80 ವರ್ಷ ಮೇಲ್ಪಟ್ಟ ವಯಸ್ಸಿನ ಪಿಂಚಣಿದಾರರಿಗೆ ಹೆಚ್ಚುವರಿ ಭತ್ಯೆ ನೀಡಲಿರುವ ಕೇಂದ್ರ ಸರ್ಕಾರ

Compassionate allowance for old pensioners: ಕೇಂದ್ರದ ಸಿವಿಲ್ ಸರ್ವಿಸ್​ನಿಂದ ನಿವೃತ್ತರಾಗಿ ಪಿಂಚಣಿ ಪಡೆಯುತ್ತಿರುವ ಜನರಿಗೆ 80 ವರ್ಷ ವಯಸ್ಸು ದಾಟಿದ ಬಳಿಕ ಹೆಚ್ಚುವರಿ ಪಿಂಚಣಿ ಸಿಗುತ್ತದೆ. 80ರಿಂದ ಮೇಲ್ಪಟ್ಟು ವಿವಿಧ ವಯೋಮಾನಕ್ಕೆ ಹೆಚ್ಚುವರಿ ಪಿಂಚಣಿ ಅಧಿಕಗೊಳ್ಳುತ್ತಾ ಹೋಗುತ್ತದೆ. ಶತಾಯುಷಿಗಳಿಗೆ ನೂರಕ್ಕೆ ನೂರು ಹೆಚ್ಚುವರಿ ಪಿಂಚಣಿ ಸಿಗಲಿದೆ.

80 ವರ್ಷ ಮೇಲ್ಪಟ್ಟ ವಯಸ್ಸಿನ ಪಿಂಚಣಿದಾರರಿಗೆ ಹೆಚ್ಚುವರಿ ಭತ್ಯೆ ನೀಡಲಿರುವ ಕೇಂದ್ರ ಸರ್ಕಾರ
ಪಿಂಚಣಿದಾರರು
Follow us
|

Updated on: Oct 24, 2024 | 6:29 PM

ನವದೆಹಲಿ, ಅಕ್ಟೋಬರ್ 24: ವಯಸ್ಸಾದಂತೆ ಅನಾರೋಗ್ಯ ಮತ್ತಿತರ ಸಮಸ್ಯೆಗಳು ಹೆಚ್ಚಿರುತ್ತವೆ. ಅದಕ್ಕೆ ಅನುಗುಣವಾಗಿ ಖರ್ಚು ವೆಚ್ಚವೂ ಅಧಿಕ ಇರುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ 80 ವರ್ಷ ವಯಸ್ಸು ದಾಟಿದ ಪಿಂಚಣಿ ಮೊತ್ತ ಹೆಚ್ಚಿಸಿದೆ. ಕೇಂದ್ರದ ನಿವೃತ್ತ ಉದ್ಯೋಗಿಗಳಿಗೆ ನಿಯಮಿತ ಪಿಂಚಣಿ ಜೊತೆಗೆ ಹೆಚ್ಚುವರಿ ಭತ್ಯೆ ಕೂಡ ನೀಡಲಿದೆ. ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ (ಡಿಒಪಿಪಿಡಬ್ಲ್ಯು) ಇತ್ತೀಚೆಗೆ ಈ ಹೆಚ್ಚುವರಿ ಪಿಂಚಣಿ ನೀಡುವ ನಿರ್ಧಾರ ಪ್ರಕಟಿಸಿದೆ. ಈ ಸಂಬಂಧ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಆದರೆ, ಇದು ಕೇಂದ್ರ ಸರ್ಕಾರದ ಸಿವಿಲ್ ಸರ್ವಿಸ್ ಹುದ್ದೆಗಳಿಂದ ನಿವೃತ್ತರಾಗಿ ಪಿಂಚಣಿ ಪಡೆಯುತ್ತಿರುವವರಿಗೆ ನೀಡಲಾಗಿರುವ ಗೈಡ್​ಲೈನ್ಸ್ ಆಗಿದೆ.

ಸಿವಿಲ್ ಸರ್ವಿಸ್​ನಿಂದ ನಿವೃತ್ತರಾಗಿ 80 ವರ್ಷ ವಯಸ್ಸು ಮುಟ್ಟಿದವರಿಗೆ ಹೆಚ್ಚುವರಿ ಪಿಂಚಣಿ ಅಥವಾ ಕಾಂಪ್ಯಾಶನೇಟ್ ಅಲೋಯನ್ಸ್ ನೀಡಲಾಗುತ್ತದೆ. ವಯಸ್ಸು ಹೆಚ್ಚಿದಂತೆಲ್ಲಾ ಈ ಹೆಚ್ಚುವರಿ ಪಿಂಚಣಿ ಮೊತ್ತ ಹೆಚ್ಚುತ್ತಾ ಹೋಗುತ್ತದೆ. ಮೂಲ ಪಿಂಚಣಿಯ ಶೇ. 20ರಿಂದ ಶೇ. 100ರವರೆಗೂ ಈ ವಿಶೇಷ ಭತ್ಯೆಯು ಪಿಂಚಣಿದಾರರಿಗೆ ಸಿಗುತ್ತದೆ.

  • 80ರಿಂದ 85 ವರ್ಷ ವಯಸ್ಸಿನ ಪಿಂಚಣಿದಾರರಿಗೆ: ಮೂಲ ಪಿಂಚಣಿಯ ಶೇ. 20
  • 85ರಿಂದ 90 ವರ್ಷ: ಶೇ. 30ರಷ್ಟು ಹೆಚ್ಚುವರಿ ಪಿಂಚಣಿ
  • 90ರಿಂದ 95 ವರ್ಷ ವಯಸ್ಸು: ಶೇ. 40ರಷ್ಟು ಹೆಚ್ಚುವರಿ ಪಿಂಚಣಿ
  • 95ರಿಂದ 100 ವರ್ಷ ವಯಸ್ಸು: ಶೇ. 50ರಷ್ಟು ಹೆಚ್ಚುವರಿ ಪಿಂಚಣಿ
  • 100 ವರ್ಷ ಮೇಲ್ಪಟ್ಟ ವಯಸ್ಸು: ಶೇ. 100ರಷ್ಟು ಹೆಚ್ಚುವರಿ ಪಿಂಚಣಿ

ಇದನ್ನೂ ಓದಿ: ಬಾಹ್ಯಾಕಾಶ ಕ್ಷೇತ್ರದ ಸ್ಟಾರ್ಟಪ್​ಗಳಿಗೆ ಫಂಡ್ ಮತ್ತು ಎರಡು ರೈಲ್ವೆ ಯೋಜನೆಗಳಿಗೆ ಸಂಪುಟ ಅನುಮೋದನೆ

ವಯೋವೃದ್ಧರ ಜೀವನ ವೆಚ್ಚ ಹೆಚ್ಚಾಗುವುದನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಪಿಂಚಣಿ ಮೊತ್ತ ಹೆಚ್ಚಿಸುವ ನಿರ್ಧಾರಕ್ಕೆ ಬಂದಿದೆ. ಈ ಹೊಸ ಮಾರ್ಗಸೂಚಿಗಳ ಬಗ್ಗೆ ಪಿಂಚಣಿ ಇಲಾಖೆಯು ಎಲ್ಲಾ ಕೇಂದ್ರ ಸರ್ಕಾರಿ ಇಲಾಖೆಗಳು ಹಾಗೂ ಪಿಂಚಣಿ ವಿತರಿಸುವ ಬ್ಯಾಂಕುಗಳಿಗೆ ಮಾಹಿತಿ ನೀಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಚಾರ ಮಾಡುವ ಅವಕಾಶ ಎಲ್ಲರಿಗೂ ಇದೆ: ಶಾಸಕ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಕಾಡಿಬೇಡಿ ರೋಹಿತ್ ಶರ್ಮಾರನ್ನು ಒಪ್ಪಿಸಿ ಔಟ್ ಮಾಡಿದ ಸರ್ಫರಾಝ್ ಖಾನ್
ಕಾಡಿಬೇಡಿ ರೋಹಿತ್ ಶರ್ಮಾರನ್ನು ಒಪ್ಪಿಸಿ ಔಟ್ ಮಾಡಿದ ಸರ್ಫರಾಝ್ ಖಾನ್
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್
ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್
ಬೆಂಗಳೂರು ನಗರ ಉಸ್ತುವಾರಿ ಸಚಿವ ಶಿವಕುಮಾರ್ ಚನ್ನಪಟ್ಟಣದಲ್ಲಿ ಬ್ಯೂಸಿ!
ಬೆಂಗಳೂರು ನಗರ ಉಸ್ತುವಾರಿ ಸಚಿವ ಶಿವಕುಮಾರ್ ಚನ್ನಪಟ್ಟಣದಲ್ಲಿ ಬ್ಯೂಸಿ!