PF: ಸಂಘಟಿತ ವಲಯದ ಉದ್ಯೋಗದಾತರು, ಉದ್ಯೋಗಿಗಳ ಪಿಎಫ್​ ಪಾಲು 2022ರ ತನಕ ಕೇಂದ್ರದಿಂದಲೇ ಪಾವತಿ

ಉದ್ಯೋಗದಾತರು, ಉದ್ಯೋಗಿಗಳ ಪಿಎಫ್​ ಕೊಡುಗೆಯನ್ನು 2022ರ ತನಕ ಕೇಂದ್ರದಿಂದಲೇ ಪಾವತಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ.

PF: ಸಂಘಟಿತ ವಲಯದ ಉದ್ಯೋಗದಾತರು, ಉದ್ಯೋಗಿಗಳ ಪಿಎಫ್​ ಪಾಲು 2022ರ ತನಕ ಕೇಂದ್ರದಿಂದಲೇ ಪಾವತಿ
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
Follow us
| Updated By: Srinivas Mata

Updated on:Aug 21, 2021 | 8:25 PM

ಆತ್ಮನಿರ್ಭರ್ ಭಾರತ್ ಪ್ಯಾಕೇಜ್ ಅಡಿಯಲ್ಲಿ ಕಳೆದ ವರ್ಷ ಘೋಷಣೆ ಮಾಡಿ ವಿಚಾರವನ್ನು ಮತ್ತೊಮ್ಮೆ ತಿಳಿಸುತ್ತಾ, ಕೇಂದ್ರ ಹಣಕಾಸು ಸಚಿವೆ ಈ ಬಗ್ಗೆ ತಿಳಿಸಿದ್ದಾರೆ ಎಂದು ಎಎನ್ಐ ಟ್ವೀಟ್​ನಲ್ಲಿ ಸ್ಪಷ್ಟಪಡಿಸಲಾಗಿದೆ. ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸಣ್ಣ ಸಂಸ್ಥೆಗಳಲ್ಲಿ ಉದ್ಯೋಗ ಮಾಡುವವರಿಗೆ ಹಾಗೂ ಸಣ್ಣ ಸಂಸ್ಥೆಗಳನ್ನು ನಡೆಸುವವರಿಗೆ ಬೆಂಬಲ ನೀಡುವ ಉದ್ದೇಶದಿಂದ ಕೆಲವು ಷರತ್ತುಗಳೊಂದಿಗೆ, ಉದ್ಯೋಗದಾತರು ಮತ್ತು ಉದ್ಯೋಗಿಗಳ ಪಿಎಫ್​ ಕೊಡುಗೆಯನ್ನು ಸರ್ಕಾರದಿಂದಲೇ ಪಾವತಿ ಮಾಡಲಾಗುವುದು ಎಂದು ತಿಳಿಸಲಾಗಿತ್ತು.

ಇದಕ್ಕೂ ಮುನ್ನ, ಕೆಲಸ ಕಳೆದುಕೊಂಡು, ಆ ನಂತರ ಅವರನ್ನು ಮತ್ತೆ ಕೆಲಸಕ್ಕೆ ಕರೆಸಿಕೊಂಡಿದ್ದಲ್ಲಿ ಅಂತಹ ಸಂಘಟಿತ ವಲಯದ ಇಪಿಎಫ್​ಒ ನೋಂದಾಯಿತ ಸಣ್ಣ ಪ್ರಮಾಣದ ಘಟಕಗಳ ಉದ್ಯೋಗದಾತರು ಮತ್ತು ಉದ್ಯೋಗಿಗಳ ಪಿಎಫ್​ ಪಾಲನ್ನು 2022ರ ತನಕ ಕೇಂದ್ರ ಸರ್ಕಾರವೇ ಪಾವತಿಸುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ ಎಂದು ಎಎನ್​ಐ ತಿಳಿಸಿತ್ತು.

ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್​ಡೌನ್ ಹೇರಿದ್ದ ಕಾರಣಕ್ಕೆ ಉತ್ಪಾದನೆ, ಪೂರೈಕೆ ಜಾಲ ಹಾಗೂ ಬೇಡಿಕೆಯಲ್ಲಿ ಭಾರೀ ಏರುಪೇರಾಗಿತ್ತು. ಸಣ್ಣ- ಪುಟ್ಟ ಸಂಸ್ಥೆಗಳು ಲಾಕ್​ಡೌನ್​ನಿಂದ ಭಾರೀ ಹೊಡೆತ ತಿನ್ನುವಂತಾಗಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: Oil Bonds: ಯುಪಿಎ ಆಳ್ವಿಕೆಯ ಆಯಿಲ್​ ಬಾಂಡ್ಸ್​ ಅಂದರೇನು? ಬಿಜೆಪಿ ಸರ್ಕಾರ ಹೇಳುತ್ತಿರುವ ಪರಿಣಾಮಗಳೇನು?

(Central Government Will Pay Employer Employees PF Contribution Till 2022 Said Nirmala Sitharaman According to ANI)

Published On - 7:57 pm, Sat, 21 August 21

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ