AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PF: ಸಂಘಟಿತ ವಲಯದ ಉದ್ಯೋಗದಾತರು, ಉದ್ಯೋಗಿಗಳ ಪಿಎಫ್​ ಪಾಲು 2022ರ ತನಕ ಕೇಂದ್ರದಿಂದಲೇ ಪಾವತಿ

ಉದ್ಯೋಗದಾತರು, ಉದ್ಯೋಗಿಗಳ ಪಿಎಫ್​ ಕೊಡುಗೆಯನ್ನು 2022ರ ತನಕ ಕೇಂದ್ರದಿಂದಲೇ ಪಾವತಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ.

PF: ಸಂಘಟಿತ ವಲಯದ ಉದ್ಯೋಗದಾತರು, ಉದ್ಯೋಗಿಗಳ ಪಿಎಫ್​ ಪಾಲು 2022ರ ತನಕ ಕೇಂದ್ರದಿಂದಲೇ ಪಾವತಿ
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 21, 2021 | 8:25 PM

Share

ಆತ್ಮನಿರ್ಭರ್ ಭಾರತ್ ಪ್ಯಾಕೇಜ್ ಅಡಿಯಲ್ಲಿ ಕಳೆದ ವರ್ಷ ಘೋಷಣೆ ಮಾಡಿ ವಿಚಾರವನ್ನು ಮತ್ತೊಮ್ಮೆ ತಿಳಿಸುತ್ತಾ, ಕೇಂದ್ರ ಹಣಕಾಸು ಸಚಿವೆ ಈ ಬಗ್ಗೆ ತಿಳಿಸಿದ್ದಾರೆ ಎಂದು ಎಎನ್ಐ ಟ್ವೀಟ್​ನಲ್ಲಿ ಸ್ಪಷ್ಟಪಡಿಸಲಾಗಿದೆ. ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸಣ್ಣ ಸಂಸ್ಥೆಗಳಲ್ಲಿ ಉದ್ಯೋಗ ಮಾಡುವವರಿಗೆ ಹಾಗೂ ಸಣ್ಣ ಸಂಸ್ಥೆಗಳನ್ನು ನಡೆಸುವವರಿಗೆ ಬೆಂಬಲ ನೀಡುವ ಉದ್ದೇಶದಿಂದ ಕೆಲವು ಷರತ್ತುಗಳೊಂದಿಗೆ, ಉದ್ಯೋಗದಾತರು ಮತ್ತು ಉದ್ಯೋಗಿಗಳ ಪಿಎಫ್​ ಕೊಡುಗೆಯನ್ನು ಸರ್ಕಾರದಿಂದಲೇ ಪಾವತಿ ಮಾಡಲಾಗುವುದು ಎಂದು ತಿಳಿಸಲಾಗಿತ್ತು.

ಇದಕ್ಕೂ ಮುನ್ನ, ಕೆಲಸ ಕಳೆದುಕೊಂಡು, ಆ ನಂತರ ಅವರನ್ನು ಮತ್ತೆ ಕೆಲಸಕ್ಕೆ ಕರೆಸಿಕೊಂಡಿದ್ದಲ್ಲಿ ಅಂತಹ ಸಂಘಟಿತ ವಲಯದ ಇಪಿಎಫ್​ಒ ನೋಂದಾಯಿತ ಸಣ್ಣ ಪ್ರಮಾಣದ ಘಟಕಗಳ ಉದ್ಯೋಗದಾತರು ಮತ್ತು ಉದ್ಯೋಗಿಗಳ ಪಿಎಫ್​ ಪಾಲನ್ನು 2022ರ ತನಕ ಕೇಂದ್ರ ಸರ್ಕಾರವೇ ಪಾವತಿಸುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ ಎಂದು ಎಎನ್​ಐ ತಿಳಿಸಿತ್ತು.

ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್​ಡೌನ್ ಹೇರಿದ್ದ ಕಾರಣಕ್ಕೆ ಉತ್ಪಾದನೆ, ಪೂರೈಕೆ ಜಾಲ ಹಾಗೂ ಬೇಡಿಕೆಯಲ್ಲಿ ಭಾರೀ ಏರುಪೇರಾಗಿತ್ತು. ಸಣ್ಣ- ಪುಟ್ಟ ಸಂಸ್ಥೆಗಳು ಲಾಕ್​ಡೌನ್​ನಿಂದ ಭಾರೀ ಹೊಡೆತ ತಿನ್ನುವಂತಾಗಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: Oil Bonds: ಯುಪಿಎ ಆಳ್ವಿಕೆಯ ಆಯಿಲ್​ ಬಾಂಡ್ಸ್​ ಅಂದರೇನು? ಬಿಜೆಪಿ ಸರ್ಕಾರ ಹೇಳುತ್ತಿರುವ ಪರಿಣಾಮಗಳೇನು?

(Central Government Will Pay Employer Employees PF Contribution Till 2022 Said Nirmala Sitharaman According to ANI)

Published On - 7:57 pm, Sat, 21 August 21

ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ