Sign In

By signing in or creating an account, you agree with Associated Broadcasting Company's Terms & Conditions and Privacy Policy.

PMGKAY: ಕೇಂದ್ರ ಸರ್ಕಾರದಿಂದ ಕೊರೊನಾ ಪರಿಹಾರವಾಗಿ 600 ಲಕ್ಷ ಟನ್​ ಆಹಾರ ಧಾನ್ಯ ಬಿಡುಗಡೆ

ಕೊರೊನಾ ಬಿಕ್ಕಟ್ಟಿನಿಂದ 2020- 21 ಹಾಗೂ 2021- 22ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ಘೋಷಣೆ ಮಾಡಿತು. ಅದರಲ್ಲೂ ವಲಸೆ ಕಾರ್ಮಿಕರು, ಬಡವರನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ರೂಪಿಸಿದ ಯೋಜನೆಗಳಿಂದ ಲಕ್ಷಾಂತರ ಮಂದಿಗೆ ಅನುಕೂಲವಾಗಿದ್ದು ಹೌದು. ಅದರಲ್ಲಿ ಪ್ರಧಾನ ಮಂತ್ರೊ ಗರೀಬ್ ಕಲ್ಯಾಣ್ ಅನ್ನ ಯೋಜನಾ ಅಡಿಯಲ್ಲಿ ಉಚಿತವಾಗಿ ಆಹಾರ ಧಾನ್ಯವನ್ನು ವಿತರಣೆ ಮಾಡಿದ್ದನ್ನು ಸ್ಮರಿಸಬೇಕಾಗುತ್ತದೆ. ಹಾಗೆ ಕೊರೊನಾ ಬಿಕ್ಕಟ್ಟಿನ 2020- 21 ಹಾಗೂ 2021- 22ನೇ ಸಾಲಿನಲ್ಲಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಆಹಾರ ಧಾನ್ಯಗಳ […]

PMGKAY: ಕೇಂದ್ರ ಸರ್ಕಾರದಿಂದ ಕೊರೊನಾ ಪರಿಹಾರವಾಗಿ 600 ಲಕ್ಷ ಟನ್​ ಆಹಾರ ಧಾನ್ಯ ಬಿಡುಗಡೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Srinivas Mata

Updated on: Jul 27, 2021 | 9:44 PM

ಕೊರೊನಾ ಬಿಕ್ಕಟ್ಟಿನಿಂದ 2020- 21 ಹಾಗೂ 2021- 22ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ಘೋಷಣೆ ಮಾಡಿತು. ಅದರಲ್ಲೂ ವಲಸೆ ಕಾರ್ಮಿಕರು, ಬಡವರನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ರೂಪಿಸಿದ ಯೋಜನೆಗಳಿಂದ ಲಕ್ಷಾಂತರ ಮಂದಿಗೆ ಅನುಕೂಲವಾಗಿದ್ದು ಹೌದು. ಅದರಲ್ಲಿ ಪ್ರಧಾನ ಮಂತ್ರೊ ಗರೀಬ್ ಕಲ್ಯಾಣ್ ಅನ್ನ ಯೋಜನಾ ಅಡಿಯಲ್ಲಿ ಉಚಿತವಾಗಿ ಆಹಾರ ಧಾನ್ಯವನ್ನು ವಿತರಣೆ ಮಾಡಿದ್ದನ್ನು ಸ್ಮರಿಸಬೇಕಾಗುತ್ತದೆ. ಹಾಗೆ ಕೊರೊನಾ ಬಿಕ್ಕಟ್ಟಿನ 2020- 21 ಹಾಗೂ 2021- 22ನೇ ಸಾಲಿನಲ್ಲಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಆಹಾರ ಧಾನ್ಯಗಳ ಪ್ರಮಾಣ ಎಷ್ಟು ಗೊತ್ತಾ? 600 ಲಕ್ಷ ಟನ್​ಗಳು.

ಗ್ರಾಹಕ ವ್ಯವಹಾರಗಳ ಸಚಿವಾಲಯದ ದತ್ತಾಂಶಗಳ ಪ್ರಕಾರವಾಗಿ, 600 ಲಕ್ಷ ಟನ್​ಗಳ ಆಹಾರ ಧಾನ್ಯಗಳನ್ನು ಈ ಅವಧಿಯಲ್ಲಿ ಫಲಾನುಭವಿಗಳಿಗೆ ವಿತರಣೆ ಮಾಡಲಾಗಿದೆ. ಈ ಪೈಕಿ, ಜುಲೈ 14, 2021ರ ತನಕದ ಲೆಕ್ಕಾಚಾರದಂತೆ 400 ಲಕ್ಷ ಟನ್ ಆಹಾರ ಧಾನ್ಯಗಳ ದಾಸ್ತಾನನ್ನು ರಾಜ್ಯಗಳಿಂದ ತೆಗೆದುಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಬಳಿಯಲ್ಲಿ ಜುಲೈ 1, 2021ರ ತನಕ ಇದ್ದ ಆಹಾರ ಧಾನ್ಯಗಳ ಪ್ರಮಾಣ 900 ಲಕ್ಷ ಟನ್​ಗಳು. ಅದರಲ್ಲಿ 603 ಲಕ್ಷ ಟನ್ ಗೋಧಿ ಮತ್ತು 296 ಲಕ್ಷ ಟನ್ ಅಕ್ಕಿ ಇತ್ತು.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನಾವನ್ನು ಸರ್ಕಾರದಿಂದ 2020ರ ಮಾರ್ಚ್​ನಲ್ಲಿ ಆರಂಭಿಸಲಾಯಿತು. ಅದು ಕೂಡ ಕೊರೊನಾ ನಿಯಂತ್ರಣ ಮಾಡುವ ಸಲುವಾಗಿ ದೇಶದಾದ್ಯಂತ ಲಾಕ್​ ಡೌನ್​ ಘೋಷಣೆ ಮಾಡಿದಾಗ ಲಕ್ಷಾಂತರ ಮಂದಿ ವಲಸಿಗ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಬೇಕಾಯಿತು. ಆ ಸಂದರ್ಭದಲ್ಲಿ ಈ ಯೋಜನೆಯನ್ನು ರೂಪಿಸಲಾಯಿತು. ಚದುರಿ ಹೋದ ವಲಸಿಗರಿಗೆ ಮತ್ತು ಗ್ರಾಮೀಣ ಭಾಗದ ಜನರಿಗೆ ಉಚಿತ ಆಹಾರ ಧಾನ್ಯವನ್ನು ವಿತರಣೆ ಮಾಡಬೇಕು ಎಂಬ ಉದ್ದೇಶದಿಂದಲೇ ಆರಂಭವಾದ ಕೇಂದ್ರ ಸರ್ಕಾರದ ಯೋಜನೆಯಿದು.

ಇದನ್ನೂ ಓದಿ: ಪ್ರಧಾನಿ ಗರೀಬ್ ಕಲ್ಯಾಣ್: ನವೆಂಬರ್​ವರೆಗೂ ಅನ್ನ ಯೋಜನೆ ಮುಂದುವರಿಕೆ- ಪ್ರಧಾನಿ ಮೋದಿ

(Centre Released 600 Lakh Tonnes Of Food Grains During Corona Pandemic)

ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ