
ಹೈದರಾಬಾದ್, ಜುಲೈ 18: ಕೇಂದ್ರ ಸರ್ಕಾರಿ ಉದ್ದಿಮೆಗಳು (Central Public Sector Units) ಮುಂದಿನ ಮೂರು ವರ್ಷದಲ್ಲಿ ತೆಲಂಗಾಣದಲ್ಲಿ 10,000 ಕೋಟಿ ರೂ ಹೂಡಿಕೆ (Investment) ಮಾಡಲಿವೆ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿಗಾರಿಕೆ ಸಚಿವ ಜಿ. ಕಿಶನ್ ರೆಡ್ಡಿ (Kishan Reddy) ಹೇಳಿದ್ದಾರೆ. ಕಲ್ಲಿದ್ದಲು ಸಚಿವಾಲಯದ ವ್ಯಾಪ್ತಿಗೆ ಬರುವ ಕೋಲ್ ಇಂಡಿಯಾ ಲಿಮಿಟೆಡ್, ಎನ್ಎಲ್ಸಿ ಇಂಡಿಯಾ ಲಿಮಿಟೆಡ್ ಇತ್ಯಾದಿ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ತೆಲಂಗಾಣದಲ್ಲಿ ನವೀಕರಣ ಇಂಧ ಯೋಜನೆಗಳು, ಸೌರ ಮತ್ತು ವಾಯು ಶಕ್ತಿ ಘಟಕಗಳು, ಪಂಪ್ಡ್ ಸ್ಟೋರೇಜ್ ಯೋಜನೆಗಳು (ಪಿಎಸ್ಪಿ) ಮತ್ತು ಬ್ಯಾಟರಿ ಸ್ಟೋರೇಜ್ ಸಿಸ್ಟಂಗಳನ್ನು ಸ್ಥಾಪಿಸಲು ಸಜ್ಜಾಗಿವೆ ಎಂದು ಕಿಶನ್ ರೆಡ್ಡಿ ಹೇಳಿದ್ದಾರೆ. ಈ ಸಂಬಂಧ ಅವರು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರಿಗೆ ಪತ್ರ ಬರೆದಿದ್ದಾರೆ.
‘ತೆಲಂಗಾಣಕ್ಕೆ ನವೀಕರಣ ಇಂಧನ ಉತ್ಪಾದನಾ ಸಾಮರ್ಥ್ಯ ಇದೆ. ಕೇಂದ್ರ ಸರ್ಕಾರವೂ ಹಸಿರು ಶಕ್ತಿಗೆ ಹೆಚ್ಚು ಒತ್ತುಕೊಡುತ್ತಿದೆ. ಕೇಂದ್ರ ಮತ್ತು ರಾಜ್ಯದ ಸಹಯೋಗದಲ್ಲಿ ತೆಲಂಗಾಣದ ಆರ್ಥಿಕ ಬೆಳವಣಿಗೆ ಹೆಚ್ಚಿಸಲು, ಉದ್ಯೋಗ ಸೃಷ್ಟಿಸಲು ಅನುಕೂಲವಾಗುತ್ತದೆ. ಸುಸ್ಥಿರ ಅಭಿವೃದ್ಧಿಯಲ್ಲಿ ಈ ರಾಜ್ಯವು ಮುಂಚೂಣಿಯಲ್ಲಿರಲು ಸಾಧ್ಯವಾಗುತ್ತದೆ’ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ: ಕೃಷಿ, ನವೀಕರಣ ಇಂಧನ ಕ್ಷೇತ್ರ ಬಲಪಡಿಸಲು 51,000 ರೂ ನೀಡಲು ಸಂಪುಟ ಸಮ್ಮತಿ
ಇದನ್ನೂ ಓದಿ: PM DDK Yojana: ಕೋಟ್ಯಂತರ ರೈತರ ಭವಿಷ್ಯ ಹೆಚ್ಚಿಸಬಲ್ಲ ಪಿಎಂ ಧನ-ಧಾನ್ಯ ಕೃಷಿ ಯೋಜನೆ; ಏನಿದು ಪಿಎಂಡಿಡಿಕೆವೈ?
ಈ ಮೇಲಿನ ಯೋಜನೆಗಳನ್ನು ಜಾರಿಗೆ ತರಲು ಭೂಸ್ವಾಧೀನ ಮಾಡಿಕೊಳ್ಳಬೇಕಾಗುತ್ತದೆ. ರಾಜ್ಯ ಸರ್ಕಾರವು ಈ ನಿಟ್ಟಿನಲ್ಲಿ ಬೆಂಬಲ ನೀಡುವ ಅವಶ್ಯತೆ ಇದೆ ಎಂದು ಕಿಶನ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ