Sign In

By signing in or creating an account, you agree with Associated Broadcasting Company's Terms & Conditions and Privacy Policy.

80 ವರ್ಷ ಮೇಲ್ಪಟ್ಟ ವಯಸ್ಸಿನ ಪಿಂಚಣಿದಾರರಿಗೆ ಹೆಚ್ಚುವರಿ ಭತ್ಯೆ ನೀಡಲಿರುವ ಕೇಂದ್ರ ಸರ್ಕಾರ

Compassionate allowance for old pensioners: ಕೇಂದ್ರದ ಸಿವಿಲ್ ಸರ್ವಿಸ್​ನಿಂದ ನಿವೃತ್ತರಾಗಿ ಪಿಂಚಣಿ ಪಡೆಯುತ್ತಿರುವ ಜನರಿಗೆ 80 ವರ್ಷ ವಯಸ್ಸು ದಾಟಿದ ಬಳಿಕ ಹೆಚ್ಚುವರಿ ಪಿಂಚಣಿ ಸಿಗುತ್ತದೆ. 80ರಿಂದ ಮೇಲ್ಪಟ್ಟು ವಿವಿಧ ವಯೋಮಾನಕ್ಕೆ ಹೆಚ್ಚುವರಿ ಪಿಂಚಣಿ ಅಧಿಕಗೊಳ್ಳುತ್ತಾ ಹೋಗುತ್ತದೆ. ಶತಾಯುಷಿಗಳಿಗೆ ನೂರಕ್ಕೆ ನೂರು ಹೆಚ್ಚುವರಿ ಪಿಂಚಣಿ ಸಿಗಲಿದೆ.

80 ವರ್ಷ ಮೇಲ್ಪಟ್ಟ ವಯಸ್ಸಿನ ಪಿಂಚಣಿದಾರರಿಗೆ ಹೆಚ್ಚುವರಿ ಭತ್ಯೆ ನೀಡಲಿರುವ ಕೇಂದ್ರ ಸರ್ಕಾರ
ಪಿಂಚಣಿದಾರರು
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 24, 2024 | 6:29 PM

ನವದೆಹಲಿ, ಅಕ್ಟೋಬರ್ 24: ವಯಸ್ಸಾದಂತೆ ಅನಾರೋಗ್ಯ ಮತ್ತಿತರ ಸಮಸ್ಯೆಗಳು ಹೆಚ್ಚಿರುತ್ತವೆ. ಅದಕ್ಕೆ ಅನುಗುಣವಾಗಿ ಖರ್ಚು ವೆಚ್ಚವೂ ಅಧಿಕ ಇರುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ 80 ವರ್ಷ ವಯಸ್ಸು ದಾಟಿದ ಪಿಂಚಣಿ ಮೊತ್ತ ಹೆಚ್ಚಿಸಿದೆ. ಕೇಂದ್ರದ ನಿವೃತ್ತ ಉದ್ಯೋಗಿಗಳಿಗೆ ನಿಯಮಿತ ಪಿಂಚಣಿ ಜೊತೆಗೆ ಹೆಚ್ಚುವರಿ ಭತ್ಯೆ ಕೂಡ ನೀಡಲಿದೆ. ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ (ಡಿಒಪಿಪಿಡಬ್ಲ್ಯು) ಇತ್ತೀಚೆಗೆ ಈ ಹೆಚ್ಚುವರಿ ಪಿಂಚಣಿ ನೀಡುವ ನಿರ್ಧಾರ ಪ್ರಕಟಿಸಿದೆ. ಈ ಸಂಬಂಧ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಆದರೆ, ಇದು ಕೇಂದ್ರ ಸರ್ಕಾರದ ಸಿವಿಲ್ ಸರ್ವಿಸ್ ಹುದ್ದೆಗಳಿಂದ ನಿವೃತ್ತರಾಗಿ ಪಿಂಚಣಿ ಪಡೆಯುತ್ತಿರುವವರಿಗೆ ನೀಡಲಾಗಿರುವ ಗೈಡ್​ಲೈನ್ಸ್ ಆಗಿದೆ.

ಸಿವಿಲ್ ಸರ್ವಿಸ್​ನಿಂದ ನಿವೃತ್ತರಾಗಿ 80 ವರ್ಷ ವಯಸ್ಸು ಮುಟ್ಟಿದವರಿಗೆ ಹೆಚ್ಚುವರಿ ಪಿಂಚಣಿ ಅಥವಾ ಕಾಂಪ್ಯಾಶನೇಟ್ ಅಲೋಯನ್ಸ್ ನೀಡಲಾಗುತ್ತದೆ. ವಯಸ್ಸು ಹೆಚ್ಚಿದಂತೆಲ್ಲಾ ಈ ಹೆಚ್ಚುವರಿ ಪಿಂಚಣಿ ಮೊತ್ತ ಹೆಚ್ಚುತ್ತಾ ಹೋಗುತ್ತದೆ. ಮೂಲ ಪಿಂಚಣಿಯ ಶೇ. 20ರಿಂದ ಶೇ. 100ರವರೆಗೂ ಈ ವಿಶೇಷ ಭತ್ಯೆಯು ಪಿಂಚಣಿದಾರರಿಗೆ ಸಿಗುತ್ತದೆ.

  • 80ರಿಂದ 85 ವರ್ಷ ವಯಸ್ಸಿನ ಪಿಂಚಣಿದಾರರಿಗೆ: ಮೂಲ ಪಿಂಚಣಿಯ ಶೇ. 20
  • 85ರಿಂದ 90 ವರ್ಷ: ಶೇ. 30ರಷ್ಟು ಹೆಚ್ಚುವರಿ ಪಿಂಚಣಿ
  • 90ರಿಂದ 95 ವರ್ಷ ವಯಸ್ಸು: ಶೇ. 40ರಷ್ಟು ಹೆಚ್ಚುವರಿ ಪಿಂಚಣಿ
  • 95ರಿಂದ 100 ವರ್ಷ ವಯಸ್ಸು: ಶೇ. 50ರಷ್ಟು ಹೆಚ್ಚುವರಿ ಪಿಂಚಣಿ
  • 100 ವರ್ಷ ಮೇಲ್ಪಟ್ಟ ವಯಸ್ಸು: ಶೇ. 100ರಷ್ಟು ಹೆಚ್ಚುವರಿ ಪಿಂಚಣಿ

ಇದನ್ನೂ ಓದಿ: ಬಾಹ್ಯಾಕಾಶ ಕ್ಷೇತ್ರದ ಸ್ಟಾರ್ಟಪ್​ಗಳಿಗೆ ಫಂಡ್ ಮತ್ತು ಎರಡು ರೈಲ್ವೆ ಯೋಜನೆಗಳಿಗೆ ಸಂಪುಟ ಅನುಮೋದನೆ

ವಯೋವೃದ್ಧರ ಜೀವನ ವೆಚ್ಚ ಹೆಚ್ಚಾಗುವುದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಪಿಂಚಣಿ ಮೊತ್ತ ಹೆಚ್ಚಿಸುವ ನಿರ್ಧಾರಕ್ಕೆ ಬಂದಿದೆ. ಈ ಹೊಸ ಮಾರ್ಗಸೂಚಿಗಳ ಬಗ್ಗೆ ಪಿಂಚಣಿ ಇಲಾಖೆಯು ಎಲ್ಲಾ ಕೇಂದ್ರ ಸರ್ಕಾರಿ ಇಲಾಖೆಗಳು ಹಾಗೂ ಪಿಂಚಣಿ ವಿತರಿಸುವ ಬ್ಯಾಂಕುಗಳಿಗೆ ಮಾಹಿತಿ ನೀಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕವೀಗ ಪ್ರತಿಭಟನೆಗಳ ರಾಜ್ಯ, ಎಲ್ಲ ಮೂರು ಪಕ್ಷಗಳಿಂದ ಪ್ರತಿಭಟನೆ!
ಕರ್ನಾಟಕವೀಗ ಪ್ರತಿಭಟನೆಗಳ ರಾಜ್ಯ, ಎಲ್ಲ ಮೂರು ಪಕ್ಷಗಳಿಂದ ಪ್ರತಿಭಟನೆ!
ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ
ಅಪ್ಪಾಜಿಯವರ ಅಭಿಮಾನಿಗಳಲ್ಲೇ ನಾವು ಅಪ್ಪ-ಅಮ್ಮನನ್ನು ಕಾಣುತ್ತೇವೆ: ಲಕ್ಷ್ಮಿ
ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು
ಹಿಂದೂಗಳು ದುರ್ಬಲರಲ್ಲವೆಂಬ ಸಂದೇಶ ಸಾರುವ ಉದ್ದೇಶ ಸಂಘಟಕರದ್ದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಬೆಳೆದುನಿಂತ ಅಡಿಕೆ ಸಸಿಗಳ ಮೇಲೆ ಅದೆಂಥ ವೈರತ್ವ ಅಂತ ಅರ್ಥವಾಗದು
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
ಫೋರ್ ಇಲ್ಲ, ಸಿಕ್ಸ್ ಅಂತು ಇಲ್ಲವೇ ಇಲ್ಲ: ಸುಮ್ಮನೆ ಕೂತ CSK ಚಿಯರ್​ಲೀಡರ್ಸ್
‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್
‘ಬಾಯ್ಸ್ vs ಗರ್ಲ್ಸ್’ ವೇದಿಕೆ ಮೇಲೆ ರಜತ್​ ಕಾಲೆಳೆದ ಗರ್ಲ್ಸ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಗ್ಯಾರಂಟಿ ಯೋಜನೆಗಳ ವೈಫಲ್ಯದಿಂದ ಬೇಸತ್ತ ಜನ ಸಹ ಧರಣಿಯಲ್ಲಿ ಭಾಗಿ: ನಿಖಿಲ್
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಅಧಿಕ ಹಣದ ಆಸೆಗಾಗಿ ಬಂಡೀಪುರ ಅರಣ್ಯ ಸಿಬ್ಬಂದಿಗಳಿಂದ ಮತ್ತೊಂದು ಎಡವಟ್ಟು
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
ಶಾಸ್ತ್ರದ ಪ್ರಕಾರ ಗಂಡ ಹೆಂಡತಿ ಕಾರ್ಯಕ್ರಮಗಳಿಗೆ ಹೇಗೆ ಹೋಗಬೇಕು?
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ
Daily Horoscope: ಹುಣ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ