AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PF: ಸಂಘಟಿತ ವಲಯದ ಉದ್ಯೋಗದಾತರು, ಉದ್ಯೋಗಿಗಳ ಪಿಎಫ್​ ಪಾಲು 2022ರ ತನಕ ಕೇಂದ್ರದಿಂದಲೇ ಪಾವತಿ

ಉದ್ಯೋಗದಾತರು, ಉದ್ಯೋಗಿಗಳ ಪಿಎಫ್​ ಕೊಡುಗೆಯನ್ನು 2022ರ ತನಕ ಕೇಂದ್ರದಿಂದಲೇ ಪಾವತಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ.

PF: ಸಂಘಟಿತ ವಲಯದ ಉದ್ಯೋಗದಾತರು, ಉದ್ಯೋಗಿಗಳ ಪಿಎಫ್​ ಪಾಲು 2022ರ ತನಕ ಕೇಂದ್ರದಿಂದಲೇ ಪಾವತಿ
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 21, 2021 | 8:25 PM

Share

ಆತ್ಮನಿರ್ಭರ್ ಭಾರತ್ ಪ್ಯಾಕೇಜ್ ಅಡಿಯಲ್ಲಿ ಕಳೆದ ವರ್ಷ ಘೋಷಣೆ ಮಾಡಿ ವಿಚಾರವನ್ನು ಮತ್ತೊಮ್ಮೆ ತಿಳಿಸುತ್ತಾ, ಕೇಂದ್ರ ಹಣಕಾಸು ಸಚಿವೆ ಈ ಬಗ್ಗೆ ತಿಳಿಸಿದ್ದಾರೆ ಎಂದು ಎಎನ್ಐ ಟ್ವೀಟ್​ನಲ್ಲಿ ಸ್ಪಷ್ಟಪಡಿಸಲಾಗಿದೆ. ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸಣ್ಣ ಸಂಸ್ಥೆಗಳಲ್ಲಿ ಉದ್ಯೋಗ ಮಾಡುವವರಿಗೆ ಹಾಗೂ ಸಣ್ಣ ಸಂಸ್ಥೆಗಳನ್ನು ನಡೆಸುವವರಿಗೆ ಬೆಂಬಲ ನೀಡುವ ಉದ್ದೇಶದಿಂದ ಕೆಲವು ಷರತ್ತುಗಳೊಂದಿಗೆ, ಉದ್ಯೋಗದಾತರು ಮತ್ತು ಉದ್ಯೋಗಿಗಳ ಪಿಎಫ್​ ಕೊಡುಗೆಯನ್ನು ಸರ್ಕಾರದಿಂದಲೇ ಪಾವತಿ ಮಾಡಲಾಗುವುದು ಎಂದು ತಿಳಿಸಲಾಗಿತ್ತು.

ಇದಕ್ಕೂ ಮುನ್ನ, ಕೆಲಸ ಕಳೆದುಕೊಂಡು, ಆ ನಂತರ ಅವರನ್ನು ಮತ್ತೆ ಕೆಲಸಕ್ಕೆ ಕರೆಸಿಕೊಂಡಿದ್ದಲ್ಲಿ ಅಂತಹ ಸಂಘಟಿತ ವಲಯದ ಇಪಿಎಫ್​ಒ ನೋಂದಾಯಿತ ಸಣ್ಣ ಪ್ರಮಾಣದ ಘಟಕಗಳ ಉದ್ಯೋಗದಾತರು ಮತ್ತು ಉದ್ಯೋಗಿಗಳ ಪಿಎಫ್​ ಪಾಲನ್ನು 2022ರ ತನಕ ಕೇಂದ್ರ ಸರ್ಕಾರವೇ ಪಾವತಿಸುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ ಎಂದು ಎಎನ್​ಐ ತಿಳಿಸಿತ್ತು.

ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್​ಡೌನ್ ಹೇರಿದ್ದ ಕಾರಣಕ್ಕೆ ಉತ್ಪಾದನೆ, ಪೂರೈಕೆ ಜಾಲ ಹಾಗೂ ಬೇಡಿಕೆಯಲ್ಲಿ ಭಾರೀ ಏರುಪೇರಾಗಿತ್ತು. ಸಣ್ಣ- ಪುಟ್ಟ ಸಂಸ್ಥೆಗಳು ಲಾಕ್​ಡೌನ್​ನಿಂದ ಭಾರೀ ಹೊಡೆತ ತಿನ್ನುವಂತಾಗಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: Oil Bonds: ಯುಪಿಎ ಆಳ್ವಿಕೆಯ ಆಯಿಲ್​ ಬಾಂಡ್ಸ್​ ಅಂದರೇನು? ಬಿಜೆಪಿ ಸರ್ಕಾರ ಹೇಳುತ್ತಿರುವ ಪರಿಣಾಮಗಳೇನು?

(Central Government Will Pay Employer Employees PF Contribution Till 2022 Said Nirmala Sitharaman According to ANI)

Published On - 7:57 pm, Sat, 21 August 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು