Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮದಾಗುವ ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ಸಿಕ್ಕಾಪಟ್ಟೆ ಇಳಿಕೆ ಆಗಲಿದೆಯಾ? ಟೆಸ್ಲಾ ಕಾರುಗಳ ಆಗಮನಕ್ಕೆ ವೇದಿಕೆ ಸಿದ್ಧವಾಗ್ತಿದೆಯಾ? ಇಲ್ಲಿದೆ ಡೀಟೇಲ್ಸ್

EV Import Duty: ಕೇಂದ್ರ ಸರ್ಕಾರ ಹೊಸ ಎಲೆಕ್ಟ್ರಿಕ್ ವಾಹನ ನೀತಿ ರೂಪಿಸುತ್ತಿರುವ ಬಗ್ಗೆ ಸುದ್ದಿ ಕೇಳಿಬರುತ್ತಿದೆ. ಟೆಸ್ಲಾ ಸಂಸ್ಥೆ ಭಾರತದಲ್ಲಿ ಹೊಸ ಕಾರು ಉತ್ಪಾದನಾ ಘಟಕ ಸ್ಥಾಪಿಸುವ ಪ್ರಸ್ತಾಪದ ಬೆನ್ನಲ್ಲೇ ಈ ಸುದ್ದಿ ಬಂದಿದೆ. ಅದರ ಪ್ರಕಾರ ಶೇ. 70 ಮತ್ತು ಶೇ. 100ರಷ್ಟು ಇರುವ ಆಮದು ಸುಂಕವನ್ನು ಶೇ. 15ಕ್ಕೆ ಇಳಿಸಬಹುದು.

ಆಮದಾಗುವ ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ಸಿಕ್ಕಾಪಟ್ಟೆ ಇಳಿಕೆ ಆಗಲಿದೆಯಾ? ಟೆಸ್ಲಾ ಕಾರುಗಳ ಆಗಮನಕ್ಕೆ ವೇದಿಕೆ ಸಿದ್ಧವಾಗ್ತಿದೆಯಾ? ಇಲ್ಲಿದೆ ಡೀಟೇಲ್ಸ್
ಟೆಸ್ಲಾ ಕಾರು
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 25, 2023 | 8:45 PM

ನವದೆಹಲಿ, ಆಗಸ್ಟ್ 25: ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ಪುಷ್ಟಿ ಕೊಡುವ ನಿರೀಕ್ಷೆಯಲ್ಲಿ ಸರ್ಕಾರ ಹೊಸ ಇವಿ ನೀತಿ (New EV Policy) ತರಲು ಯೋಜಿಸಿಸುತ್ತಿದ್ದು, ಅದರಲ್ಲಿ ಕೆಲ ಷರತ್ತುಗಳ ಮೇಲೆ ಎಲೆಕ್ಟ್ರಿಕ್ ವಾಹನಗಳ ಮೇಲಿನ ಆಮದು ಸುಂಕ ಇಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇಲಾನ್ ಮಸ್ಕ್ ಮಾಲಕತ್ವದ ಟೆಸ್ಲಾ ಕಂಪನಿ (Tesla) ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ತಯಾರಿಕಾ ಘಟಕ ಸ್ಥಾಪಿಸುವ ಪ್ರಸ್ತಾಪ ಸಲ್ಲಿಸಿದ ಬೆನ್ನಲ್ಲೇ ಸರ್ಕಾರ ಹೊಸ ಎಲೆಕ್ಟ್ರಿಕ್ ವಾಹನ ನೀತಿ ಜಾರಿಗೊಳಿಸಲು ಚಿಂತಿಸುತ್ತಿದೆ ಎಂದು ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ. ಇವಿ ಕ್ಷೇತ್ರದ ಅಧಿಕೃತ ಮೂಲವೊಂದರಿಂದ ತನಗೆ ಈ ಮಾಹಿತಿ ಸಿಕ್ಕಿರುವುದಾಗಿ ರಾಯ್ಟರ್ಸ್ ವರದಿಯಲ್ಲಿ ತಿಳಿಸಲಾಗಿದೆ.

ಪ್ರಸ್ತಾವಿತ ಇವಿ ನೀತಿ ಪ್ರಕಾರ, ಭಾರತದಲ್ಲಿ ತಯಾರಿಕಾ ಘಟಕ ಸ್ಥಾಪಿಸುವ ವಿದೇಶೀ ಆಟೊಮೊಬೈಲ್ ಕಂಪನಿಗಳು ತಮ್ಮ ಕಾರುಗಳನ್ನು ಭಾರತಕ್ಕೆ ಕಡಿಮೆ ತೆರಿಗೆಗೆ ಆಮದು ಮಾಡಿಕೊಳ್ಳಬಹುದು. ಸದ್ಯ 40,000 ಡಾಲರ್​ಗಿಂತ (ಸುಮಾರು 33 ಲಕ್ಷ ರೂ) ಹೆಚ್ಚು ಬೆಲೆಯ ಒಂದು ಕಾರಿನ ಆಮದಿಗೆ ಶೇ. 100ರಷ್ಟು ಆಮದು ಸುಂಕ ಇದೆ. ಇತರ ಕಾರುಗಳ ಆಮದಿಗೆ ಶೇ. 70ರಷ್ಟು ಆಮದು ಸುಂಕ ಇದೆ. ಹೊಸ ನೀತಿ ಜಾರಿಯಾದರೆ ಕಾರುಗಳ ಮೇಲಿನ ಆಮದು ಸುಂಕ ಶೇ. 15ಕ್ಕೆ ಇಳಿಯುತ್ತದೆ ಎನ್ನಲಾಗಿದೆ.

ಇದನ್ನೂ ಓದಿ: EPF: ಆರು ವರ್ಷದಲ್ಲಿ ಹೊಸದಾಗಿ ಇಪಿಎಫ್, ಇಎಸ್​ಐ, ಎನ್​ಪಿಎಸ್ ಪಡೆದವರ ಸಂಖ್ಯೆ 15 ಕೋಟಿಗೂ ಹೆಚ್ಚು

ಟೆಸ್ಲಾ ಸಂಸ್ಥೆ ಭಾರತದಲ್ಲಿ ಹೊಸ ಬ್ರ್ಯಾಂಡ್​ನ ಎಲೆಕ್ಟ್ರಿಕ್ ಕಾರನ್ನು ತಯಾರಿಸಲು ಯೋಜಿಸುತ್ತಿದೆ. 24,000 ಡಾಲರ್ (ಸುಮಾರು 20 ಲಕ್ಷ ರೂ) ಮೌಲ್ಯದ ಕಾರನ್ನು ಭಾರತದಲ್ಲಿ ತಯಾರಿಸಲು ಘಟಕ ಸ್ಥಾಪಿಸಲು ಆಸಕ್ತಿ ಹೊಂದಿರುವುದಾಗಿ ಟೆಸ್ಲಾ ಸಂಸ್ಥೆ ಕೇಂದ್ರ ವಾಣಿಜ್ಯ ಸಚಿವರ ಮುಂದೆ ಪ್ರಸ್ತಾಪ ಇಟ್ಟಿದೆ ಎಂಬ ಸುದ್ದಿಯನ್ನು ಇದೇ ರಾಯ್ಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿತ್ತು. ತಯಾರಿಕಾ ಘಟಕ ಸ್ಥಾಪನೆಗೆ ಬದಲಿಯಾಗಿ ಸರ್ಕಾರ ತನ್ನ ಇತರ ಕಾರುಗಳನ್ನು ಆಮದು ಮಾಡಲು ಅನುವು ಮಾಡಿಕೊಡಬೇಕು ಎಂಬ ಷರತ್ತನ್ನು ಟೆಸ್ಲಾ ಪ್ರತಿನಿಧಿಗಳು ಸರ್ಕಾರದ ಮುಂದಿಟ್ಟಿರುವುದು ತಿಳಿದುಬಂದಿದೆ.

ಸರ್ಕಾರ ಈ ಪ್ರಸ್ತಾಪಕ್ಕೆ ಒಪ್ಪಿರುವುದಾಗಲೀ, ಹೊಸ ಎವಿ ನೀತಿ ಜಾರಿಗೆ ತರುತ್ತಿರುವ ಸಂಗತಿಯಾಗಲೀ ಅಧಿಕೃತವಾಗಿ ಗೊತ್ತಾಗಿಲ್ಲ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಮದು ಸುಂಕ ಇಳಿಸುವ ಯಾವ ಪ್ರಸ್ತಾಪವೂ ತಮ್ಮ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Tata Nexon facelift: ಪವರ್ ಫುಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗೆ ಸಿದ್ದವಾಗಿರುವ ಟಾಟಾ ನೆಕ್ಸಾನ್ ಫೇಸ್ ಲಿಫ್ಟ್

ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರ ಈಗ ಬೆಳೆಯತೊಡಗಿದೆ. ಸದ್ಯ ಒಟ್ಟಾರೆ ಕಾರು ವಾಹನಗಳ ಪೈಕಿ ಇವಿ ವಾಹನಗಳ ಸಂಖ್ಯೆ ಶೇ. 2 ಮಾತ್ರ ಇದೆ. ಆದರೆ, ಮುಂದಿನ ದಿನಗಳಲ್ಲಿ ಇವಿ ಮಾರುಕಟ್ಟೆ ಗಣನೀಯವಾಗಿ ಹೆಚ್ಚಾಗಲಿದೆ. ಭಾರತದಲ್ಲಿ ಟಾಟಾ ಮೋಟಾರ್ಸ್ ಮತ್ತು ಮಹೀಂದ್ರ ಕಂಪನಿಗಳು ಸದ್ಯ ಎಲೆಕ್ಟ್ರಿಕ್ ಕಾರುಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿವೆ. ಸರ್ಕಾರವೇನಾದರೂ ಆಮದು ಸುಂಕವನ್ನು ಇಳಿಸಿದಲ್ಲಿ ಟೆಸ್ಲಾ ಸೇರಿದಂತೆ ಹಲವು ಕಂಪನಿಗಳ ಎಲೆಕ್ಟ್ರಿಕ್ ವಾಹನಗಳು ಭಾರತದ ಮಾರುಕಟ್ಟೆಗೆ ದಾಂಗುಡಿ ಇಡುವುದು ನಿಶ್ಚಿತ. ಈ ಬೆಳವಣಿಗೆ ನಿರೀಕ್ಷೆಯಲ್ಲಿ ನಿನ್ನೆಯಿಂದ ಟಾಟಾ ಮೋಟಾರ್ಸ್, ಮಹೀಂದ್ರ ಕಂಪನಿಗಳ ಷೇರುಗಳು ಇಳಿಯತೊಡಗಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್