AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST Compensation: ಕೇಂದ್ರದಿಂದ ರಾಜ್ಯ ಸರ್ಕಾರಗಳಿಗೆ 86,912 ಕೋಟಿ ರೂಪಾಯಿ ಜಿಎಸ್​ಟಿ ಪರಿಹಾರ ವಿತರಣೆ

ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಗಳಿಗೆ ಜಿಎಸ್​ಟಿ ಪರಿಹಾರ ಮೊತ್ತ 86,912 ಕೋಟಿ ರೂಪಾಯಿ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ.

GST Compensation: ಕೇಂದ್ರದಿಂದ ರಾಜ್ಯ ಸರ್ಕಾರಗಳಿಗೆ 86,912 ಕೋಟಿ ರೂಪಾಯಿ ಜಿಎಸ್​ಟಿ ಪರಿಹಾರ ವಿತರಣೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on:May 31, 2022 | 11:03 PM

ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ 86,912 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದು, ಅವರಿಗೆ ಪಾವತಿಸಬೇಕಾದ ಎಲ್ಲ ಸರಕು ಮತ್ತು ಸೇವಾ ತೆರಿಗೆ (GST) ಪರಿಹಾರವನ್ನು ವಿಲೇವಾರಿ ಮಾಡಿದೆ. “ರಾಜ್ಯಗಳು ತಮ್ಮ ಸಂಪನ್ಮೂಲಗಳನ್ನು ನಿರ್ವಹಿಸುವಲ್ಲಿ ಸಹಾಯ ಮಾಡಲು ಮತ್ತು ತಮ್ಮ ಕಾರ್ಯಕ್ರಮಗಳನ್ನು ವಿಶೇಷವಾಗಿ ಬಂಡವಾಳದ ಮೇಲಿನ ವೆಚ್ಚವನ್ನು ಹಣಕಾಸು ವರ್ಷದಲ್ಲಿ ಯಶಸ್ವಿಯಾಗಿ ನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ,” ಎಂದು ಕೇಂದ್ರವು ಮೇ 31ರಂದು ಹೇಳಿಕೆಯಲ್ಲಿ ತಿಳಿಸಿದೆ. ಜಿಎಸ್‌ಟಿ ಪರಿಹಾರ ನಿಧಿಯಲ್ಲಿ ಕೇವಲ 25,000 ಕೋಟಿ ರೂಪಾಯಿ ಲಭ್ಯವಿದ್ದರೂ ಕೇಂದ್ರವು ಸಂಪೂರ್ಣ ಪಾವತಿ ಮಾಡಿದೆ. ಬಾಕಿ ಹಣವನ್ನು ಕೇಂದ್ರದ ಸ್ವಂತ ಸಂಪನ್ಮೂಲಗಳ ಸೆಸ್ ಸಂಗ್ರಹ ಬಾಕಿಯಿಂದ ಪಾವತಿಸಲಾಗಿದೆ.

ರಾಜ್ಯಗಳಿಗೆ ಬಿಡುಗಡೆಯಾದ 86,912 ಕೋಟಿ ರೂಪಾಯಿಗಳಲ್ಲಿ 47,617 ಕೋಟಿ ರೂಪಾಯಿ ಮೌಲ್ಯದ ಪರಿಹಾರ ಜನವರಿವರೆಗೆ ಬಾಕಿಯಿತ್ತು. 21,322 ಕೋಟಿ ರೂಪಾಯಿ ಫೆಬ್ರವರಿ-ಮಾರ್ಚ್‌ಗೆ ಮತ್ತು 17,973 ಕೋಟಿ ರೂಪಾಯಿ ಏಪ್ರಿಲ್-ಮೇ ತಿಂಗಳಿಗೆ ಬಾಕಿ ಇದೆ. ಸದ್ಯದ ನಿಯಮಗಳ ಪ್ರಕಾರ, ಜಿಎಸ್‌ಟಿ ಅಡಿಯಲ್ಲಿನ ಆದಾಯದಲ್ಲಿನ ಯಾವುದೇ ನಷ್ಟಕ್ಕೆ ಜೂನ್ 30ರ ವರೆಗೆ ರಾಜ್ಯಗಳನ್ನು ಸರಿದೂಗಿಸಲು ಕಡ್ಡಾಯಗೊಳಿಸಲಾಗಿದೆ. ಜುಲೈ 1, 2017ರಂದು ಅದರ ಅನುಷ್ಠಾನದ ನಂತರ ಸರ್ಕಾರವು ಶೇ 14ರ ವಾರ್ಷಿಕ ಜಿಎಸ್​ಟಿ ಆದಾಯದ ಬೆಳವಣಿಗೆಯನ್ನು ಊಹಿಸಿತ್ತು. ಆದಾಯ ನಷ್ಟವನ್ನು ರಾಜ್ಯಗಳಿಗೆ ಸರಿದೂಗಿಸಲು, ಸಂಪನ್ಮೂಲಗಳನ್ನು ಸಂಗ್ರಹಿಸಲು ಹಲವಾರು ಐಷಾರಾಮಿ ವಸ್ತುಗಳು ಮತ್ತು ಪಾಪದ ಸರಕುಗಳ (sin products) ಮೇಲೆ ಸೆಸ್ ವಿಧಿಸಲಾಯಿತು.

ಆದರೆ, ನಿಧಾನಗತಿಯ ಆರ್ಥಿಕತೆ ಮತ್ತು ಕೊವಿಡ್-19 ಸಾಂಕ್ರಾಮಿಕವು ಸೆಸ್ ಸಂಗ್ರಹಗಳನ್ನು ಕಡಿಮೆ ಆಗುವಂತೆ ಮಾಡಿತು, ಪರಿಹಾರ ನಿಧಿಯಲ್ಲಿ ಲಭ್ಯವಿರುವ ಹಣ ಮತ್ತು ಬಾಕಿಯ ನಡುವಿನ ಅಂತರವನ್ನು ಹೆಚ್ಚಿಸಿತು. ರಾಜ್ಯಗಳಿಗೆ ಜಿಎಸ್​ಟಿ ಪರಿಹಾರದಲ್ಲಿನ ಕೊರತೆಯನ್ನು ಭರಿಸಲು ಕೇಂದ್ರ ಸರ್ಕಾರವು ಹಣಕಾಸು ವರ್ಷ 2022ರಲ್ಲಿ ರೂ. 1.59 ಲಕ್ಷ ಕೋಟಿ ಮತ್ತು ಹಣಕಾಸು ವರ್ಷ 2021ರಲ್ಲಿ ರೂ. 1.1 ಲಕ್ಷ ಕೋಟಿಗಳನ್ನು ಮಾರುಕಟ್ಟೆಯಿಂದ ಎರವಲು ಪಡೆದುಕೊಂಡಿತು ಮತ್ತು ಅವುಗಳನ್ನು ರಾಜ್ಯಗಳಿಗೆ ವರ್ಗಾಯಿಸಿತು. ಪರಿಹಾರ ಸೆಸ್ 2026ರವರೆಗೆ ಮುಂದುವರಿಯುತ್ತದೆ, ಇದನ್ನು ಸಾಲದ ಬಾಧ್ಯತೆಗಳಿಗೆ ನಿಧಿಗೆ ಬಳಸಲಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಜಿಎಸ್‌ಟಿ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ; ಏಪ್ರಿಲ್‌ನಲ್ಲಿ ಸಂಗ್ರಹವಾಗಿದ್ದು ₹1.68 ಲಕ್ಷ ಕೋಟಿ: ಹಣಕಾಸು ಸಚಿವಾಲಯ

Published On - 11:03 pm, Tue, 31 May 22

ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ