AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CGHS: ಕೇಂದ್ರ ಸರ್ಕಾರ ಆರೋಗ್ಯ ಯೋಜನೆಯಲ್ಲಿ ಓಪಿಡಿ, ಆಸ್ಪತ್ರೆ ಬೆಡ್ ಚಾರ್ಜ್ ಇತ್ಯಾದಿ ದರ ಹೆಚ್ಚಳ; ಸರ್ಕಾರಕ್ಕೆ ಹೆಚ್ಚಿನ ಹೊರೆ

Central Government Health Scheme Updates: ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿದ ಮಾಹಿತಿ ಪ್ರಕಾರ ಸಿಜಿಎಚ್​ಎಸ್ ಯೋಜನೆ ಅಡಿ ಒಪಿಡಿ ಕನ್ಸಲ್ಟೇಶನ್ ಶುಲ್ಕ 150 ರೂನಿಂದ 350 ರೂಗೆ ಏರಿಸಲಾಗಿದೆ. ಐಪಿಡಿ ಕನ್ಸಲ್ಟೇಶ್ ಶುಲ್ಕವನ್ನು 300ರಿಂದ 350 ರೂಗೆ ಹೆಚ್ಚಿಸಲಾಗಿದೆ. ಐಸಿಯು ಸರ್ವಿಸ್ ಅನ್ನು 5,400 ರೂಗೆ ನಿಗದಿ ಮಾಡಲಾಗಿದೆ.

CGHS: ಕೇಂದ್ರ ಸರ್ಕಾರ ಆರೋಗ್ಯ ಯೋಜನೆಯಲ್ಲಿ ಓಪಿಡಿ, ಆಸ್ಪತ್ರೆ ಬೆಡ್ ಚಾರ್ಜ್ ಇತ್ಯಾದಿ ದರ ಹೆಚ್ಚಳ; ಸರ್ಕಾರಕ್ಕೆ ಹೆಚ್ಚಿನ ಹೊರೆ
ಆಸ್ಪತ್ರೆಗೆ ದಾಖಲು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 16, 2023 | 1:56 PM

Share

ಮುಖ್ಯಾಂಶಗಳು

  • ಸಿಜಿಎಚ್​ಎಸ್ ಆರೋಗ್ಯ ಯೋಜನೆಯಲ್ಲಿ 48 ಲಕ್ಷ ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರು, ಅವರ ಅವಲಂಬಿತರು ಫಲಾನುಭವಿಗಳಾಗಿದ್ದಾರೆ.
  • ಸಿಜಿಎಚ್​ಎಸ್ ಯೋಜನೆಯಲ್ಲಿ ಒಪಿಡಿ, ಐಪಿಡಿ ಕನ್ಸಲ್ಟೇಶನ್ ಫೀ, ಬೆಡ್ ಚಾರ್ಜ್ ಸೇರಿದಂತೆ ವಿವಿಧ ದರಗಳನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿ, ಹೆಚ್ಚಳ ಮಾಡಿದೆ.
  • ಸಿಜಿಎಚ್​ಎಸ್​ನ ವೆಲ್ನೆಸ್ ಸೆಂಟರ್​ನಿಂದ ರೆಫರಲ್ ಪಡೆದು ಆಸ್ಪತ್ರೆಗೆ ದಾಖಲಾಗುವ ಪ್ರಕ್ರಿಯೆಯನ್ನು ಸರ್ಕಾರ ತುಸು ಸರಳಗೊಳಿಸಿದೆ.

ನವದೆಹಲಿ: ಸೆಂಟ್ರಲ್ ಗವರ್ನ್ಮೆಂಟ್ ಹೆಲ್ತ್ ಸ್ಕೀಮ್ (CGHS- Central Government Health Scheme) ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಕೊಡುಗೆ ನೀಡುತ್ತಿದೆ. ಈ ಯೋಜನೆಯಲ್ಲಿರುವ ವಿವಿಧ ದರಗಳನ್ನು ಪರಿಷ್ಕರಿಸಲು ಸರ್ಕಾರ ನಿರ್ಧರಿಸಿದೆ. ಹಾಗೆಯೇ, ಆಸ್ಪತ್ರೆಗೆ ದಾಖಲಾಗಲು ಬೇಕಾದ ರೆಫರಲ್ ಪ್ರಕ್ರಿಯೆಯನ್ನೂ (Referral Process) ಸರ್ಕಾರ ಒಂದು ಹಂತ ಸರಳಗೊಳಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿದ ಮಾಹಿತಿ ಪ್ರಕಾರ ಸಿಜಿಎಚ್​ಎಸ್ ಯೋಜನೆ ಅಡಿ ಒಪಿಡಿ ಕನ್ಸಲ್ಟೇಶನ್ ಶುಲ್ಕ 150 ರೂನಿಂದ 350 ರೂಗೆ ಏರಿಸಲಾಗಿದೆ. ಐಪಿಡಿ ಕನ್ಸಲ್ಟೇಶ್ ಶುಲ್ಕವನ್ನು 300ರಿಂದ 350 ರೂಗೆ ಹೆಚ್ಚಿಸಲಾಗಿದೆ. ಐಸಿಯು ಸರ್ವಿಸ್ ಅನ್ನು 5,400 ರೂಗೆ ನಿಗದಿ ಮಾಡಲಾಗಿದೆ. ಫಲಾನುಭವಿ ದಾಖಲಾಗುವ ಆಸ್ಪತ್ರೆಯಲ್ಲಿ ವಿವಿಧ ಬೆಡ್ ಚಾರ್ಜ್ ದರಗಳನ್ನೂ ಹೆಚ್ಚಿಸಲಾಗಿದೆ. ಈ ಹೆಚ್ಚುವರಿ ದರಗಳಿಂದ ಸರ್ಕಾರಕ್ಕೆ 240 ಕೋಟಿ ರೂನಿಂದ 300 ಕೋಟಿ ರೂಗೆ ಹೆಚ್ಚುವರಿ ವೆಚ್ಚ ತಗುಲುವ ನಿರೀಕ್ಷೆ ಇದೆ.

ಏನಿದು CGHS ಸ್ಕೀಮ್? ಯಾರಿಗೆ ಇದೆ ಈ ಆರೋಗ್ಯ ಯೋಜನೆ?

ಸೆಂಟ್ರಲ್ ಗವರ್ನ್ಮೆಂಟ್ ಹೆಲ್ತ್ ಸ್ಕೀಮ್ ಯೋಜನೆಯು ಕೇಂದ್ರ ಸರ್ಕಾರೀ ನೌಕರರು, ಪಿಂಚಣಿದಾರರು ಹಾಗೂ ಅವರ ಅವಲಂಬಿತರಿಗೆ ಇರುವ ಆರೋಗ್ಯ ವಿಮಾ ಸೇವೆಯಾಗಿದೆ. ಇವರಷ್ಟೇ ಅಲ್ಲದೇ, ಸ್ವಾತಂತ್ರ್ಯ ಹೋರಾಟಗಾರರು, ಮಾಜಿ ರಾಜ್ಯಪಾಲರು, ಮಾಜಿ ಲೆಫ್ಟಿನೆಂಟ್ ಗವರ್ನರುಗಳು, ಹೈಕೋರ್ಟ್ ನಿವೃತ್ತ ನ್ಯಾಯಾಧೀಶರು, ರೈಲ್ವೆ ಬೋರ್ಡ್ ಉದ್ಯೋಗಿಗಳು, ಮಾಜಿ ಮತ್ತು ಹಾಲಿ ಸಂಸದರು, ಪೋಸ್ಟಲ್ ಮತ್ತು ಟೆಲಿಗ್ರಾಫ್ ಇಲಾಖೆಯ ಉದ್ಯೋಗಿಗಳೂ ಈ ಯೋಜನೆಗೆ ನೊಂದಾಯಿಸಿಕೊಳ್ಳಬಹುದು. ಈ ಸ್ಕೀಮ್​ನಲ್ಲಿ ಒಟ್ಟು 42 ಲಕ್ಷದಷ್ಟು ಫಲಾನುಭವಿಗಳಿದ್ದಾರೆ.

ಇದನ್ನೂ ಓದಿಸಾಲ ಪಡೆದು ಷೇರು ಮಾರುಕಟ್ಟೆಗೆ ಹೂಡಿಕೆ ಮಾಡುವುದು ಒಳ್ಳೆಯದೇ? ಈ ಅಪಾಯಗಳ ಬಗ್ಗೆ ಇರಲಿ ಎಚ್ಚರಿಕೆ

ಸೆಂಟ್ರಲ್ ಗವರ್ನ್ಮೆಂಟ್ ಹೆಲ್ತ್ ಸ್ಕೀಮ್​ನಲ್ಲಿ ಪರಿಷ್ಕರಣೆಯಾದ ಮೊತ್ತ ಎಷ್ಟು?

  • ಒಪಿಡಿ ದರ: 150ರಿಂದ 350 ರುಪಾಯಿಗೆ ಹೆಚ್ಚಳ
  • ಐಪಿಡಿ ಕನ್ಸಲ್ಟೇಶನ್ ಶುಲ್ಕ: 300 ರೂನಿಂದ 350 ರೂಗೆ ಹೆಚ್ಚಳ
  • ಐಸಿಯು ಸರ್ವಿಸಸ್: 5,400
  • ಆಸ್ಪತ್ರೆಯ ಜನರಲ್ ರೂಮ್ ಬಾಡಿಗೆ ದರ: 1000 ರೂನಿಂದ 1,500 ರೂಗೆ ಹೆಚ್ಚಳ
  • ಸೆಮಿ ಪ್ರೈವೇಟ್ ವಾರ್ಡ್: 2,000 ರೂನಿಂದ 3,500 ರೂಗೆ ಹೆಚ್ಚಳ
  • ಖಾಸಗಿ ರೂಮ್ ದರ: 3,000 ರೂನಿಂದ 4,500 ರೂಗೆ ಹೆಚ್ಚಳ

ವೆಲ್​ನೆಸ್ ಸೆಂಟರ್​ನಿಂದ ಶಿಫಾರಸು ಪ್ರಕ್ರಿಯೆಯೂ ಸರಳ

ಸಿಜಿಎಚ್​ಎಸ್ ಸ್ಕೀಮ್​ನ ಫಲಾನುಭವಿಗಳು ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಲು ಆಗುವುದಿಲ್ಲ. ಅವರು ಸಿಜಿಎಚ್​ಎಸ್ ನಿಗದಿಪಡಿಸಿದ ಆರೋಗ್ಯ ಕೇಂದ್ರದಿಂದ (ವೆಲ್​ನೆಸ್ ಸೆಂಟರ್) ರೆಫರ್ ಮಾಡಲಾಗುವ ಆಸ್ಪತ್ರೆಗೆ ದಾಖಲಾಗಬೇಕು. ಅಥವಾ ತಮಗೆ ಬೇಕಾದ ಆಸ್ಪತ್ರೆಗೆ ದಾಖಲಾಗಬೇಕೆಂದರೂ ವೆಲ್​ನೆಸ್ ಸೆಂಟರ್​ನಿಂದ ಶಿಫಾರಸು ಪಡೆಯಬೇಕು. ಈಗ ಈ ಪ್ರಕ್ರಿಯೆಯನ್ನು ಸರ್ಕಾರ ತುಸು ಸರಳಗೊಳಿಸಲಾಗಿದೆ.

ಇದನ್ನೂ ಓದಿPMFBY: ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆ ಪರಿಣಾಮಕಾರಿ ಅನುಷ್ಠಾನದಲ್ಲಿ ಕರ್ನಾಟಕ ನಂ.1

ಈ ಮುಂಚೆ, ಸಿಜಿಎಚ್​ಎಸ್ ಯೋಜನೆಯ ಫಲಾನುಭವಿಯೇ ಖುದ್ದಾಗಿ ಈ ವೆಲ್​ನೆಸ್ ಸೆಂಟರ್​ಗೆ ಹೋಗಿ ಆಸ್ಪತ್ರೆಗೆ ದಾಖಲಾಗಲು ಶಿಫಾರಸು ಪಡೆಯಬೇಕಿತ್ತು. ಆದರೆ, ಈಗ ಫಲಾನುಭವಿಯ ಪರ ಯಾರಾದರೂ ವ್ಯಕ್ತಿ ಸೂಕ್ತ ದಾಖಲೆಗಳೊಂದಿಗೆ ವೆಲ್​ನೆಸ್ ಸೆಂಟರ್​ಗೆ ಹೋಗಿ ಆಸ್ಪತ್ರೆಗೆ ದಾಖಲಾಗಲು ಶಿಫಾರಸು ಪಡೆಯಬಹುದು. ಅಥವಾ ಫಲಾನುಭವಿಯು ವೆಲ್​ನೆಸ್ ಸೆಂಟರ್​ನ ವೈದ್ಯಾಧಿಕಾರಿಗೆ ವಿಡಿಯೋ ಕರೆ ಮಾಡಿಯೂ ರೆಫರಲ್ ಪಡೆಯಬಹುದು.

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ