AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST Compensation: ಕೇಂದ್ರದಿಂದ ರಾಜ್ಯಗಳಿಗೆ ಜಿಎಸ್​ಟಿ ಪರಿಹಾರ 53,489 ಕೋಟಿ ರೂಪಾಯಿ ಬಾಕಿ

ಜಿಎಸ್​ಟಿ ಪರಿಹಾರ ಸೆಸ್​ ರೂಪದಲ್ಲಿ ಹಣಕಾಸು ವರ್ಷ 2022ರಲ್ಲಿ ಏಪ್ರಿಲ್​ನಿಂದ ಜನವರಿ ಮಧ್ಯೆ 53849 ಕೋಟಿ ರೂಪಾಯಿ ಕೇಂದ್ರದಿಂದ ರಾಜ್ಯಗಳಿಗೆ ಬಾಕಿ ಉಳಿದಿದೆ ಎಂದು ತಿಳಿಸಲಾಗಿದೆ.

GST Compensation: ಕೇಂದ್ರದಿಂದ ರಾಜ್ಯಗಳಿಗೆ ಜಿಎಸ್​ಟಿ ಪರಿಹಾರ 53,489 ಕೋಟಿ ರೂಪಾಯಿ ಬಾಕಿ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Apr 04, 2022 | 3:12 PM

Share

ಹಣಕಾಸು ವರ್ಷ 2021-22ಕ್ಕೆ ಕೇಂದ್ರದಿಂದ ರಾಜ್ಯಗಳಿಗೆ ಜಿಎಸ್​ಟಿ ಪರಿಹಾರ (GST Compensation) 53,489 ಕೋಟಿ ರೂಪಾಯಿ ಬಾಕಿ ಇದೆ ಎಂದು ಹಣಕಾಸು ಸಚಿವಾಲಯದಿಂದ ಏಪ್ರಿಲ್​ 4ನೇ ತಾರೀಕಿನಂದು ಲೋಕಸಭೆಯಲ್ಲಿ ತಿಳಿಸಲಾಗಿದೆ. 31 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ (UT) ಪೈಕಿ 9ಕ್ಕೆ ಯಾವುದೇ ಬಾಕಿ ಇಲ್ಲ ಎಂದು ಹಣಕಾಸು ಸಚಿವಾಲಯ ಹಂಚಿಕೊಂಡಿರುವ ಡೇಟಾದಿಂದ ತಿಳಿದುಬಂದಿದೆ. ಈ ಪೈಕಿ ಅತಿ ಹೆಚ್ಚು ಬಾಕಿ ಉಳಿದಿರುವುದು ಮಹಾರಾಷ್ಟ್ರಕ್ಕೆ. 11,563 ಕೋಟಿ ರೂಪಾಯಿ ಜಿಎಸ್​ಟಿ ಪರಿಹಾರ ಪಾವತಿಸಬೇಕಿದೆ. ಆ ನಂತರದ ಸ್ಥಾನದಲ್ಲಿ ಉತ್ತರಪ್ರದೇಶ ಇದ್ದು, 6954 ಕೋಟಿ ರೂಪಾಯಿ ಪಾವತಿ ಮಾಡಬೇಕಿದೆ. 2021ರ ಏಪ್ರಿಲ್​ನಿಂದ 2022ರ ಮಧ್ಯದ ಅವಧಿಯಲ್ಲಿ ರಾಜ್ಯ ಸರ್ಕಾರಗಳಿಗೆ ಪಾವತಿಸಬೇಕಾದ ಜಿಎಸ್​ಟಿ ಪರಿಹಾರ ಬಾಕಿ ಇದಾಗಿದೆ. ಸಂಪೂರ್ಣ ವರ್ಷದ ಲೆಕ್ಕಕ್ಕೆ ತೆಗೆದುಕೊಂಡರೆ ಮತ್ತೂ ಹೆಚ್ಚಾಗುತ್ತದೆ.

ಜಿಎಸ್​ಟಿ ಪರಿಹಾರ ವಿಚಾರವಾಗಿ ಕಳೆದ ಕೆಲವು ಸಮಯದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಧ್ಯೆ ತಿಕ್ಕಾಟ ನಡೆದಿದೆ. ಕಾನೂನಿನ ಪ್ರಕಾರ, ಐದು ವರ್ಷಗಳ ಅವಧಿಗೆ ರಾಜ್ಯಗಳಿಗೆ ಶೇ 14ರ ಆದಾಯ ಬೆಳವಣಿಗೆ ಖಾತ್ರಿ ನೀಡುತ್ತದೆ. ಇದು 2022ರ ಜೂನ್ ತನಕ ಅನ್ವಯಿಸುತ್ತದೆ. ಆದರೆ ಕೊವಿಡ್ ಕಾರಣಕ್ಕೆ ತೆರಿಗೆ ಆದಾಯ ಕುಸಿದಿತ್ತು ಮತ್ತು ಜಿಎಸ್​ಟಿ ಪರಿಹಾರ ಸೆಸ್ ಪೂರ್ತಿ ನೆಲ ಕಚ್ಚಿತ್ತು. ಇದರಿಂದಾಗಿ ಕೇಂದ್ರ ಸರ್ಕಾರವು ಮಾರುಕಟ್ಟೆಯಿಂದ ಸಾಲ ಪಡೆಯುವಂತೆ ಒತ್ತಡ ಸೃಷ್ಟಿಯಾಗಿ, ರಾಜ್ಯಗಳಿಗೆ ನಿಧಿಯನ್ನು ದಾಟಿಸಬೇಕಾಯಿತು. ಹಣಕಾಸು ವರ್ಷ 2021ರಲ್ಲಿ ಕೇಂದ್ರ ಸರ್ಕಾರವು 1.10 ಲಕ್ಷ ಕೋಟಿ ಸಾಲ ಮತ್ತು ಹಣಕಾಸು ವರ್ಷ 2022ರಲ್ಲಿ 1.59 ಲಕ್ಷ ಕೋಟಿ ರೂಪಾಯಿ ಸಾಲ ಪಡೆದಿತ್ತು. ರಾಜ್ಯ ಸರ್ಕಾರಗಳ ಪರವಾಗಿ ಜಿಎಸ್​ಟಿ ಪರಿಹಾರ ಸೆಸ್ ಸಂಗ್ರಹದ ಕೊರತೆಯನ್ನು ಹೊಂದಾಣಿಕೆ ಮಾಡಲು ಈ ಸಾಲ ಮಾಡಲಾಗಿದೆ.

“ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರ/ಕೇಂದ್ರಾಡಳಿತ ಪ್ರದೇಶಗಳಿಗೆ ಜಿಎಸ್​ಟಿ (ರಾಜ್ಯಗಳಿಗೆ ಪರಿಹಾರ) ಕಾಯ್ದೆ, 2017ರ ಅಡಿಯಲ್ಲಿ ಜಿಎಸ್​ಟಿ ಪರಿಹಾರ ಪಾವತಿಸಲು ಬದ್ಧವಾಗಿದೆ. ಇದರ ಬದಲಾವಣೆಯ ಕಾಲಘಟ್ಟದಲ್ಲಿ ಪರಿಹಾರ ಸೆಸ್​ ಮೊತ್ತವನ್ನು ಐದು ವರ್ಷಕ್ಕೂ ಮೀರಿ ಜಿಎಸ್​ಟಿ ಆದಾಯ ಕೊರತೆಯನ್ನು ಸರಿತೂಗಿಸಲು ಹಾಗೂ ವಿಶೇಷ ಗವಾಕ್ಷಿ ಯೋಜನೆ ಅಡಿಯಲ್ಲಿ ಪಡೆದ ಸಾಲ ಮರುಪಾವತಿಗೆ ಬಳಸಬಹುದು,” ಎಂದು ಲೋಕಸಭೆಯಲ್ಲಿ ಹಣಕಾಸು ಖಾತೆ ರಾಜ್ಯ ಸಚಿವರಾದ ಪಂಕಜ್ ಚೌಧರಿ ಲಿಖಿತ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: GST Collection: 2022ರ ಮಾರ್ಚ್​ನಲ್ಲಿ 1.42 ಲಕ್ಷ ಕೋಟಿ ರೂ. ಸಂಗ್ರಹದ ಮೂಲಕ ಜಿಎಸ್​ಟಿ ಆದಾಯ ಹೊಸ ದಾಖಲೆ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?