದ್ಯೋಗಿಯು ಮುಂಗಡ ಪಡೆದುಕೊಂಡಿದ್ದರೆ, ಎಲ್​ಟಿಸಿ ರಿಇಂಬುರ್ಸ್ಮೆಂಟ್​ನ ಅನುಮೋದನೆ ಅವಧಿ ಮೂರು ತಿಂಗಳು ವಿಸ್ತರಣೆ ಆಗುತ್ತದೆ.

LTC rules: ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಖುಷಿ ಸುದ್ದಿ; ಎಲ್​ಟಿಸಿಯ ಬಿಗಿನಿಯಮ ಸಡಿಲಗೊಳಿಸಿದ ಸರ್ಕಾರ
ಸರ್ಕಾರಿ ಉದ್ಯೋಗಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 02, 2024 | 12:30 PM

Share

ನವದೆಹಲಿ, ಜನವರಿ 2: ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಖಷಿಯಾಗುವ ಸುದ್ದಿ ಇದು. ರಜಾ ಕಾಲದ ಪ್ರಯಾಣ ರಿಯಾಯಿತಿ ಅಥವಾ ಪ್ರಯಾಣ ಭತ್ಯೆ (LTC- Leave travel concession)) ವಿಚಾರದಲ್ಲಿ ನಿಯಮ ಸಡಿಲಿಕೆ ಮಾಡಲಾಗಿದೆ. ಡಿಸೆಂಬರ್ 21ರಂದು ಸಿಬ್ಬಂದಿ ಸಚಿವಾಲಯ ಹೊರಡಿಸಿದ ಸೂಚನೆಯೊಂದರ ಪ್ರಕಾರ ಎಲ್​ಟಿಸಿ ಹಣ ಪಡೆಯಲು ಸಲ್ಲಿಸುವ ಕ್ಲೈಮ್​ಗಳಿಗೆ ಇಲಾಖಾ ಮುಖ್ಯಸ್ಥರೇ ಅನುಮೋದನೆ ಮಾಡಬಹುದಾದ ಅವಕಾಶ ಕಲ್ಪಿಸಲಾಗಿದೆ.

ಜಂಟಿ ಕಾರ್ಯದರ್ಶಿ ದರ್ಜೆಗಿಂತ ಕಡಿಮೆ ಇಲ್ಲದ ಇಲಾಖಾ ಮುಖ್ಯಸ್ಥರ ಅರು ತಿಂಗಳವರೆಗಿನ ಎಲ್​ಟಿಸಿ ಪ್ರಯಾಣ ಹಣಕ್ಕೆ ಕ್ಲೈಮ್ ಮಾಡಿ ಉದ್ಯೋಗಿಗಳು ಸಲ್ಲಿಸುವ ಅರ್ಜಿಗಳನ್ನು ಅನುಮೋದನೆ ಮಾಡಬಹುದು ಎಂದಿದೆ ಹೊಸ ಕಾನೂನು. ಹಳೆಯ ನಿಯಮದ ಪ್ರಕಾರ ಉದ್ಯೋಗಿಗಳ ಎಲ್​ಟಿಸಿ ಕ್ಲೈಮ್ ಅರ್ಜಿ ಡಿಒಪಿಟಿಯಿಂದ ಅನುಮೋದನೆ ಪಡೆಯಬೇಕಿತ್ತು.

ಒಂದು ವೇಳೆ, ಉದ್ಯೋಗಿಯು ಮುಂಗಡ ಪಡೆದುಕೊಂಡಿದ್ದರೆ, ಎಲ್​ಟಿಸಿ ರಿಇಂಬುರ್ಸ್ಮೆಂಟ್​ನ ಅನುಮೋದನೆ ಅವಧಿ ಮೂರು ತಿಂಗಳು ವಿಸ್ತರಣೆ ಆಗುತ್ತದೆ. ಜೊತೆಗೆ, ಆ ಮೂರು ತಿಂಗಳೊಳಗೆ ಉದ್ಯೋಗಿ ತಾನು ಪಡೆದುಕೊಂಡಿದ್ದ ಮುಂಗಡ ಹಣವನ್ನು ಬಡ್ಡಿಸಮೇತ ಹಿಂದಿರುಗಿಸಿರಬೆಕು.

ಇದನ್ನೂ ಓದಿ: Electoral Bonds: ಜನವರಿ 2ರಿಂದ 11ರವರೆಗೆ ಎಸ್​ಬಿಐನ ಈ 29 ಕಚೇರಿಗಳಲ್ಲಿ ಸಿಗಲಿದೆ ಎಲೆಕ್ಟೋರಲ್ ಬಾಂಡ್; ಏನಿದು ಬಾಂಡ್?

ಏನಿದು ಎಲ್​ಟಿಸಿ ಹಣ?

ಎಲ್​ಟಿಸಿ ಎಂಬುದು ಉದ್ಯೋಗಿಗಳಿಗೆ ನೀಡಲಾಗುವ ಲೀವ್ ಟ್ರಾವಲ್ ಕನ್ಸಿಶನ್ ಸೌಲಭ್ಯ. ಉದ್ಯೋಗಿ ರಜೆ ಪಡೆದು ಒಬ್ಬರೆಯೋ ಅಥವಾ ಕುಟುಂಬ ಸಮೇತವೋ ಪ್ರವಾಸ ಹೋದರೆ, ಅವರ ಪ್ರಯಾಣ ವೆಚ್ಚವನ್ನು ಭರಿಸಿಕೊಡಲಾಗುತ್ತದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಈ ಎಲ್​ಟಿಸಿ ಸೌಲಭ್ಯ ಇದೆ.

ರಜೆಯಿಂದ ಬಂದ ಬಳಿಕ ನಿರ್ದಿಷ್ಟ ಅವಧಿಯೊಳಗೆ ಎಲ್​ಟಿಸಿ ಹಣಕ್ಕೆ ಉದ್ಯೋಗಿ ಕ್ಲೈಮ್ ಮಾಡಬೇಕು ಎಂಬ ನಿಯಮ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!