Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಟ್ನರ್ ವೀಸಾ, ಕಾನ್ಸುಲಾರ್ ಸರ್ವಿಸ್ ನಿಯಮಗಳಲ್ಲಿ ಬದಲಾವಣೆ ತಂದ ಸರ್ಕಾರ

Quality Service In Indian Missions: ಗುಣಮಟ್ಟದ ಸೇವೆ, ಸೂಕ್ತ ಬೆಲೆ, ದತ್ತಾಂಶ ರಕ್ಷಣೆ ಮತ್ತು ಭದ್ರತೆ ಮತ್ತು ನೈತಿಕ ನಡಾವಳಿ ಈ ನಾಲ್ಕು ಅಂಶಗಳನ್ನು ಗಮನದಲ್ಲಿಟ್ಟುಕೊಂಡು ನಿಯಮಗಳನ್ನು ಬಿಗಿಗೊಳಿಸಲಾಗಿದೆ. ಯಾವುದೇ ವ್ಯಕ್ತಿ ಭಾರತಕ್ಕೆ ಬರುವಾಗ ಮೊದಲು ಸಂಪರ್ಕಕ್ಕೆ ಬರುವುದು ರಾಜತಾಂತ್ರಿಕ ಕಚೇರಿಯಾದ್ದರಿಂದ ಅಲ್ಲಿ ಉತ್ಕೃಷ್ಟ ಗುಣಮಟ್ಟದ ಸೇವೆ ಒದಗಿಸಲು ನಿರ್ಧರಿಸಲಾಗಿದೆ.

ಪಾರ್ಟ್ನರ್ ವೀಸಾ, ಕಾನ್ಸುಲಾರ್ ಸರ್ವಿಸ್ ನಿಯಮಗಳಲ್ಲಿ ಬದಲಾವಣೆ ತಂದ ಸರ್ಕಾರ
ಸಾಂದರ್ಭಿಕ ಚಿತ್ರ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 01, 2023 | 10:59 AM

ನವದೆಹಲಿ, ಸೆಪ್ಟೆಂಬರ್ 1: ಪಾರ್ಟ್ನರ್ ವೀಸಾ ಮತ್ತು ಕಾನ್ಸುಲಾರ್ ಸರ್ವಿಸ್ ವಿಚಾರದಲ್ಲಿ ನಿಯಮಗಳನ್ನು ಬಿಗಿಗೊಳಿಸಲಾಗಿದೆ. ಪಾರ್ಟ್ನರ್ ವೀಸಾ ಮತ್ತು ಕಾನ್ಸುಲಾರ್ ಸೇವೆ ದುಬಾರಿಯಾಗದಂತೆ ನಿಯಂತ್ರಿಸಲು ಮತ್ತು ದೇಶದ ಘನತೆಗೆ ಕುಂದುಂಟಾಗದಂತೆ ನಿಯಂತ್ರಿಸಲು ಕೇಂದ್ರ ವಿದೇಶ ವ್ಯವಹಾರಗಳ ಸಚಿವಾಲಯ (MEA- Ministry of external Affairs) ಈ ಕ್ರಮ ಕೈಗೊಂಡಿರುವುದು ತಿಳಿದುಬಂದಿದೆ. ವಿದೇಶದಿಂದ ಭಾರತಕ್ಕೆ ಬರುವ ಯಾವುದೇ ವ್ಯಕ್ತಿಗೆ ಭಾರತದ ರಾಜತಾಂತ್ರಿಕ ಕಚೇರಿ (Indian Mission) ಮೊದಲ ಸಂಪರ್ಕ ಕೊಂಡಿಯಾಗಿರುತ್ತದೆ. ಈ ಹಿನ್ನೆಲೆಯಲ್ಲಿ ರಾಜತಾಂತ್ರಿಕ ಕಚೇರಿಯ ನಿಯಮಗಳು ಬಹಳ ಮುಖ್ಯ ಎನಿಸುತ್ತವೆ.

ಗುಣಮಟ್ಟದ ಸೇವೆ, ಸೂಕ್ತ ಬೆಲೆ, ದತ್ತಾಂಶ ರಕ್ಷಣೆ ಮತ್ತು ಭದ್ರತೆ ಮತ್ತು ನೈತಿಕ ನಡಾವಳಿ ಈ ನಾಲ್ಕು ಅಂಶಗಳನ್ನು ಗಮನದಲ್ಲಿಟ್ಟುಕೊಂಡು ನಿಯಮಗಳನ್ನು ಬಿಗಿಗೊಳಿಸಲಾಗಿದೆ. ಯಾವುದೇ ವ್ಯಕ್ತಿ ಭಾರತಕ್ಕೆ ಬರುವಾಗ ಮೊದಲು ಸಂಪರ್ಕಕ್ಕೆ ಬರುವುದು ರಾಜತಾಂತ್ರಿಕ ಕಚೇರಿಯಾದ್ದರಿಂದ ಅಲ್ಲಿ ಉತ್ಕೃಷ್ಟ ಗುಣಮಟ್ಟದ ಸೇವೆ ಒದಗಿಸುವುದು ಬಹಳ ಮುಖ್ಯ ಎಂದು ಭಾರತೀಯ ಪ್ರವಾಸೀ ಏಜೆಂಟ್​ಗಳ ಸಂಘದ ಅಧ್ಯಕ್ಷೆ ಜ್ಯೋತಿ ಮಾಯಾಲ್ ಹೇಳುತ್ತಾರೆ.

ಇದನ್ನೂ ಓದಿ: ಒಂದು ರಾಷ್ಟ್ರ, ಒಂದು ಚುನಾವಣೆ ಸಾಧಕ-ಭಾದಕ ತಿಳಿಯಲು ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿ ರಚಿಸಿದ ಕೇಂದ್ರ

ವ್ಯಾಪಾರ, ಅಂತಾರಾಷ್ಟ್ರೀಯ ಸೇವೆ, ನಾಗರಿಕ ಸೇವೆ ಇತ್ಯಾದಿ ಹಲವಾರು ವಲಯಗಳಲ್ಲಿ ಭಾರತ ಜಾಗತಿಕ ನಾಯಕನಾಗಿ ಗುರುತಿಸಿಕೊಳ್ಳುತ್ತಿದೆ. ನವಭಾರತ ನಿರ್ಮಿಸುವ ಭರವಸೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. ಈ ಹಂತದಲ್ಲಿ ಭಾರತ ಸರ್ಕಾರಕ್ಕೆ ಅದರ ವಿದೇಶಾಂಗ ಸಚಿವಾಲಯ ಮತ್ತು ರಾಜತಾಂತ್ರಿಕ ಕಚೇರಿಗಳು ಪ್ರತಿನಿಧಿಗಳೆನಿಸುತ್ತವೆ. ಹೀಗಾಗಿ ಅಲ್ಲಿ ಬಹಳ ಕಾರ್ಯಕ್ಷಮತೆಯ ಮತ್ತು ಗುಣಮಟ್ಟದ ಸೇವೆಗಳನ್ನು ಒದಗಿಸುವ ವ್ಯವಸ್ಥೆ ಇರಬೇಕು. ಇಲ್ಲದಿದ್ದರೆ ಸರ್ಕಾರದ ಸಾಮರ್ಥ್ಯದ ಬಗ್ಗೆ ನಂಬುಗೆ ಕಡಿಮೆ ಆಗಬಹುದು ಎಂದು ಜ್ಯೋತಿ ಮಾಯಾಲ್ ಅವರ ಅನಿಸಿಕೆ.

ಈ ಕಾರಣಕ್ಕೆ ಪಾರ್ಟ್ನರ್ ವೀಸಾ ಮತ್ತು ರಾಜತಾಂತ್ರಿಕ ಸೇವೆ ನೀಡಲು ನಿಯಮಗಳನ್ನು ಪರಿಷ್ಕರಿಸಿ, ಗುಣಮಟ್ಟದ ಸೇವೆ ಒದಗಿಸಲು ಸರ್ಕಾರ ಮುಂದಾಗಿದೆ. ಪಾರ್ಟ್ನರ್ ವಿಸಾ ಎಂದರೆ, ಬೇರೆ ದೇಶದಲ್ಲಿ ವಾಸಿಸುವ ವ್ಯಕ್ತಿಯನ್ನು ಭಾರತೀಯ ಪ್ರಜೆ ವಿವಾಹವಾಗಿ ವಿದೇಶಕ್ಕೆ ಹೋಗಿ ಸೇರಲು ಪಾರ್ಟ್ನರ್ ವೀಸಾ ಪಡೆಯಬೇಕು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು