ಟೊಮೆಟೋ ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮ; ಸಬ್ಸಿಡಿ ದರದಲ್ಲಿ ಸರ್ಕಾರದಿಂದಲೇ ಟೊಮೆಟೋ ಮಾರಾಟ

Centre selling tomatoes at subsidized rate: ನೂರು ರೂ ಆಸುಪಾಸಿನಲ್ಲಿರುವ ಟೊಮೆಟೋ ಬೆಲೆ ಏರಿಕೆಗೆ ಕಡಿವಾಣ ಹಾಕಲು ಸರ್ಕಾರ ಸಬ್ಸಿಡಿ ದರದಲ್ಲಿ ಆ ಹಣ್ಣು ಮಾರುತ್ತಿದೆ. ರಾಜಧಾನಿ ನಗರಿ ದೆಹಲಿಯಲ್ಲಿ ಎನ್​ಸಿಸಿಎಫ್​​ನಿಂದ ವಿವಿಧೆಡೆ ಟೊಮೆಟೋ ಮಾರುವ ಕಾರ್ಯಕ್ರಮಕ್ಕೆ ಜುಲೈ 29ರಂದು ಸಚಿವ ಪ್ರಹ್ಲಾದ್ ಜೋಷಿ ಚಾಲನೆ ನೀಡಿದರು. ಇನ್ನೊಂದು ವಾರ ಅಥವಾ ಹತ್ತು ದಿನದಲ್ಲಿ ಟೊಮೆಟೋ ಬೆಲೆ ಕಡಿಮೆಗೊಳ್ಳುತ್ತದೆ ಎಂದು ಜೋಷಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಟೊಮೆಟೋ ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮ; ಸಬ್ಸಿಡಿ ದರದಲ್ಲಿ ಸರ್ಕಾರದಿಂದಲೇ ಟೊಮೆಟೋ ಮಾರಾಟ
ಪ್ರಹ್ಲಾದ್ ಜೋಷಿ
Follow us
|

Updated on: Jul 29, 2024 | 5:09 PM

ನವದೆಹಲಿ, ಜುಲೈ 29: ನೂರು ರೂಗಿಂತ ಅಧಿಕಗೊಂಡಿರುವ ಟೊಮೆಟೋ ಬೆಲೆಯನ್ನು ಹತೋಟಿಗೆ ತರಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸಹಕಾರಿ ಗ್ರಾಹಕರ ಮಹಾ ಒಕ್ಕೂಟ (ಎನ್​ಸಿಸಿಎಫ್) ಸಬ್ಸಿಡಿ ದರದಲ್ಲಿ ಟೊಮೆಟೋ ಮಾರಲಿದೆ. ಮೊದಲಿಗೆ ದೆಹಲಿಯ ವಿವಿಧ ಪ್ರದೇಶಗಳಲ್ಲಿ ಎನ್​ಸಿಸಿಎಫ್​ನ ರೀಟೇಲ್ ಸ್ಟೋರ್ ಮತ್ತು ವಾಹನಗಳ ಮೂಲಕ ಟೊಮೆಟೋ ಮಾರಾಟ ನಡೆಯಲಿದೆ. ಕಿಲೋಗೆ 60 ರೂಗೆ ಈ ಹಣ್ಣು ಸಿಗಲಿದೆ. ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಇಂದು ಸೋಮವಾರ ಈ ಯೋಜನೆಗೆ ಚಾಲನೆ ನೀಡಿದರು.

ದೇಶದ ಹಲವೆಡೆ ಟೊಮೆಟೋ ಬೆಲೆ 70 ರೂಗಿಂತ ಮೇಲೇರಿದೆ. ದೆಹಲಿ ಮೊದಲಾದ ಕೆಲವೆಡೆಯಂತೆ ಬೆಲೆ 120 ರೂವರೆಗೂ ಹೋಗಿದೆ. ಹಣದುಬ್ಬರ ಇಳಿಸುವ ಗುರಿಗೆ ಇದು ತಡೆಯಾಗುವುದರಿಂದ ಸರ್ಕಾರ ಈ ಬೆಲೆ ಏರಿಕೆಗೆ ಕಡಿವಾಣ ಹಾಕುವುದು ಅನಿವಾರ್ಯ. ಕೇಂದ್ರ ಸರ್ಕಾರ ಸ್ಥಾಪಿಸಿರುವ ಬೆಲೆ ಸ್ಥಿರತೆ ನಿಧಿಯನ್ನು (ಪಿಎಸ್​ಎಫ್) ಬಳಸಿ ಮಂಡಿಗಳಿಂದ ಟೊಮೆಟೋ ಖರೀದಿಸಿ ವಿವಿಧ ಕಡೆ ಮಾರಾಟ ಮಾಡುವ ಪ್ರಯತ್ನ ಮಾಡಲಾಗಿದೆ.

ಈ ಹಿಂದೆಯೂ ಈರುಳ್ಳಿ, ಆಲೂಗಡ್ಡೆ ಇತ್ಯಾದಿ ಆಹಾರವಸ್ತುಗಳ ಬೆಲೆ ಏರಿಕೆಯಾದಾಗ ಸರ್ಕಾರದಿಂದಲೇ ಅವುಗಳನ್ನು ಅಗತ್ಯ ಇರುವೆಡೆ ಮಾರುವ ಕೆಲಸ ಮಾಡಲಾಗುತ್ತಿದೆ. ಅನಗತ್ಯವಾಗಿ ಇವುಗಳ ಕೊರತೆಯಿಂದ ಬೆಲೆ ಏರಿಕೆ ಸೃಷ್ಟಿಯಾಗುವುದನ್ನು ತಪ್ಪಿಸಲು ಸರ್ಕಾರ ಇಂಥ ಕ್ರಮ ಕೈಗೊಳ್ಳುತ್ತದೆ.

ಇದನ್ನೂ ಓದಿ: ITR Filing Deadline: ಜುಲೈ 31ರೊಳಗೆ ಐಟಿ ರಿಟರ್ನ್ಸ್ ಸಲ್ಲಿಸದಿದ್ದರೆ ಏನಾಗುತ್ತೆ?

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಇನ್ನು 10 ದಿನದೊಳಗೆ ಟೊಮೆಟೋ ಬೆಲೆ ಸಹಜ ಮಟ್ಟಕ್ಕೆ ಮರಳಬಹುದು ಎನ್ನುವ ವಿಶ್ವಾಸವನ್ನು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದ್ದಾರೆ. ‘ಕಳೆದ ವಾರಕ್ಕೆ ಹೋಲಿಸಿದರೆ ಟೊಮೆಟೋ ಬೆಲೆ ಕ್ರಮೇಣವಾಗಿ ಕಡಿಮೆ ಆಗುತ್ತಿದೆ. ಏಳರಿಂದ ಹತ್ತು ದಿನದೊಳಗೆ ಬೆಲೆ ಸಹಜ ಮಟ್ಟಕ್ಕೆ ಬರಬಹುದು ಎಂದು ಭಾವಿಸಿದ್ದೇನೆ. ಅಲ್ಲಿಯವರೆಗೆ ಈ ಕಾರ್ಯಕ್ರಮ ಮುಂದುವರಿಯುತ್ತದೆ,’ ಎಂದು ಉದ್ಘಾಟನಾ ಸಮಾರಂಭದಲ್ಲಿ ಜೋಷಿ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ