AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PMGKAY: ಕೇಂದ್ರ ಸರ್ಕಾರದಿಂದ ಕೊರೊನಾ ಪರಿಹಾರವಾಗಿ 600 ಲಕ್ಷ ಟನ್​ ಆಹಾರ ಧಾನ್ಯ ಬಿಡುಗಡೆ

ಕೊರೊನಾ ಬಿಕ್ಕಟ್ಟಿನಿಂದ 2020- 21 ಹಾಗೂ 2021- 22ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ಘೋಷಣೆ ಮಾಡಿತು. ಅದರಲ್ಲೂ ವಲಸೆ ಕಾರ್ಮಿಕರು, ಬಡವರನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ರೂಪಿಸಿದ ಯೋಜನೆಗಳಿಂದ ಲಕ್ಷಾಂತರ ಮಂದಿಗೆ ಅನುಕೂಲವಾಗಿದ್ದು ಹೌದು. ಅದರಲ್ಲಿ ಪ್ರಧಾನ ಮಂತ್ರೊ ಗರೀಬ್ ಕಲ್ಯಾಣ್ ಅನ್ನ ಯೋಜನಾ ಅಡಿಯಲ್ಲಿ ಉಚಿತವಾಗಿ ಆಹಾರ ಧಾನ್ಯವನ್ನು ವಿತರಣೆ ಮಾಡಿದ್ದನ್ನು ಸ್ಮರಿಸಬೇಕಾಗುತ್ತದೆ. ಹಾಗೆ ಕೊರೊನಾ ಬಿಕ್ಕಟ್ಟಿನ 2020- 21 ಹಾಗೂ 2021- 22ನೇ ಸಾಲಿನಲ್ಲಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಆಹಾರ ಧಾನ್ಯಗಳ […]

PMGKAY: ಕೇಂದ್ರ ಸರ್ಕಾರದಿಂದ ಕೊರೊನಾ ಪರಿಹಾರವಾಗಿ 600 ಲಕ್ಷ ಟನ್​ ಆಹಾರ ಧಾನ್ಯ ಬಿಡುಗಡೆ
ಪ್ರಾತಿನಿಧಿಕ ಚಿತ್ರ
TV9 Web
| Updated By: Srinivas Mata|

Updated on: Jul 27, 2021 | 9:44 PM

Share

ಕೊರೊನಾ ಬಿಕ್ಕಟ್ಟಿನಿಂದ 2020- 21 ಹಾಗೂ 2021- 22ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ಘೋಷಣೆ ಮಾಡಿತು. ಅದರಲ್ಲೂ ವಲಸೆ ಕಾರ್ಮಿಕರು, ಬಡವರನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ರೂಪಿಸಿದ ಯೋಜನೆಗಳಿಂದ ಲಕ್ಷಾಂತರ ಮಂದಿಗೆ ಅನುಕೂಲವಾಗಿದ್ದು ಹೌದು. ಅದರಲ್ಲಿ ಪ್ರಧಾನ ಮಂತ್ರೊ ಗರೀಬ್ ಕಲ್ಯಾಣ್ ಅನ್ನ ಯೋಜನಾ ಅಡಿಯಲ್ಲಿ ಉಚಿತವಾಗಿ ಆಹಾರ ಧಾನ್ಯವನ್ನು ವಿತರಣೆ ಮಾಡಿದ್ದನ್ನು ಸ್ಮರಿಸಬೇಕಾಗುತ್ತದೆ. ಹಾಗೆ ಕೊರೊನಾ ಬಿಕ್ಕಟ್ಟಿನ 2020- 21 ಹಾಗೂ 2021- 22ನೇ ಸಾಲಿನಲ್ಲಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಆಹಾರ ಧಾನ್ಯಗಳ ಪ್ರಮಾಣ ಎಷ್ಟು ಗೊತ್ತಾ? 600 ಲಕ್ಷ ಟನ್​ಗಳು.

ಗ್ರಾಹಕ ವ್ಯವಹಾರಗಳ ಸಚಿವಾಲಯದ ದತ್ತಾಂಶಗಳ ಪ್ರಕಾರವಾಗಿ, 600 ಲಕ್ಷ ಟನ್​ಗಳ ಆಹಾರ ಧಾನ್ಯಗಳನ್ನು ಈ ಅವಧಿಯಲ್ಲಿ ಫಲಾನುಭವಿಗಳಿಗೆ ವಿತರಣೆ ಮಾಡಲಾಗಿದೆ. ಈ ಪೈಕಿ, ಜುಲೈ 14, 2021ರ ತನಕದ ಲೆಕ್ಕಾಚಾರದಂತೆ 400 ಲಕ್ಷ ಟನ್ ಆಹಾರ ಧಾನ್ಯಗಳ ದಾಸ್ತಾನನ್ನು ರಾಜ್ಯಗಳಿಂದ ತೆಗೆದುಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಬಳಿಯಲ್ಲಿ ಜುಲೈ 1, 2021ರ ತನಕ ಇದ್ದ ಆಹಾರ ಧಾನ್ಯಗಳ ಪ್ರಮಾಣ 900 ಲಕ್ಷ ಟನ್​ಗಳು. ಅದರಲ್ಲಿ 603 ಲಕ್ಷ ಟನ್ ಗೋಧಿ ಮತ್ತು 296 ಲಕ್ಷ ಟನ್ ಅಕ್ಕಿ ಇತ್ತು.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನಾವನ್ನು ಸರ್ಕಾರದಿಂದ 2020ರ ಮಾರ್ಚ್​ನಲ್ಲಿ ಆರಂಭಿಸಲಾಯಿತು. ಅದು ಕೂಡ ಕೊರೊನಾ ನಿಯಂತ್ರಣ ಮಾಡುವ ಸಲುವಾಗಿ ದೇಶದಾದ್ಯಂತ ಲಾಕ್​ ಡೌನ್​ ಘೋಷಣೆ ಮಾಡಿದಾಗ ಲಕ್ಷಾಂತರ ಮಂದಿ ವಲಸಿಗ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಬೇಕಾಯಿತು. ಆ ಸಂದರ್ಭದಲ್ಲಿ ಈ ಯೋಜನೆಯನ್ನು ರೂಪಿಸಲಾಯಿತು. ಚದುರಿ ಹೋದ ವಲಸಿಗರಿಗೆ ಮತ್ತು ಗ್ರಾಮೀಣ ಭಾಗದ ಜನರಿಗೆ ಉಚಿತ ಆಹಾರ ಧಾನ್ಯವನ್ನು ವಿತರಣೆ ಮಾಡಬೇಕು ಎಂಬ ಉದ್ದೇಶದಿಂದಲೇ ಆರಂಭವಾದ ಕೇಂದ್ರ ಸರ್ಕಾರದ ಯೋಜನೆಯಿದು.

ಇದನ್ನೂ ಓದಿ: ಪ್ರಧಾನಿ ಗರೀಬ್ ಕಲ್ಯಾಣ್: ನವೆಂಬರ್​ವರೆಗೂ ಅನ್ನ ಯೋಜನೆ ಮುಂದುವರಿಕೆ- ಪ್ರಧಾನಿ ಮೋದಿ

(Centre Released 600 Lakh Tonnes Of Food Grains During Corona Pandemic)

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?