AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PMGKAY: ಕೇಂದ್ರ ಸರ್ಕಾರದಿಂದ ಕೊರೊನಾ ಪರಿಹಾರವಾಗಿ 600 ಲಕ್ಷ ಟನ್​ ಆಹಾರ ಧಾನ್ಯ ಬಿಡುಗಡೆ

ಕೊರೊನಾ ಬಿಕ್ಕಟ್ಟಿನಿಂದ 2020- 21 ಹಾಗೂ 2021- 22ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ಘೋಷಣೆ ಮಾಡಿತು. ಅದರಲ್ಲೂ ವಲಸೆ ಕಾರ್ಮಿಕರು, ಬಡವರನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ರೂಪಿಸಿದ ಯೋಜನೆಗಳಿಂದ ಲಕ್ಷಾಂತರ ಮಂದಿಗೆ ಅನುಕೂಲವಾಗಿದ್ದು ಹೌದು. ಅದರಲ್ಲಿ ಪ್ರಧಾನ ಮಂತ್ರೊ ಗರೀಬ್ ಕಲ್ಯಾಣ್ ಅನ್ನ ಯೋಜನಾ ಅಡಿಯಲ್ಲಿ ಉಚಿತವಾಗಿ ಆಹಾರ ಧಾನ್ಯವನ್ನು ವಿತರಣೆ ಮಾಡಿದ್ದನ್ನು ಸ್ಮರಿಸಬೇಕಾಗುತ್ತದೆ. ಹಾಗೆ ಕೊರೊನಾ ಬಿಕ್ಕಟ್ಟಿನ 2020- 21 ಹಾಗೂ 2021- 22ನೇ ಸಾಲಿನಲ್ಲಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಆಹಾರ ಧಾನ್ಯಗಳ […]

PMGKAY: ಕೇಂದ್ರ ಸರ್ಕಾರದಿಂದ ಕೊರೊನಾ ಪರಿಹಾರವಾಗಿ 600 ಲಕ್ಷ ಟನ್​ ಆಹಾರ ಧಾನ್ಯ ಬಿಡುಗಡೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 27, 2021 | 9:44 PM

Share

ಕೊರೊನಾ ಬಿಕ್ಕಟ್ಟಿನಿಂದ 2020- 21 ಹಾಗೂ 2021- 22ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ಘೋಷಣೆ ಮಾಡಿತು. ಅದರಲ್ಲೂ ವಲಸೆ ಕಾರ್ಮಿಕರು, ಬಡವರನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ರೂಪಿಸಿದ ಯೋಜನೆಗಳಿಂದ ಲಕ್ಷಾಂತರ ಮಂದಿಗೆ ಅನುಕೂಲವಾಗಿದ್ದು ಹೌದು. ಅದರಲ್ಲಿ ಪ್ರಧಾನ ಮಂತ್ರೊ ಗರೀಬ್ ಕಲ್ಯಾಣ್ ಅನ್ನ ಯೋಜನಾ ಅಡಿಯಲ್ಲಿ ಉಚಿತವಾಗಿ ಆಹಾರ ಧಾನ್ಯವನ್ನು ವಿತರಣೆ ಮಾಡಿದ್ದನ್ನು ಸ್ಮರಿಸಬೇಕಾಗುತ್ತದೆ. ಹಾಗೆ ಕೊರೊನಾ ಬಿಕ್ಕಟ್ಟಿನ 2020- 21 ಹಾಗೂ 2021- 22ನೇ ಸಾಲಿನಲ್ಲಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಆಹಾರ ಧಾನ್ಯಗಳ ಪ್ರಮಾಣ ಎಷ್ಟು ಗೊತ್ತಾ? 600 ಲಕ್ಷ ಟನ್​ಗಳು.

ಗ್ರಾಹಕ ವ್ಯವಹಾರಗಳ ಸಚಿವಾಲಯದ ದತ್ತಾಂಶಗಳ ಪ್ರಕಾರವಾಗಿ, 600 ಲಕ್ಷ ಟನ್​ಗಳ ಆಹಾರ ಧಾನ್ಯಗಳನ್ನು ಈ ಅವಧಿಯಲ್ಲಿ ಫಲಾನುಭವಿಗಳಿಗೆ ವಿತರಣೆ ಮಾಡಲಾಗಿದೆ. ಈ ಪೈಕಿ, ಜುಲೈ 14, 2021ರ ತನಕದ ಲೆಕ್ಕಾಚಾರದಂತೆ 400 ಲಕ್ಷ ಟನ್ ಆಹಾರ ಧಾನ್ಯಗಳ ದಾಸ್ತಾನನ್ನು ರಾಜ್ಯಗಳಿಂದ ತೆಗೆದುಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಬಳಿಯಲ್ಲಿ ಜುಲೈ 1, 2021ರ ತನಕ ಇದ್ದ ಆಹಾರ ಧಾನ್ಯಗಳ ಪ್ರಮಾಣ 900 ಲಕ್ಷ ಟನ್​ಗಳು. ಅದರಲ್ಲಿ 603 ಲಕ್ಷ ಟನ್ ಗೋಧಿ ಮತ್ತು 296 ಲಕ್ಷ ಟನ್ ಅಕ್ಕಿ ಇತ್ತು.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನಾವನ್ನು ಸರ್ಕಾರದಿಂದ 2020ರ ಮಾರ್ಚ್​ನಲ್ಲಿ ಆರಂಭಿಸಲಾಯಿತು. ಅದು ಕೂಡ ಕೊರೊನಾ ನಿಯಂತ್ರಣ ಮಾಡುವ ಸಲುವಾಗಿ ದೇಶದಾದ್ಯಂತ ಲಾಕ್​ ಡೌನ್​ ಘೋಷಣೆ ಮಾಡಿದಾಗ ಲಕ್ಷಾಂತರ ಮಂದಿ ವಲಸಿಗ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಬೇಕಾಯಿತು. ಆ ಸಂದರ್ಭದಲ್ಲಿ ಈ ಯೋಜನೆಯನ್ನು ರೂಪಿಸಲಾಯಿತು. ಚದುರಿ ಹೋದ ವಲಸಿಗರಿಗೆ ಮತ್ತು ಗ್ರಾಮೀಣ ಭಾಗದ ಜನರಿಗೆ ಉಚಿತ ಆಹಾರ ಧಾನ್ಯವನ್ನು ವಿತರಣೆ ಮಾಡಬೇಕು ಎಂಬ ಉದ್ದೇಶದಿಂದಲೇ ಆರಂಭವಾದ ಕೇಂದ್ರ ಸರ್ಕಾರದ ಯೋಜನೆಯಿದು.

ಇದನ್ನೂ ಓದಿ: ಪ್ರಧಾನಿ ಗರೀಬ್ ಕಲ್ಯಾಣ್: ನವೆಂಬರ್​ವರೆಗೂ ಅನ್ನ ಯೋಜನೆ ಮುಂದುವರಿಕೆ- ಪ್ರಧಾನಿ ಮೋದಿ

(Centre Released 600 Lakh Tonnes Of Food Grains During Corona Pandemic)

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ