Bournvita: ಬೌರ್ನ್‌ವಿಟಾ ಮಕ್ಕಳ ಜೀವಕ್ಕೆ ಕುತ್ತು, ಹೆಲ್ತ್​​​ ಡ್ರಿಂಕ್ಸ್​​​ ಪಟ್ಟಿಯಿಂದ ತೆಗೆದುಹಾಕುವಂತೆ ಕೇಂದ್ರ ಆದೇಶ

ವಾಣಿಜ್ಯ ಸಚಿವಾಲಯವು ಬೌರ್ನ್ವಿಟಾ ಮತ್ತು ಇತರ ಪಾನೀಯಗಳನ್ನು 'ಆರೋಗ್ಯ ಪಾನೀಯ' ವರ್ಗದಿಂದ ತೆಗೆದುಹಾಕುವಂತೆ ಇ-ಕಾಮರ್ಸ್ ಕಂಪನಿಗಳಿಗೆ ಹೇಳಿದೆ. ಇದು ಯಾವುದೇ 'ಆರೋಗ್ಯ ಪಾನೀಯ' ವರ್ಗಕ್ಕೆ ಸೇರುವುದಿಲ್ಲ ಎಂದು ಇ-ಕಾಮರ್ಸ್ ಕಂಪನಿಗಳಿಗೆ ಆದೇಶ ಪತ್ರವನ್ನು ನೀಡಿದೆ.

Bournvita: ಬೌರ್ನ್‌ವಿಟಾ ಮಕ್ಕಳ ಜೀವಕ್ಕೆ ಕುತ್ತು, ಹೆಲ್ತ್​​​ ಡ್ರಿಂಕ್ಸ್​​​ ಪಟ್ಟಿಯಿಂದ ತೆಗೆದುಹಾಕುವಂತೆ ಕೇಂದ್ರ ಆದೇಶ

Updated on: Apr 13, 2024 | 5:29 PM

ಕೇಂದ್ರ ಸರ್ಕಾರ ಇಂದು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ (ಎಫ್‌ಎಸ್‌ಎಸ್ ಕಾಯಿದೆ 2006) ಅಡಿಯಲ್ಲಿ ಬೌರ್ನ್‌ವಿಟಾ (Bournvita) ಮತ್ತು ಇತರ ರೀತಿಯ ಪಾನೀಯಗಳನ್ನು ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಿಂದ ತೆಗೆದು ಹಾಕಿ. ಇದು ಯಾವುದೇ ‘ಆರೋಗ್ಯ ಪಾನೀಯ’ ವರ್ಗಕ್ಕೆ ಸೇರುವುದಿಲ್ಲ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಇ-ಕಾಮರ್ಸ್ ಕಂಪನಿಗಳಿಗೆ ಪತ್ರದ ಮೂಲಕ ಆದೇಶ ನೀಡಿದೆ.

ಏಪ್ರಿಲ್ 10ರಂದು ಈ ಆದೇಶವನ್ನು ನೀಡಲಾಗಿದೆ. ವಾಣಿಜ್ಯ ಸಚಿವಾಲಯವು ಬೌರ್ನ್ವಿಟಾ ಮತ್ತು ಇತರ ಪಾನೀಯಗಳನ್ನು ‘ಆರೋಗ್ಯ ಪಾನೀಯ’ ವರ್ಗದಿಂದ ತೆಗೆದುಹಾಕುವಂತೆ ಇ-ಕಾಮರ್ಸ್ ಕಂಪನಿಗಳಿಗೆ ಹೇಳಿದೆ. ನ್ಯಾಷನಲ್ ಕಮಿಷನ್ ಫಾರ್ ಪ್ರೊಟೆಕ್ಷನ್ ಆಫ್ ಚೈಲ್ಡ್ ರೈಟ್ಸ್ (NCPCR), ಇದು CRPC ಕಾಯಿದೆ 2005 ರ ಸೆಕ್ಷನ್ 14 ರ ಅಡಿಯಲ್ಲಿ ಈ ಬಗ್ಗೆ ವಿಚಾರಣೆಯನ್ನು ನಡೆಸಿದೆ. ಹಾಗೂ 2005ರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (CPCR) ಕಾಯಿದೆಯ ಸೆಕ್ಷನ್ (3) ಅಡಿಯಲ್ಲಿ ರಚಿತವಾದ ಶಾಸನಬದ್ಧ ಸಂಸ್ಥೆಗಳು ಎಫ್‌ಎಸ್‌ಎಸ್ ಕಾಯಿದೆ 2006ರ ಅಡಿಯಲ್ಲಿ ಆರೋಗ್ಯ ಪಾನೀಯಗಳ ಬಗ್ಗೆ ಎಫ್‌ಎಸ್‌ಎಸ್‌ಎಐ ಮತ್ತು ಮೊಂಡೆಲೆಜ್ ಇಂಡಿಯಾ ಫುಡ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸುವಂತೆ ಏಪ್ರಿಲ್ 10ರ ಅಧಿಸೂಚನೆಯಲ್ಲಿ ತಿಳಿಸಿದೆ.

ಒಂದು ವರ್ಷದ ಹಿಂದೆ ಬೌರ್ನ್ವಿಟಾದಲ್ಲಿ ಸಕ್ಕರೆಯ ಮಟ್ಟದ ಅಂಶ ಹೆಚ್ಚಿದೆ ಎಂದು ಹೇಳಲಾಗಿತ್ತು. ಈ ಆರೋಪ ಬಂದ ನಂತರ ಮಕ್ಕಳ ಆರೋಗ್ಯದ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗ (NCPCR) ಮೊಂಡೆಲೆಜ್ ಇಂಡಿಯಾ ಮಾಲೀಕತ್ವದ ಬ್ರ್ಯಾಂಡ್​​ನ ಪಾನೀಯದಲ್ಲಿ ಸಮಸ್ಯೆ ಇದೆ ಎಂದು ಕಂಡುಕೊಂಡಿದೆ. ಈ ಕಾರಣಕ್ಕೆ ಈ ಬಗ್ಗೆ ಜಾಹೀರಾತು ನೀಡದಂತೆ ತಡೆ ನೀಡಲಾಗಿತ್ತು. ಪಾನೀಯದಲ್ಲಿ ಹೆಚ್ಚಿನ ಸಕ್ಕರೆ ಅಂಶ ಇದೆ ಎಂದ  ನಂತರ ಆಯೋಗ ಈ ಬಗ್ಗೆ ಕ್ರಮ ತೆಗೆದುಕೊಂಡಿದೆ.

ಇದನ್ನೂ ಓದಿ: ಟಾಟಾ ಕನ್ಸಲ್ಟನ್ಸಿ ಸರ್ವಿಸ್ ಲಾಭ ಶೇ. 9ರಷ್ಟು ಏರಿಕೆ; ಇಡೀ ವರ್ಷದಲ್ಲಿ 45,908 ಕೋಟಿ ರೂ ನಿವ್ವಳ ಲಾಭ; 28 ರೂ ಡಿವಿಡೆಂಡ್ ಘೋಷಣೆ

ಬೌರ್ನ್‌ವಿಟಾಕ್ಕೆ ಅಯೋಗ ಕಳಿಸಿದ ನೋಟಿಸ್​​ನಲ್ಲಿ, ಪಾನೀಯಕ್ಕೆ ಹಾಕುವ ಸಿಹಿ ಹಾಗೂ ಅದರ ಮಟ್ಟದ ಬಗ್ಗೆ ವರದಿ ನೀಡುವಂತೆ ಆದೇಶವನ್ನು ನೀಡಿದೆ. ಈ ಪಾನೀಯದಿಂದ ಅನೇಕಗೆ ಆರೋಗ್ಯ ಸಮಸ್ಯೆಗಳು ಕಾಡಿದೆ ಎಂದು ಹೇಳಲಾಗಿದೆ. ಈ ಕಾರಣಕ್ಕೆ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:13 pm, Sat, 13 April 24

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us