AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸೇರಿ 16 ರಾಜ್ಯಗಳಿಗೆ 56,415 ಕೋಟಿ ರೂ. ವಿಶೇಷ ನೆರವು ಘೋಷಿಸಿದ ಕೇಂದ್ರ

ಕರ್ನಾಟಕಕ್ಕೆ 3,647 ಕೋಟಿ ರೂಪಾಯಿ ವಿಶೇಷ ಸಹಾಯ ಘೋಷಣೆ ಮಾಡಲಾಗಿದೆ. ಪಶ್ಚಿಮ ಬಂಗಾಳ, ಮಧ್ಯ ಪ್ರದೇಶ ಹಾಗೂ ಬಿಹಾರಕ್ಕೆ ಹೆಚ್ಚಿನ ನೆರವು ಘೋಷಿಸಲಾಗಿದೆ.

ಕರ್ನಾಟಕ ಸೇರಿ 16 ರಾಜ್ಯಗಳಿಗೆ 56,415 ಕೋಟಿ ರೂ. ವಿಶೇಷ ನೆರವು ಘೋಷಿಸಿದ ಕೇಂದ್ರ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Jun 26, 2023 | 8:20 PM

ನವದೆಹಲಿ: ಬಂಡವಾಳ ಹೂಡಿಕೆ (Capital Investment) ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಸೇರಿದಂತೆ 16 ರಾಜ್ಯಗಳಿಗೆ ‘ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು 2023-24’ ಯೋಜನೆಯಡಿ 56,415 ಕೋಟಿ ರೂ. ವಿಶೇಷ ನೆರವು (Special Assistance) ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ ಘೋಷಿಸಿದೆ. ಆರೋಗ್ಯ, ಶಿಕ್ಷಣ, ನೀರಾವರಿ, ನೀರು ಸರಬರಾಜು, ವಿದ್ಯುತ್, ರಸ್ತೆಗಳು, ಸೇತುವೆಗಳು ಮತ್ತು ರೈಲ್ವೆ ಸೇರಿದಂತೆ ವಿವಿಧ ವಲಯಗಳಲ್ಲಿ ಬಂಡವಾಳ ಹೂಡಿಕೆ ಯೋಜನೆಗಳನ್ನು ಅನುಮೋದಿಸಲಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಬಂಡವಾಳ ವೆಚ್ಚ ಹೆಚ್ಚಿಸುವುದನ್ನು ಗಮನದಲ್ಲಿಟ್ಟುಕೊಂಡು ಮತ್ತು ರಾಜ್ಯಗಳಲ್ಲಿ ಬಂಡವಾಳ ವೆಚ್ಚಕ್ಕೆ ಉತ್ತೇಜನ ನೀಡುವ ಸಲುವಾಗಿ, 2023-24 ರ ಕೇಂದ್ರ ಬಜೆಟ್‌ನಲ್ಲಿ ‘ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು 2023-24′ ಯೋಜನೆಯನ್ನು ಘೋಷಿಸಲಾಯಿತು. ಯೋಜನೆಯಡಿಯಲ್ಲಿ, ರಾಜ್ಯ ಸರ್ಕಾರಗಳಿಗೆ ವಿಶೇಷ ಸಹಾಯವನ್ನು 50 ವರ್ಷಗಳ ಬಡ್ಡಿ ರಹಿತ ಸಾಲದ ರೂಪದಲ್ಲಿ ನೀಡಲಾಗುತ್ತದೆ. 2023-24ರ ಹಣಕಾಸು ವರ್ಷದಲ್ಲಿ 1.3 ಲಕ್ಷ ಕೋಟಿ ರೂ. ನೀಡಲು ಘೋಷಣೆ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಈ ಯೋಜನೆಯು ನಗರ ಪ್ರದೇಶಗಳಲ್ಲಿನ ಪೊಲೀಸ್ ಠಾಣೆಗಳಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ವಸತಿ ಹೆಚ್ಚಿಸುವ ಹಾಗೂ ಇನ್ನೂ ಅನೇಕ ಗುರಿಗಳನ್ನು ಹೊಂದಿದೆ ಎಂದು ಹಣಕಾಸು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: PM Kisan eKYC: ಪಿಎಂ ಕಿಸಾನ್ ಸ್ಕೀಮ್: ಇಕೆವೈಸಿ ಅಪ್​ಡೇಟ್ ಬಹಳ ಸುಲಭ; ಇಲ್ಲಿವೆ ವಿವಿಧ ವಿಧಾನಗಳು

ಕರ್ನಾಟಕಕ್ಕೆ 3,647 ಕೋಟಿ ರೂಪಾಯಿ ವಿಶೇಷ ಸಹಾಯ ಘೋಷಣೆ ಮಾಡಲಾಗಿದೆ. ಪಶ್ಚಿಮ ಬಂಗಾಳ, ಮಧ್ಯ ಪ್ರದೇಶ ಹಾಗೂ ಬಿಹಾರಕ್ಕೆ ಹೆಚ್ಚಿನ ನೆರವು ಘೋಷಿಸಲಾಗಿದೆ. ಈ ರಾಜ್ಯಗಳಿಗೆ ಕ್ರಮವಾಗಿ 7,523 ಕೋಟಿ ರೂ., 7,850 ರೂ, ಹಾಗೂ 9,640 ಕೋಟಿ ರೂ. ಘೋಷಣೆ ಮಾಡಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 8:19 pm, Mon, 26 June 23

ಅಕ್ಷಯ ತೃತೀಯ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಅಕ್ಷಯ ತೃತೀಯ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ