AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Centre Grants: ಕರ್ನಾಟಕ ಸೇರಿ 17 ರಾಜ್ಯಗಳಿಗೆ ಕೇಂದ್ರದಿಂದ 9871 ಕೋಟಿ ರೂ. ಅನುದಾನ ಬಿಡುಗಡೆ

ಕೇಂದ್ರ ಸರ್ಕಾರವು ಕರ್ನಾಟಕ ಸೇರಿ 17 ರಾಜ್ಯಗಳಿಗೆ ಪೋಸ್ಟ್ ಡೆವ್ಯೂಲಷನ್ ಡೆಫಿಸಿಟ್ 9870 ಕೋಟಿ ರೂಪಾಯಿ ಬಿಡುಗಡೆ. ಆ ಬಗ್ಗೆ ವಿವರ ಇಲ್ಲಿದೆ.

Centre Grants: ಕರ್ನಾಟಕ ಸೇರಿ 17 ರಾಜ್ಯಗಳಿಗೆ ಕೇಂದ್ರದಿಂದ 9871 ಕೋಟಿ ರೂ. ಅನುದಾನ ಬಿಡುಗಡೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 10, 2021 | 5:17 PM

Share

ಕೇಂದ್ರ ಹಣಕಾಸು ಸಚಿವಾಲಯದಿಂದ (Finance Ministry) ಪೋಸ್ಟ್ ಡೆವೊಲ್ಯೂಷನ್ ರೆವೆನ್ಯೂ ಡೆಫಿಸಿಟ್ (PDRD)ನ ಐದನೇ ತಿಂಗಳ ಕಂತನ್ನು ಬಿಡುಗಡೆ ಮಾಡಲಾಗಿದೆ. ಜುಲೈ ತಿಂಗಳ ಮೊತ್ತವಾಗಿ 9871 ಕೋಟಿ ರೂಪಾಯಿ ಅನುದಾನವನ್ನು ಸೋಮವಾರ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಬಿಡುಗಡೆ ಮಾಡಲಾಗಿದೆ. ಇದರೊಂದಿಗೆ FY22ರಲ್ಲಿ ಒಟ್ಟಾರೆ ಮೊತ್ತವಾಗಿ ಅರ್ಹತೆ ಪಡೆದ ರಾಜ್ಯಗಳಿಗೆ 49,355 ಕೋಟಿ ರೂಪಾಯಿ ನೀಡಲಾಗಿದೆ. ಸಂವಿಧಾನದ ಪರಿಚ್ಛೇದ 275ರ ಅಡಿಯಲ್ಲಿ PDRD ಅನುದಾನವನ್ನು ಕೇಂದ್ರದಿಂದ ನೀಡಲಾಗುತ್ತದೆ. ಡೆವೊಲ್ಯೂಷನ್ ನಂತರ ರಾಜ್ಯಗಳ ಆದಾಯ ವ್ಯತ್ಯಾಸವನ್ನು ಗಮನದಲ್ಲಿ ಇಟ್ಟುಕೊಂಡು ಹದಿನೈದನೇ ಹಣಕಾಸು ಆಯೋಗದ (FFC) ಶಿಫಾರಸಿನಂತೆ ಅನುದಾನ ಬಿಡುಗಡೆ ಮಾಡಲಾಗುವುದು. FY22ರಲ್ಲಿ ಆಯೋಗದಿಂದ ಹದಿನೇಳು ರಾಜ್ಯಗಳಿಗೆ PDRD ಅನುದಾನವನ್ನು ಶಿಫಾರಸು ಮಾಡಲಾಗಿದೆ.

ರಾಜ್ಯಗಳ ಅನುದಾನ ಪಡೆಯುವ ಅರ್ಹತೆ ಹಾಗೂ ಯಾವ ಪ್ರಮಾಣದಲ್ಲಿ ಅನುದಾನ ಎಂಬುದನ್ನು ಹದಿನೈದನೇ ಹಣಕಾಸು ಆಯೋಗವೇ ತೀರ್ಮಾನ ಮಾಡುತ್ತದೆ. FY22ಗೆ ಅಸೆಸ್ಡ್ ಡೆವೊಲ್ಯೂಷನ್ ಗಣನೆಗೆ ತೆಗೆದುಕೊಂಡು, ರಾಜ್ಯಗಳ ಆದಾಯ ಮತ್ತು ವ್ಯಯದ ವ್ಯತ್ಯಾಸವನ್ನು ಮೌಲ್ಯಮಾಪನ ಮಾಡಿದ ಮೇಲೆ ಹದಿನೈದನೇ ಹಣಕಾಸು ಆಯೋಗದಿಂದ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ. ಆಯೋಗದಿಂದ ಒಟ್ಟು PDRD ಅನುದಾನ 1,18,452 ಕೋಟಿ ರೂಪಾಯಿಯನ್ನು 17 ರಾಜ್ಯಗಳಿಗೆ ಶಿಫಾರಸು ಮಾಡಲಾಗಿದೆ. ಇದರಲ್ಲಿ ಶೇ 41.67ರಷ್ಟು ಜುಲೈ ತನಕ ಬಿಡುಗಡೆ ಮಾಡಲಾಗಿದೆ.

ಹದಿನೈದನೇ ಹಣಕಾಸು ಆಯೋಗದಿಂದ PDRD ಅನುದಾನ ಶಿಫಾರಸು ಮಾಡಿದ ರಾಜ್ಯಗಳು ಹೀಗಿವೆ: ಆಂಧ್ರಪ್ರದೇಶ, ಅಸ್ಸಾಮ್, ಹರ್ಯಾಣ, ಹಿಮಾಚಲ ಪ್ರದೇಶ, ಕರ್ನಾಟಕ, ಕೇರಳ, ಮಣಿಪುರ್, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಪಂಜಾಬ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತ್ರಿಪುರಾ, ಉತ್ತರಾಖಂಡ್, ಪಶ್ಚಿಮ ಬಂಗಾಲ.

ಈ ತನಕ ಅನುದಾನದ ಪಾಲು ಹೆಚ್ಚು ಪಡೆದಿರುವುದರಲ್ಲಿ ಕೇರಳ (8,288 ಕೋಟಿ ರೂ.), ಪಶ್ಚಿಮ ಬಂಗಾಲ (7336 ಕೋಟಿ ರೂ.), ಆಂಧ್ರಪ್ರದೇಶ (7,190 ಕೋಟಿ ರೂ.) ಅತಿ ಹೆಚ್ಚಿನ ಮೊತ್ತವನ್ನು ಪಡೆದುಕೊಂಡಿವೆ.

ಇದನ್ನೂ ಓದಿ: ಜಿಎಸ್​ಟಿ ಬಾಕಿ ಹಣ 11,400 ಕೋಟಿ ರೂ. ನೀಡಲು ಕೇಂದ್ರ ಒಪ್ಪಿಗೆ; ಕೊರೊನಾ ಲಸಿಕೆ ಪೂರೈಕೆ ಹೆಚ್ಚಿಸುವ ಭರವಸೆ: ಸಿಎಂ ಬೊಮ್ಮಾಯಿ

(Central Government Releases Rs 9871 Crore Post Devolution Deficit Grant To 17 States Including Karnataka)

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ