AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank working hours: ಕೋವಿಡ್- 19 ಎರಡನೇ ಅಲೆ ಪ್ರಭಾವದಿಂದ ಬ್ಯಾಂಕ್​ಗಳ ಕಾರ್ಯ ನಿರ್ವಹಣೆ ಅವಧಿಯಲ್ಲಿ ಬದಲಾವಣೆ

ಕೋವಿಡ್- 19 ಎರಡನೇ ಅಲೆಯ ಕಾರಣಕ್ಕೆ ಖಾಸಗಿ ಹಾಗೂ ಸರ್ಕಾರಿ ಬ್ಯಾಂಕ್​ಗಳ ಕಾರ್ಯ ನಿರ್ವಹಿಸುವ ಅವಧಿ ಮೊಟಕಾಗಿದೆ. ಅಂದ ಹಾಗೆ ನೀವು ವ್ಯವಹರಿಸುವ ಬ್ಯಾಂಕ್​ನ ಕಾರ್ಯ ನಿರ್ವಹಣೆ ಅವಧಿಯನ್ನು ಚೆಕ್ ಮಾಡಿದ್ರಾ?​

Bank working hours: ಕೋವಿಡ್- 19 ಎರಡನೇ ಅಲೆ ಪ್ರಭಾವದಿಂದ ಬ್ಯಾಂಕ್​ಗಳ ಕಾರ್ಯ ನಿರ್ವಹಣೆ ಅವಧಿಯಲ್ಲಿ ಬದಲಾವಣೆ
ಪ್ರಾತಿನಿಧಿಕ ಚಿತ್ರ
Srinivas Mata
|

Updated on: May 20, 2021 | 4:41 PM

Share

ಭಾರತದಲ್ಲಿ ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಭಾರತೀಯ ಬ್ಯಾಂಕ್ ಒಕ್ಕೂಟವು (IBA) ಬ್ಯಾಂಕ್​ಗಳಿಗೆ ಸಲಹೆ ಮಾಡಿದ್ದು, ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ಮಧ್ಯೆ ಕಾರ್ಯ ನಿರ್ವಹಿಸುವಂತೆ ತಿಳಿಸಿದೆ. ರಾಜ್ಯ ಮಟ್ಟದ ಬ್ಯಾಂಕಿಂಗ್ ಸಮಿತಿ (SLBC) ಕನ್ವೀನರ್​ಗಳಿಗೆ ಈ ಬಗ್ಗೆ ಪತ್ರ ಬರೆಯಲಾಗಿದೆ. ರೂಪಾಂತರಿ ವೈರಸ್ ಮರುಕಳಿಸಿರುವುದರಿಂದ ನಾವು ಸವಾಲಿನ ಸನ್ನಿವೇಶ ಎದುರಿಸುತ್ತಿದ್ದೇವೆ. ಹಲವು ರಾಜ್ಯಗಳಲ್ಲಿ ಪ್ರತಿ ದಿನ ಸೋಂಕಿತ ಪ್ರಕರಣಗಳು ಹೆಚ್ಚುತ್ತಿದ್ದು, ಆರ್ಥಿಕ ಚಟುವಟಿಕೆಗಳಿಗೆ ಗಂಭೀರವಾದ ಆತಂಕ ಎದುರಾಗಿದೆ ಎಂದು ತಿಳಿಸಿದ್ದರು. ಈ ಆದೇಶದ ನಂತರ ಖಾಸಗಿ ಹಾಗೂ ಸರ್ಕಾರಿ ಬ್ಯಾಂಕ್​ಗಳು ಬ್ಯಾಂಕಿಂಗ್ ಕಾರ್ಯ ನಿರ್ವಹಣೆ ಅವಧಿಯನ್ನು ಕಡಿಮೆ ಮಾಡಿದ್ದವು. ಆದರೆ ರಾಜ್ಯ ಮಟ್ಟದ ಕನ್ವೀನರ್​ಗಳಿಗೆ ಒಂದು ಗೊಂದಲ ಇತ್ತು. ಕೋವಿಡ್​-19 ಗಮನದಲ್ಲಿ ಇಟ್ಟುಕೊಂಡು ಈ ನಿಯಮವನ್ನು ತಮ್ಮ ಪ್ರದೇಶದಲ್ಲಿ ಜಾರಿಗೆ ತರಬೇಕಾ ಅಥವಾ ಬೇಡವಾ? ಎಂಬ ಪ್ರಶ್ನೆ ಅದು.

ಆ ಕಾರಣದಿಂದಲೇ ನಿಮಗೆ ಗೊತ್ತಿರಬೇಕಾದ ಸಂಗತಿ ಏನೆಂದರೆ, ಬಹುತೇಕ ಬ್ಯಾಂಕ್​ಗಳು ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ತನಕ ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ಈಗ ನಡೆಯುತ್ತಿರುವ ಅವಧಿಯು ಮೇ 31, 2021ರ ತನಕ ಜಾರಿಯಲ್ಲಿ ಇರುತ್ತದೆ. ಠೇವಣಿ ಸಂಗ್ರಹ, ನಗದು ವಿಥ್​ಡ್ರಾ, ಹಣ ವರ್ಗಾವಣೆ ಮತ್ತು ಸರ್ಕಾರದ ವ್ಯವಹಾರಗಳನ್ನು ಕಡ್ಡಾಯವಾಗಿ ಮಾಡುವಂತೆ ಸೂಚಿಸಲಾಗಿದೆ. ತಮ್ಮ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದಲ್ಲಿ ಪರಿಸ್ಥಿತಿ ಹೇಗಿದೆ ಅಂತ ಆಯಾ ರಾಜ್ಯ ಮಟ್ಟದ ಬ್ಯಾಂಕಿಂಗ್ ಸಮಿತಿ ಪರಿಶೀಲನೆ ಮಾಡುತ್ತದೆ. ಆ ನಂತರ ಹೆಚ್ಚುವರಿ ಸೇವೆ ಏನು ಒದಗಿಸಬಹುದು ಅಂತ ತೀರ್ಮಾನಿಸುತ್ತದೆ ಎಂದು ಐಬಿಎ ಪತ್ರದಲ್ಲೇ ತಿಳಿಸಲಾಗಿತ್ತು.

ಉದ್ಯೋಗಿಗಳನ್ನು ಪಾಳಿಯ ಆಧಾರದಲ್ಲಿ ಕೆಲಸಕ್ಕೆ ಕರೆಯಬಹುದು. ಅಥವಾ ಯಾವ ರೀತಿಯ ಕೆಲಸ, ಹುದ್ದೆ ಮತ್ತು ಆ ಸಂಸ್ಥೆಯ ಗಾತ್ರ ಏನು ಎಂಬ ಆಧಾರದಲ್ಲಿ ಆ ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ಮಾಡುವುದಕ್ಕೆ ಕೂಡ ಅವಕಾಶ ನೀಡಬಹುದು. ಒಟ್ಟಾರೆ ಶೇ 50ರಷ್ಟು ಸಿಬ್ಬಂದಿಯನ್ನು ಮಾತ್ರ ಕಚೇರಿಗೆ ಬರುವಂತೆ ಹೇಳಬುಹುದು ಹಾಗೂ ಅದು ಕೂಡ ಪಾಳಿ ಆಧಾರದಲ್ಲಿ ಎಂದು ಹೇಳಲಾಗಿದೆ. ಇನ್ನು ದೇಶದ ಅತಿ ದೊಡ್ಡ ಬ್ಯಾಂಕ್​ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ತಮ್ಮ ಶಾಖೆಗಳಲ್ಲಿ ಹೊಸ ಸಮಯ ಹಾಗೂ ನಿಯಮವನ್ನು ಪರಿಚಯಿಸಲಾಗಿದೆ. ಫೋನ್ ಬ್ಯಾಂಕಿಂಗ್ ಮತ್ತು ಇಂಟರ್​ನೆಟ್ ಬ್ಯಾಂಕಿಂಗ್ ಅನ್ನು ಪ್ರೋತ್ಸಾಹಿಸಲಾಗುತ್ತಿದೆ.

ಹಣ ವರ್ಗಾವಣೆ, ಡೆಪಾಸಿಟ್ ಮಾಡುವುದಕ್ಕೆ, ನಿರ್ವಹಣೆಗೆ, ಬಿಲ್ ಪಾವತಿಗೆ, ಎಟಿಎಂ ಕಾರ್ಡ್ ಅಪ್ಲೈ ಮಾಡುವಂತಿದ್ದರೆ, ಚೆಕ್ ಬುಕ್​ಗಳಿಗೆ, ಯುಪಿಐ ಎನೇಬಲ್ ಅಥವಾ ಡಿಸೇಬಲ್ ಮಾಡಲು ಹಾಗೂ ಬ್ಯಾಂಕ್ ಸ್ಟೇಟ್​ಮೆಂಟ್​ಗಳನ್ನು ಡೌನ್​ಲೋಡ್ ಮಾಡುವುದಕ್ಕೆ ಇಂಟರ್​ನೆಟ್ ಬ್ಯಾಂಕಿಂಗ್ ಬಳಸುವಂತೆ ಸೂಚಿಸಲಾಗಿದೆ. ಖಾಸಗಿ ಬ್ಯಾಂಕ್​ಗಳಿಂದ ಕೂಡ ಬ್ಯಾಂಕ್​ ವ್ಯವಹಾರದ ಅವಧಿಯನ್ನು ಬದಲಿಸಲಾಗಿದೆ.

ಇದನ್ನೂ ಓದಿ: SBI KYC: ಆನ್​ಲೈನ್​ನಲ್ಲಿ ಎಸ್​ಬಿಐ ಕೆವೈಸಿ ಅಪ್​ಡೇಟ್​ ಮಾಡಲು ಆಗದಿದ್ದಲ್ಲಿ ದೂರು ಸಲ್ಲಿಸುವುದು ಹೇಗೆ?

(Due to corona virus second wave changes in banking working hours. Time has been reduced. Here is the details)

Follow Us
Srinivas Mata
Srinivas Mata
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ