AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

80 ವರ್ಷ ಮೇಲ್ಪಟ್ಟ ವಯಸ್ಸಿನ ಪಿಂಚಣಿದಾರರಿಗೆ ಹೆಚ್ಚುವರಿ ಭತ್ಯೆ ನೀಡಲಿರುವ ಕೇಂದ್ರ ಸರ್ಕಾರ

Compassionate allowance for old pensioners: ಕೇಂದ್ರದ ಸಿವಿಲ್ ಸರ್ವಿಸ್​ನಿಂದ ನಿವೃತ್ತರಾಗಿ ಪಿಂಚಣಿ ಪಡೆಯುತ್ತಿರುವ ಜನರಿಗೆ 80 ವರ್ಷ ವಯಸ್ಸು ದಾಟಿದ ಬಳಿಕ ಹೆಚ್ಚುವರಿ ಪಿಂಚಣಿ ಸಿಗುತ್ತದೆ. 80ರಿಂದ ಮೇಲ್ಪಟ್ಟು ವಿವಿಧ ವಯೋಮಾನಕ್ಕೆ ಹೆಚ್ಚುವರಿ ಪಿಂಚಣಿ ಅಧಿಕಗೊಳ್ಳುತ್ತಾ ಹೋಗುತ್ತದೆ. ಶತಾಯುಷಿಗಳಿಗೆ ನೂರಕ್ಕೆ ನೂರು ಹೆಚ್ಚುವರಿ ಪಿಂಚಣಿ ಸಿಗಲಿದೆ.

80 ವರ್ಷ ಮೇಲ್ಪಟ್ಟ ವಯಸ್ಸಿನ ಪಿಂಚಣಿದಾರರಿಗೆ ಹೆಚ್ಚುವರಿ ಭತ್ಯೆ ನೀಡಲಿರುವ ಕೇಂದ್ರ ಸರ್ಕಾರ
ಪಿಂಚಣಿದಾರರು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 24, 2024 | 6:29 PM

Share

ನವದೆಹಲಿ, ಅಕ್ಟೋಬರ್ 24: ವಯಸ್ಸಾದಂತೆ ಅನಾರೋಗ್ಯ ಮತ್ತಿತರ ಸಮಸ್ಯೆಗಳು ಹೆಚ್ಚಿರುತ್ತವೆ. ಅದಕ್ಕೆ ಅನುಗುಣವಾಗಿ ಖರ್ಚು ವೆಚ್ಚವೂ ಅಧಿಕ ಇರುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ 80 ವರ್ಷ ವಯಸ್ಸು ದಾಟಿದ ಪಿಂಚಣಿ ಮೊತ್ತ ಹೆಚ್ಚಿಸಿದೆ. ಕೇಂದ್ರದ ನಿವೃತ್ತ ಉದ್ಯೋಗಿಗಳಿಗೆ ನಿಯಮಿತ ಪಿಂಚಣಿ ಜೊತೆಗೆ ಹೆಚ್ಚುವರಿ ಭತ್ಯೆ ಕೂಡ ನೀಡಲಿದೆ. ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ (ಡಿಒಪಿಪಿಡಬ್ಲ್ಯು) ಇತ್ತೀಚೆಗೆ ಈ ಹೆಚ್ಚುವರಿ ಪಿಂಚಣಿ ನೀಡುವ ನಿರ್ಧಾರ ಪ್ರಕಟಿಸಿದೆ. ಈ ಸಂಬಂಧ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಆದರೆ, ಇದು ಕೇಂದ್ರ ಸರ್ಕಾರದ ಸಿವಿಲ್ ಸರ್ವಿಸ್ ಹುದ್ದೆಗಳಿಂದ ನಿವೃತ್ತರಾಗಿ ಪಿಂಚಣಿ ಪಡೆಯುತ್ತಿರುವವರಿಗೆ ನೀಡಲಾಗಿರುವ ಗೈಡ್​ಲೈನ್ಸ್ ಆಗಿದೆ.

ಸಿವಿಲ್ ಸರ್ವಿಸ್​ನಿಂದ ನಿವೃತ್ತರಾಗಿ 80 ವರ್ಷ ವಯಸ್ಸು ಮುಟ್ಟಿದವರಿಗೆ ಹೆಚ್ಚುವರಿ ಪಿಂಚಣಿ ಅಥವಾ ಕಾಂಪ್ಯಾಶನೇಟ್ ಅಲೋಯನ್ಸ್ ನೀಡಲಾಗುತ್ತದೆ. ವಯಸ್ಸು ಹೆಚ್ಚಿದಂತೆಲ್ಲಾ ಈ ಹೆಚ್ಚುವರಿ ಪಿಂಚಣಿ ಮೊತ್ತ ಹೆಚ್ಚುತ್ತಾ ಹೋಗುತ್ತದೆ. ಮೂಲ ಪಿಂಚಣಿಯ ಶೇ. 20ರಿಂದ ಶೇ. 100ರವರೆಗೂ ಈ ವಿಶೇಷ ಭತ್ಯೆಯು ಪಿಂಚಣಿದಾರರಿಗೆ ಸಿಗುತ್ತದೆ.

  • 80ರಿಂದ 85 ವರ್ಷ ವಯಸ್ಸಿನ ಪಿಂಚಣಿದಾರರಿಗೆ: ಮೂಲ ಪಿಂಚಣಿಯ ಶೇ. 20
  • 85ರಿಂದ 90 ವರ್ಷ: ಶೇ. 30ರಷ್ಟು ಹೆಚ್ಚುವರಿ ಪಿಂಚಣಿ
  • 90ರಿಂದ 95 ವರ್ಷ ವಯಸ್ಸು: ಶೇ. 40ರಷ್ಟು ಹೆಚ್ಚುವರಿ ಪಿಂಚಣಿ
  • 95ರಿಂದ 100 ವರ್ಷ ವಯಸ್ಸು: ಶೇ. 50ರಷ್ಟು ಹೆಚ್ಚುವರಿ ಪಿಂಚಣಿ
  • 100 ವರ್ಷ ಮೇಲ್ಪಟ್ಟ ವಯಸ್ಸು: ಶೇ. 100ರಷ್ಟು ಹೆಚ್ಚುವರಿ ಪಿಂಚಣಿ

ಇದನ್ನೂ ಓದಿ: ಬಾಹ್ಯಾಕಾಶ ಕ್ಷೇತ್ರದ ಸ್ಟಾರ್ಟಪ್​ಗಳಿಗೆ ಫಂಡ್ ಮತ್ತು ಎರಡು ರೈಲ್ವೆ ಯೋಜನೆಗಳಿಗೆ ಸಂಪುಟ ಅನುಮೋದನೆ

ವಯೋವೃದ್ಧರ ಜೀವನ ವೆಚ್ಚ ಹೆಚ್ಚಾಗುವುದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಪಿಂಚಣಿ ಮೊತ್ತ ಹೆಚ್ಚಿಸುವ ನಿರ್ಧಾರಕ್ಕೆ ಬಂದಿದೆ. ಈ ಹೊಸ ಮಾರ್ಗಸೂಚಿಗಳ ಬಗ್ಗೆ ಪಿಂಚಣಿ ಇಲಾಖೆಯು ಎಲ್ಲಾ ಕೇಂದ್ರ ಸರ್ಕಾರಿ ಇಲಾಖೆಗಳು ಹಾಗೂ ಪಿಂಚಣಿ ವಿತರಿಸುವ ಬ್ಯಾಂಕುಗಳಿಗೆ ಮಾಹಿತಿ ನೀಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​