Chanda Kochhar: ಮಾಜಿ ಐಸಿಐಸಿಐ ಸಿಇಒ ಚಂದಾ ಕೋಚರ್ ಬಂಧನ, ಇದು ಅಧಿಕಾರ ದುರುಪಯೋಗ: ಸಿಬಿಐಗೆ ಹೈಕೋರ್ಟ್ ಛೀಮಾರಿ

Bombay High Court Slams CBI: ಐಸಿಐಸಿಐನ ಮಾಜಿ ಸಿಇಒ ಚಂದಾ ಕೋಚರ್ ಮತ್ತವರ ಪತಿ ದೀಪಕ್ ಕೋಚರ್ ಅವರಿಗೆ ಕಳೆದ ವರ್ಷ ನೀಡಲಾಗಿದ್ದ ಜಾಮೀನು ಕ್ರಮವನ್ನು ಹೈಕೋರ್ಟ್ ಸಮರ್ಥಿಸಿಕೊಂಡಿದೆ. ಕೋಚರ್ ದಂಪತಿಯನ್ನು ಬಂಧಿಸಿರುವ ಸಿಬಿಐನಿಂದ ಅಧಿಕಾರ ದುರುಪಯೋಗ ಆಗಿದೆ ಎಂದು ಬಾಂಬೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಚಂದಾ ಕೋಚರ್ ಸಿಇಒ ಆಗಿದ್ದ ಅವಧಿಯಲ್ಲಿ ಐಸಿಐಸಿಐ ಬ್ಯಾಂಕ್​ನಿಂದ ವಿಡಿಯೋಕಾನ್ ಗ್ರೂಪ್​ಗೆ ಸಾಲ ನೀಡಲಾಗಿತ್ತು. ಇದರಲ್ಲಿ ಅಕ್ರಮ ಆಗಿದೆ ಎಂಬುದು ಆರೋಪ.

Chanda Kochhar: ಮಾಜಿ ಐಸಿಐಸಿಐ ಸಿಇಒ ಚಂದಾ ಕೋಚರ್ ಬಂಧನ, ಇದು ಅಧಿಕಾರ ದುರುಪಯೋಗ: ಸಿಬಿಐಗೆ ಹೈಕೋರ್ಟ್ ಛೀಮಾರಿ
ಚಂದಾ ಕೋಚರ್
Follow us
|

Updated on: Feb 19, 2024 | 3:35 PM

ಮುಂಬೈ, ಫೆಬ್ರುವರಿ 19: ಮಾಜಿ ಐಸಿಐಸಿಐ ಬ್ಯಾಂಕ್​ನ ಮುಖ್ಯಸ್ಥೆ ಚಂದಾ ಕೋಚರ್ ಹಾಗೂ ಅವರ ಪತಿ ದೀಪಕ್ ಕೋಚರ್ (Chanda Kochhar and Deepak Kochhar) ವಿರುದ್ಧದ ಅವ್ಯವಹಾರ ಪ್ರಕರಣವನ್ನು ಸಿಬಿಐ ನಿರ್ವಹಿಸಿದ ರೀತಿಗೆ ಬಾಂಬೆ ಹೈಕೋರ್ಟ್ ಅಸಮಾಧಾನಗೊಂಡಿದೆ. ಈ ಪ್ರಕರಣದಲ್ಲಿ ಚಂದಾ ಮತ್ತು ದೀಪಕ್ ಕೋಚರ್ ಅವರನ್ನು ಬಂಧಿಸಿರುವ ಸಿಬಿಐ ಸರಿಯಾಗಿ ಕಾನೂನು ಪಾಲಿಸದೇ ಅಧಿಕಾರ ದುರುಪಯೋಪಡಿಸಿಕೊಂಡಿದೆ ಎಂದು ಉಚ್ಚ ನ್ಯಾಯಾಲಯದ ವಿಭಾಗೀಯ ಪೀಠ (Bombay high court) 2024ರ ಫೆಬ್ರುವರಿ 6ರಂದು ತನ್ನ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದೆ. ಈ ತೀರ್ಪನ್ನು ಇವತ್ತು ಸೋಮವಾರ (ಫೆ 19) ಬಹಿರಂಗಪಡಿಸಲಾಗಿದೆ.

ಕೋಚರ್ ಅವರನ್ನು ಬಂಧಿಸಲು ಅಗತ್ಯ ಇರುವ ಸಾಕ್ಷ್ಯವನ್ನು ತೋರಿಸಲು ಸಿಬಿಐ ವಿಫಲವಾಗಿದೆ. ಕೋಚರ್ ದಂಪತಿಯ ಬಂಧನ ಅಕ್ರಮ ಎಂದು ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ. 2023ರ ಜನವರಿ 9ರಂದು ಬಾಂಬೆ ಹೈಕೋರ್ಟ್​ನ ಮತ್ತೊಂದು ಪೀಠವು ಕೋಚರ್ ದಂಪತಿಗೆ ಜಾಮೀನು ನೀಡಿತ್ತು. ಕಳೆದ ವಾರದಂದು ನ್ಯಾಯಾಧೀಶರಾದ ಅನುಜಾ ಪ್ರಭುದೇಸಾಯಿ ಮತ್ತು ಎನ್ ಆರ್ ನೋರ್ಗರ್ ಅವರಿರುವ ಹೈಕೋರ್ಟ್ ವಿಭಾಗೀಯ ಪೀಠ ಈ ಜಾಮೀನು ಆದೇಶವನ್ನು ಎತ್ತಿಹಿಡಿದು ಸಮರ್ಥಿಸಿಕೊಂಡಿದೆ. ಜೊತೆಗೆ, ಸಿಬಿಐಗೂ ಛೀಮಾರಿ ಹಾಕಿದೆ.

ಚಂದಾ ಕೋಚರ್ ಮತ್ತು ದೀಪಕ್ ಕೋಚರ್ ಅವರನ್ನು 2022ರ ಡಿಸೆಂಬರ್ 23ರಂದು ಬಂಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಅವರಿಬ್ಬರು ತಮ್ಮ ವಕೀಲರ ಮೂಲಕ ಕೋರ್ಟ್ ಮೊರೆ ಹೋಗಿದ್ದರು.

ಇದನ್ನೂ ಓದಿ: ಸಂದೇಶಖಾಲಿ ಪ್ರಕರಣ: ಅಧಿಕಾರಿಗಳ ವಿರುದ್ಧ ಸಂಸತ್ ಸಮಿತಿ ತನಿಖೆಗೆ ಸುಪ್ರೀಂಕೋರ್ಟ್ ತಡೆ

ಚಂದಾ ಕೋಚರ್ ಬಂಧನ ಯಾಕೆ?

ಚಂದಾ ಕೋಚರ್ 2009ರಿಂದ 2018ರವರೆಗೆ ಐಸಿಐಸಿಐ ಬ್ಯಾಂಕ್​ನ ಸಿಇಒ ಆಗಿದ್ದರು. ಅವರ ಪತಿ ದೀಪಕ್ ಕೋಚರ್ ಹಾಗೂ ಕುಟುಂಬ ಸದಸ್ಯರು ನುಪವರ್ ರಿನಿವಬಲ್ಸ್ ಎಂಬ ಕಂಪನಿ ಹೊಂದಿದ್ದಾರೆ. ಅದರಲ್ಲಿ ವಿಡಿಯೋಕಾನ್ ಛೇರ್ಮನ್ ಹೂಡಿಕೆ ಮಾಡಿದ್ದರು. ಆ ಹೂಡಿಕೆಗೆ ಐಸಿಐಸಿಐ ಬ್ಯಾಂಕ್​ನಿಂದ ಸಾಲ ಒದಗಿಸಲಾಗಿತ್ತು. ಇದು ಹಿತಾಸಕ್ತಿ ಸಂಘರ್ಷವಾಗಿದೆ ಎಂಬ ಆರೋಪ ಕೇಳಿಬಂದಿತ್ತು. 2018ರಲ್ಲಿ ಚಂದಾ ಕೋಚರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು.

2019ರಲ್ಲಿ ಚಂದಾ ಕೋಚರ್ ವಿರುದ್ಧ ಪ್ರಕರಣ ದಾಖಲಾಯಿತು. 2012ರಲ್ಲಿ ವಿಡಿಯೋಕಾನ್ ಗ್ರೂಪ್​ಗೆ ಐಸಿಐಸಿಐನಿಂದ 3,250 ಕೋಟಿ ರೂ ಸಾಲ ನೀಡಲಾಗಿತ್ತು. ಇದು ಮರುಪಾವತಿಯಾಗದೇ ಎನ್​ಪಿಎ ಆಗಿ ಉಳಿದಿದೆ. ಈ ಸಾಲ ನೀಡುವಿಕೆಯ ಹಿಂದೆ ಚಂದಾ ಕೋಚರ್ ಕ್ರಿಮಿನಲ್ ಸಂಚು ಇದೆ ಎಂಬುದು ಸಿಬಿಐ ಆರೋಪ.

ಇದನ್ನೂ ಓದಿ: ಟಾಟಾ ಕಂಪನಿಗಳಿಂದ ಬೆಂಗಳೂರಲ್ಲಿ ಗನ್ ಫ್ಯಾಕ್ಟರಿ, ಎಂಆರ್​ಒ ಘಟಕ; 2,300 ಕೋಟಿ ರೂ ಹೂಡಿಕೆ ಸಾಧ್ಯತೆ

ತಮ್ಮ ಪತಿ ದೀಪಕ್ ಕೋಚರ್ ಮತ್ತು ಕುಟುಂಬ ಸದಸ್ಯರಿಗೆ ನೆರವಾಗುವ ಉದ್ದೇಶದಿಂದ ವಿಡಿಯೋಕಾನ್ ಗ್ರೂಪ್​ಗೆ ಚಂದಾ ಕೋಚರ್ ತಮ್ಮ ಸ್ಥಾನಬಲದಿಂದ ಸಾಲ ಕೊಡಿಸಿದ್ದಾರೆ. ಸಾಲ ಮಂಜೂರು ಮಾಡಿದ ಬೋರ್ಡ್​ಗೆ ಚಂದಾ ಅವರೇ ಮುಖ್ಯಸ್ಥೆಯಾಗಿದ್ದರು ಎಂಬುದು ಸಿಬಿಐನ ವಾದ.

ಆದರೆ, ಈ ಆರೋಪವನ್ನು ಚಂದಾ ಕೋಚರ್ ಅಲ್ಲಗಳೆಯುತ್ತಾ ಬಂದಿದ್ದಾರೆ. ಬ್ಯಾಂಕ್​ನಲ್ಲಿ ಸಾಲ ನೀಡಲು ತೆಗೆದುಕೊಳ್ಳಲಾದ ಯಾವುದೇ ನಿರ್ಣಯವು ಒಬ್ಬರಿಂದ ಆಗಿದ್ದಲ್ಲ. ಅಲ್ಲದೇ ಐಸಿಐಸಿಐ ಬ್ಯಾಂಕ್​ನಲ್ಲಿರುವ ವ್ಯವಸ್ಥೆಯಲ್ಲಿ ಈ ರೀತಿ ಹಿತಾಸಕ್ತಿ ಸಂಘರ್ಷಕ್ಕೆ ಅವಕಾಶ ಇರುವುದಿಲ್ಲ ಎಂದು ಚಂದಾ ಕೋಚರ್ ಹೇಳುತ್ತಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್