AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Bond ETF: ಭಾರತ್ ಬಾಂಡ್ ಇಟಿಎಫ್ ಮುಂದಿನ ಕಂತು ವಿತರಣೆ ಡಿಸೆಂಬರ್​ನೊಳಗೆ ಪ್ರಾರಂಭ

ಕೇಂದ್ರ ಸರ್ಕಾರವು ಭಾರತ್ ಬಾಂಡ್ ಮೂರನೇ ಕಂತಿನ ವಿತರಣೆಯನ್ನು ಈ ವರ್ಷದ ಡಿಸೆಂಬರ್​ನಲ್ಲಿ ಮಾಡುವ ಸಾಧ್ಯತೆ ಇದೆ. ಆ ಬಗ್ಗೆ ವಿವರಗಳು ಈ ಲೇಖನದಲ್ಲಿದೆ.

Bharat Bond ETF: ಭಾರತ್ ಬಾಂಡ್ ಇಟಿಎಫ್ ಮುಂದಿನ ಕಂತು ವಿತರಣೆ ಡಿಸೆಂಬರ್​ನೊಳಗೆ ಪ್ರಾರಂಭ
ಪ್ರಾತಿನಿಧಿಕ ಚಿತ್ರ
TV9 Web
| Updated By: Srinivas Mata|

Updated on:Oct 25, 2021 | 11:24 PM

Share

ಭಾರತ್ ಬಾಂಡ್ (ಎಕ್ಸ್‌ಚೇಂಜ್ ಟ್ರೇಡೆಡ್ ಫಂಡ್) ಇಟಿಎಫ್‌ನ ಮುಂದಿನ ಕಂತನ್ನು ಈ ವರ್ಷದ ಡಿಸೆಂಬರ್‌ನೊಳಗೆ ಸರ್ಕಾರವು ಪ್ರಾರಂಭಿಸಲಿದೆ ಮತ್ತು ಕೇಂದ್ರ ಸಾರ್ವಜನಿಕ ವಲಯದ ಉದ್ಯಮಗಳ ಬೆಳವಣಿಗೆಯ ಯೋಜನೆಗಳಿಗೆ 10,000 ಕೋಟಿ ರೂಪಾಯಿಗಿಂತ ಹೆಚ್ಚಿನ ಹಣವನ್ನು ಸಂಗ್ರಹಿಸುವ ನಿರೀಕ್ಷೆಯಿದೆ ಎಂದು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. CPSEಗಳ ನಿಧಿಯ ಅಗತ್ಯಗಳನ್ನು ರೂಪಿಸಲಾಗುತ್ತಿದೆ ಮತ್ತು ಕ್ಯಾಲೆಂಡರ್ ವರ್ಷದ ಅಂತ್ಯದ ವೇಳೆಗೆ ಮೂರನೇ ಕಂತನ್ನು ಪ್ರಾರಂಭಿಸಲಾಗುವುದು. ಈ ಮೊತ್ತವನ್ನು ಇನ್ನೂ ಅಂತಿಮಗೊಳಿಸಿಲ್ಲ ಎಂದು ಅವರು ಹೇಳಿದ್ದಾರೆ. ಆದರೆ ಇದು 10,000 ಕೋಟಿ ರೂಪಾಯಿಗಳಿಗಿಂತ ಹೆಚ್ಚಿರುತ್ತದೆ ಎಂದು ಆ ಅಧಿಕಾರಿ ಹೇಳಿದ್ದಾರೆ.

ಎರಡನೇ ಕಂತು ಮೂರು ಪಟ್ಟು ಹೆಚ್ಚು ಸಬ್​ಸ್ಕ್ರೈಬ್ ಆಗಿತ್ತು ಸದ್ಯಕ್ಕೆ ಇಟಿಎಫ್ ಸಾರ್ವಜನಿಕ ವಲಯದ ಕಂಪೆನಿಗಳ AAA ರೇಟ್ ಬಾಂಡ್‌ಗಳಲ್ಲಿ ಮಾತ್ರ ಹೂಡಿಕೆ ಮಾಡುತ್ತದೆ. ಸಾಲ ಇಟಿಎಫ್ ಮೂಲಕ ಸಂಗ್ರಹಿಸಿದ ನಿಧಿಯು ಭಾಗವಹಿಸುವ ಸಿಪಿಎಸ್‌ಇ ಅಥವಾ ಸಾರ್ವಜನಿಕ ವಲಯದ ಬ್ಯಾಂಕ್​ಗಳ ಸಾಲ ಯೋಜನೆಗಳನ್ನು ಸುಗಮಗೊಳಿಸಲು ಸಹಾಯ ಮಾಡುತ್ತದೆ. ಇದು ಅವರ ಬಂಡವಾಳ ವೆಚ್ಚದ ಅಗತ್ಯಗಳನ್ನು ಪೂರೈಸಲು ಸಹಾಯ ಮಾಡುತ್ತದೆ.

2020ರ ಜುಲೈನಲ್ಲಿ ಪ್ರಾರಂಭವಾದ ಎರಡನೇ ಕಂತಿನಲ್ಲಿ ಮೂರು ಪಟ್ಟು ಹೆಚ್ಚು ಸಬ್‌ಸ್ಕ್ರೈಬ್ ಆಗಿದ್ದು, ಸುಮಾರು 11,000 ಕೋಟಿ ರೂಪಾಯಿ ಸಂಗ್ರಹಿಸಲಾಗಿತ್ತು. ಇಟಿಎಫ್ ತನ್ನ ಮೊದಲ ಆಫರ್​ನಲ್ಲಿ 2019ರ ಡಿಸೆಂಬರ್‌ನಲ್ಲಿ ಸುಮಾರು 12,400 ಕೋಟಿ ರೂಪಾಯಿಗಳ ಪಡೆಯಿತು.

ಎರಡನೇ ಕಂತಿನಲ್ಲಿ ಭಾರತ್ ಬಾಂಡ್ ಇಟಿಎಫ್‌ನಿಂದ ಐದು ಮತ್ತು 12 ವರ್ಷಗಳ ಮೆಚ್ಯೂರಿಟಿ ಆಯ್ಕೆಗಳನ್ನು ನೀಡಲಾಗಿತ್ತು. ಆದರೆ ಮೊದಲ ಕಂತಿನಲ್ಲಿ ಮೂರು ಮತ್ತು 10 ವರ್ಷಗಳ ಆಯ್ಕೆಯನ್ನು ನೀಡಲಾಗಿತ್ತು. ಎಡ್ಲ್​ವೀಸ್ ಅಸೆಟ್ ಮ್ಯಾನೇಜ್‌ಮೆಂಟ್ ಈ ಯೋಜನೆಯ ಫಂಡ್ ಮ್ಯಾನೇಜರ್ ಆಗಿದೆ.

ಇದನ್ನೂ ಓದಿ: Sovereign Gold Bond: ಸವರನ್ ಗೋಲ್ಡ್​ ಬಾಂಡ್​ನ ಬಾಕಿ ನಾಲ್ಕು ಕಂತುಗಳ ವಿತರಣೆ ಅಕ್ಟೋಬರ್ 25ರಿಂದ ಶುರು

Published On - 11:23 pm, Mon, 25 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ