AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಟ್ನರ್ ವೀಸಾ, ಕಾನ್ಸುಲಾರ್ ಸರ್ವಿಸ್ ನಿಯಮಗಳಲ್ಲಿ ಬದಲಾವಣೆ ತಂದ ಸರ್ಕಾರ

Quality Service In Indian Missions: ಗುಣಮಟ್ಟದ ಸೇವೆ, ಸೂಕ್ತ ಬೆಲೆ, ದತ್ತಾಂಶ ರಕ್ಷಣೆ ಮತ್ತು ಭದ್ರತೆ ಮತ್ತು ನೈತಿಕ ನಡಾವಳಿ ಈ ನಾಲ್ಕು ಅಂಶಗಳನ್ನು ಗಮನದಲ್ಲಿಟ್ಟುಕೊಂಡು ನಿಯಮಗಳನ್ನು ಬಿಗಿಗೊಳಿಸಲಾಗಿದೆ. ಯಾವುದೇ ವ್ಯಕ್ತಿ ಭಾರತಕ್ಕೆ ಬರುವಾಗ ಮೊದಲು ಸಂಪರ್ಕಕ್ಕೆ ಬರುವುದು ರಾಜತಾಂತ್ರಿಕ ಕಚೇರಿಯಾದ್ದರಿಂದ ಅಲ್ಲಿ ಉತ್ಕೃಷ್ಟ ಗುಣಮಟ್ಟದ ಸೇವೆ ಒದಗಿಸಲು ನಿರ್ಧರಿಸಲಾಗಿದೆ.

ಪಾರ್ಟ್ನರ್ ವೀಸಾ, ಕಾನ್ಸುಲಾರ್ ಸರ್ವಿಸ್ ನಿಯಮಗಳಲ್ಲಿ ಬದಲಾವಣೆ ತಂದ ಸರ್ಕಾರ
ಸಾಂದರ್ಭಿಕ ಚಿತ್ರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 01, 2023 | 10:59 AM

Share

ನವದೆಹಲಿ, ಸೆಪ್ಟೆಂಬರ್ 1: ಪಾರ್ಟ್ನರ್ ವೀಸಾ ಮತ್ತು ಕಾನ್ಸುಲಾರ್ ಸರ್ವಿಸ್ ವಿಚಾರದಲ್ಲಿ ನಿಯಮಗಳನ್ನು ಬಿಗಿಗೊಳಿಸಲಾಗಿದೆ. ಪಾರ್ಟ್ನರ್ ವೀಸಾ ಮತ್ತು ಕಾನ್ಸುಲಾರ್ ಸೇವೆ ದುಬಾರಿಯಾಗದಂತೆ ನಿಯಂತ್ರಿಸಲು ಮತ್ತು ದೇಶದ ಘನತೆಗೆ ಕುಂದುಂಟಾಗದಂತೆ ನಿಯಂತ್ರಿಸಲು ಕೇಂದ್ರ ವಿದೇಶ ವ್ಯವಹಾರಗಳ ಸಚಿವಾಲಯ (MEA- Ministry of external Affairs) ಈ ಕ್ರಮ ಕೈಗೊಂಡಿರುವುದು ತಿಳಿದುಬಂದಿದೆ. ವಿದೇಶದಿಂದ ಭಾರತಕ್ಕೆ ಬರುವ ಯಾವುದೇ ವ್ಯಕ್ತಿಗೆ ಭಾರತದ ರಾಜತಾಂತ್ರಿಕ ಕಚೇರಿ (Indian Mission) ಮೊದಲ ಸಂಪರ್ಕ ಕೊಂಡಿಯಾಗಿರುತ್ತದೆ. ಈ ಹಿನ್ನೆಲೆಯಲ್ಲಿ ರಾಜತಾಂತ್ರಿಕ ಕಚೇರಿಯ ನಿಯಮಗಳು ಬಹಳ ಮುಖ್ಯ ಎನಿಸುತ್ತವೆ.

ಗುಣಮಟ್ಟದ ಸೇವೆ, ಸೂಕ್ತ ಬೆಲೆ, ದತ್ತಾಂಶ ರಕ್ಷಣೆ ಮತ್ತು ಭದ್ರತೆ ಮತ್ತು ನೈತಿಕ ನಡಾವಳಿ ಈ ನಾಲ್ಕು ಅಂಶಗಳನ್ನು ಗಮನದಲ್ಲಿಟ್ಟುಕೊಂಡು ನಿಯಮಗಳನ್ನು ಬಿಗಿಗೊಳಿಸಲಾಗಿದೆ. ಯಾವುದೇ ವ್ಯಕ್ತಿ ಭಾರತಕ್ಕೆ ಬರುವಾಗ ಮೊದಲು ಸಂಪರ್ಕಕ್ಕೆ ಬರುವುದು ರಾಜತಾಂತ್ರಿಕ ಕಚೇರಿಯಾದ್ದರಿಂದ ಅಲ್ಲಿ ಉತ್ಕೃಷ್ಟ ಗುಣಮಟ್ಟದ ಸೇವೆ ಒದಗಿಸುವುದು ಬಹಳ ಮುಖ್ಯ ಎಂದು ಭಾರತೀಯ ಪ್ರವಾಸೀ ಏಜೆಂಟ್​ಗಳ ಸಂಘದ ಅಧ್ಯಕ್ಷೆ ಜ್ಯೋತಿ ಮಾಯಾಲ್ ಹೇಳುತ್ತಾರೆ.

ಇದನ್ನೂ ಓದಿ: ಒಂದು ರಾಷ್ಟ್ರ, ಒಂದು ಚುನಾವಣೆ ಸಾಧಕ-ಭಾದಕ ತಿಳಿಯಲು ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿ ರಚಿಸಿದ ಕೇಂದ್ರ

ವ್ಯಾಪಾರ, ಅಂತಾರಾಷ್ಟ್ರೀಯ ಸೇವೆ, ನಾಗರಿಕ ಸೇವೆ ಇತ್ಯಾದಿ ಹಲವಾರು ವಲಯಗಳಲ್ಲಿ ಭಾರತ ಜಾಗತಿಕ ನಾಯಕನಾಗಿ ಗುರುತಿಸಿಕೊಳ್ಳುತ್ತಿದೆ. ನವಭಾರತ ನಿರ್ಮಿಸುವ ಭರವಸೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. ಈ ಹಂತದಲ್ಲಿ ಭಾರತ ಸರ್ಕಾರಕ್ಕೆ ಅದರ ವಿದೇಶಾಂಗ ಸಚಿವಾಲಯ ಮತ್ತು ರಾಜತಾಂತ್ರಿಕ ಕಚೇರಿಗಳು ಪ್ರತಿನಿಧಿಗಳೆನಿಸುತ್ತವೆ. ಹೀಗಾಗಿ ಅಲ್ಲಿ ಬಹಳ ಕಾರ್ಯಕ್ಷಮತೆಯ ಮತ್ತು ಗುಣಮಟ್ಟದ ಸೇವೆಗಳನ್ನು ಒದಗಿಸುವ ವ್ಯವಸ್ಥೆ ಇರಬೇಕು. ಇಲ್ಲದಿದ್ದರೆ ಸರ್ಕಾರದ ಸಾಮರ್ಥ್ಯದ ಬಗ್ಗೆ ನಂಬುಗೆ ಕಡಿಮೆ ಆಗಬಹುದು ಎಂದು ಜ್ಯೋತಿ ಮಾಯಾಲ್ ಅವರ ಅನಿಸಿಕೆ.

ಈ ಕಾರಣಕ್ಕೆ ಪಾರ್ಟ್ನರ್ ವೀಸಾ ಮತ್ತು ರಾಜತಾಂತ್ರಿಕ ಸೇವೆ ನೀಡಲು ನಿಯಮಗಳನ್ನು ಪರಿಷ್ಕರಿಸಿ, ಗುಣಮಟ್ಟದ ಸೇವೆ ಒದಗಿಸಲು ಸರ್ಕಾರ ಮುಂದಾಗಿದೆ. ಪಾರ್ಟ್ನರ್ ವಿಸಾ ಎಂದರೆ, ಬೇರೆ ದೇಶದಲ್ಲಿ ವಾಸಿಸುವ ವ್ಯಕ್ತಿಯನ್ನು ಭಾರತೀಯ ಪ್ರಜೆ ವಿವಾಹವಾಗಿ ವಿದೇಶಕ್ಕೆ ಹೋಗಿ ಸೇರಲು ಪಾರ್ಟ್ನರ್ ವೀಸಾ ಪಡೆಯಬೇಕು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ