LTC rules: ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಖುಷಿ ಸುದ್ದಿ; ಎಲ್​ಟಿಸಿಯ ಬಿಗಿನಿಯಮ ಸಡಿಲಗೊಳಿಸಿದ ಸರ್ಕಾರ

central government employees' LTC re-imbursement: ಕೇಂದ್ರ ಸರ್ಕಾರ ರಜಾ ಕಾಲದ ಪ್ರಯಾಣ ರಿಯಾಯಿತಿ ಅಥವಾ ಪ್ರಯಾಣ ಭತ್ಯೆ (ಎಲ್​ಟಿಸಿ) ವಿಚಾರದಲ್ಲಿ ನಿಯಮ ಸಡಿಲಿಕೆ ಮಾಡಿದೆ. ಜಂಟಿ ಕಾರ್ಯದರ್ಶಿ ದರ್ಜೆಗಿಂತ ಕಡಿಮೆ ಇಲ್ಲದ ಇಲಾಖಾ ಮುಖ್ಯಸ್ಥರ ಎಲ್​ಟಿಸಿ ಅರ್ಜಿಗಳನ್ನು ಅನುಮೋದನೆ ಮಾಡಬಹುದು. ಉದ್ಯೋಗಿಯು ಮುಂಗಡ ಪಡೆದುಕೊಂಡಿದ್ದರೆ, ಎಲ್​ಟಿಸಿ ರಿಇಂಬುರ್ಸ್ಮೆಂಟ್​ನ ಅನುಮೋದನೆ ಅವಧಿ ಮೂರು ತಿಂಗಳು ವಿಸ್ತರಣೆ ಆಗುತ್ತದೆ.

LTC rules: ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಖುಷಿ ಸುದ್ದಿ; ಎಲ್​ಟಿಸಿಯ ಬಿಗಿನಿಯಮ ಸಡಿಲಗೊಳಿಸಿದ ಸರ್ಕಾರ
ಸರ್ಕಾರಿ ಉದ್ಯೋಗಿ

Updated on: Jan 02, 2024 | 12:30 PM

ನವದೆಹಲಿ, ಜನವರಿ 2: ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಖಷಿಯಾಗುವ ಸುದ್ದಿ ಇದು. ರಜಾ ಕಾಲದ ಪ್ರಯಾಣ ರಿಯಾಯಿತಿ ಅಥವಾ ಪ್ರಯಾಣ ಭತ್ಯೆ (LTC- Leave travel concession)) ವಿಚಾರದಲ್ಲಿ ನಿಯಮ ಸಡಿಲಿಕೆ ಮಾಡಲಾಗಿದೆ. ಡಿಸೆಂಬರ್ 21ರಂದು ಸಿಬ್ಬಂದಿ ಸಚಿವಾಲಯ ಹೊರಡಿಸಿದ ಸೂಚನೆಯೊಂದರ ಪ್ರಕಾರ ಎಲ್​ಟಿಸಿ ಹಣ ಪಡೆಯಲು ಸಲ್ಲಿಸುವ ಕ್ಲೈಮ್​ಗಳಿಗೆ ಇಲಾಖಾ ಮುಖ್ಯಸ್ಥರೇ ಅನುಮೋದನೆ ಮಾಡಬಹುದಾದ ಅವಕಾಶ ಕಲ್ಪಿಸಲಾಗಿದೆ.

ಜಂಟಿ ಕಾರ್ಯದರ್ಶಿ ದರ್ಜೆಗಿಂತ ಕಡಿಮೆ ಇಲ್ಲದ ಇಲಾಖಾ ಮುಖ್ಯಸ್ಥರ ಅರು ತಿಂಗಳವರೆಗಿನ ಎಲ್​ಟಿಸಿ ಪ್ರಯಾಣ ಹಣಕ್ಕೆ ಕ್ಲೈಮ್ ಮಾಡಿ ಉದ್ಯೋಗಿಗಳು ಸಲ್ಲಿಸುವ ಅರ್ಜಿಗಳನ್ನು ಅನುಮೋದನೆ ಮಾಡಬಹುದು ಎಂದಿದೆ ಹೊಸ ಕಾನೂನು. ಹಳೆಯ ನಿಯಮದ ಪ್ರಕಾರ ಉದ್ಯೋಗಿಗಳ ಎಲ್​ಟಿಸಿ ಕ್ಲೈಮ್ ಅರ್ಜಿ ಡಿಒಪಿಟಿಯಿಂದ ಅನುಮೋದನೆ ಪಡೆಯಬೇಕಿತ್ತು.

ಒಂದು ವೇಳೆ, ಉದ್ಯೋಗಿಯು ಮುಂಗಡ ಪಡೆದುಕೊಂಡಿದ್ದರೆ, ಎಲ್​ಟಿಸಿ ರಿಇಂಬುರ್ಸ್ಮೆಂಟ್​ನ ಅನುಮೋದನೆ ಅವಧಿ ಮೂರು ತಿಂಗಳು ವಿಸ್ತರಣೆ ಆಗುತ್ತದೆ. ಜೊತೆಗೆ, ಆ ಮೂರು ತಿಂಗಳೊಳಗೆ ಉದ್ಯೋಗಿ ತಾನು ಪಡೆದುಕೊಂಡಿದ್ದ ಮುಂಗಡ ಹಣವನ್ನು ಬಡ್ಡಿಸಮೇತ ಹಿಂದಿರುಗಿಸಿರಬೆಕು.

ಇದನ್ನೂ ಓದಿ: Electoral Bonds: ಜನವರಿ 2ರಿಂದ 11ರವರೆಗೆ ಎಸ್​ಬಿಐನ ಈ 29 ಕಚೇರಿಗಳಲ್ಲಿ ಸಿಗಲಿದೆ ಎಲೆಕ್ಟೋರಲ್ ಬಾಂಡ್; ಏನಿದು ಬಾಂಡ್?

ಏನಿದು ಎಲ್​ಟಿಸಿ ಹಣ?

ಎಲ್​ಟಿಸಿ ಎಂಬುದು ಉದ್ಯೋಗಿಗಳಿಗೆ ನೀಡಲಾಗುವ ಲೀವ್ ಟ್ರಾವಲ್ ಕನ್ಸಿಶನ್ ಸೌಲಭ್ಯ. ಉದ್ಯೋಗಿ ರಜೆ ಪಡೆದು ಒಬ್ಬರೆಯೋ ಅಥವಾ ಕುಟುಂಬ ಸಮೇತವೋ ಪ್ರವಾಸ ಹೋದರೆ, ಅವರ ಪ್ರಯಾಣ ವೆಚ್ಚವನ್ನು ಭರಿಸಿಕೊಡಲಾಗುತ್ತದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಈ ಎಲ್​ಟಿಸಿ ಸೌಲಭ್ಯ ಇದೆ.

ರಜೆಯಿಂದ ಬಂದ ಬಳಿಕ ನಿರ್ದಿಷ್ಟ ಅವಧಿಯೊಳಗೆ ಎಲ್​ಟಿಸಿ ಹಣಕ್ಕೆ ಉದ್ಯೋಗಿ ಕ್ಲೈಮ್ ಮಾಡಬೇಕು ಎಂಬ ನಿಯಮ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us