AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank working hours: ಕೋವಿಡ್- 19 ಎರಡನೇ ಅಲೆ ಪ್ರಭಾವದಿಂದ ಬ್ಯಾಂಕ್​ಗಳ ಕಾರ್ಯ ನಿರ್ವಹಣೆ ಅವಧಿಯಲ್ಲಿ ಬದಲಾವಣೆ

ಕೋವಿಡ್- 19 ಎರಡನೇ ಅಲೆಯ ಕಾರಣಕ್ಕೆ ಖಾಸಗಿ ಹಾಗೂ ಸರ್ಕಾರಿ ಬ್ಯಾಂಕ್​ಗಳ ಕಾರ್ಯ ನಿರ್ವಹಿಸುವ ಅವಧಿ ಮೊಟಕಾಗಿದೆ. ಅಂದ ಹಾಗೆ ನೀವು ವ್ಯವಹರಿಸುವ ಬ್ಯಾಂಕ್​ನ ಕಾರ್ಯ ನಿರ್ವಹಣೆ ಅವಧಿಯನ್ನು ಚೆಕ್ ಮಾಡಿದ್ರಾ?​

Bank working hours: ಕೋವಿಡ್- 19 ಎರಡನೇ ಅಲೆ ಪ್ರಭಾವದಿಂದ ಬ್ಯಾಂಕ್​ಗಳ ಕಾರ್ಯ ನಿರ್ವಹಣೆ ಅವಧಿಯಲ್ಲಿ ಬದಲಾವಣೆ
ಪ್ರಾತಿನಿಧಿಕ ಚಿತ್ರ
Srinivas Mata
|

Updated on: May 20, 2021 | 4:41 PM

Share

ಭಾರತದಲ್ಲಿ ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಭಾರತೀಯ ಬ್ಯಾಂಕ್ ಒಕ್ಕೂಟವು (IBA) ಬ್ಯಾಂಕ್​ಗಳಿಗೆ ಸಲಹೆ ಮಾಡಿದ್ದು, ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ಮಧ್ಯೆ ಕಾರ್ಯ ನಿರ್ವಹಿಸುವಂತೆ ತಿಳಿಸಿದೆ. ರಾಜ್ಯ ಮಟ್ಟದ ಬ್ಯಾಂಕಿಂಗ್ ಸಮಿತಿ (SLBC) ಕನ್ವೀನರ್​ಗಳಿಗೆ ಈ ಬಗ್ಗೆ ಪತ್ರ ಬರೆಯಲಾಗಿದೆ. ರೂಪಾಂತರಿ ವೈರಸ್ ಮರುಕಳಿಸಿರುವುದರಿಂದ ನಾವು ಸವಾಲಿನ ಸನ್ನಿವೇಶ ಎದುರಿಸುತ್ತಿದ್ದೇವೆ. ಹಲವು ರಾಜ್ಯಗಳಲ್ಲಿ ಪ್ರತಿ ದಿನ ಸೋಂಕಿತ ಪ್ರಕರಣಗಳು ಹೆಚ್ಚುತ್ತಿದ್ದು, ಆರ್ಥಿಕ ಚಟುವಟಿಕೆಗಳಿಗೆ ಗಂಭೀರವಾದ ಆತಂಕ ಎದುರಾಗಿದೆ ಎಂದು ತಿಳಿಸಿದ್ದರು. ಈ ಆದೇಶದ ನಂತರ ಖಾಸಗಿ ಹಾಗೂ ಸರ್ಕಾರಿ ಬ್ಯಾಂಕ್​ಗಳು ಬ್ಯಾಂಕಿಂಗ್ ಕಾರ್ಯ ನಿರ್ವಹಣೆ ಅವಧಿಯನ್ನು ಕಡಿಮೆ ಮಾಡಿದ್ದವು. ಆದರೆ ರಾಜ್ಯ ಮಟ್ಟದ ಕನ್ವೀನರ್​ಗಳಿಗೆ ಒಂದು ಗೊಂದಲ ಇತ್ತು. ಕೋವಿಡ್​-19 ಗಮನದಲ್ಲಿ ಇಟ್ಟುಕೊಂಡು ಈ ನಿಯಮವನ್ನು ತಮ್ಮ ಪ್ರದೇಶದಲ್ಲಿ ಜಾರಿಗೆ ತರಬೇಕಾ ಅಥವಾ ಬೇಡವಾ? ಎಂಬ ಪ್ರಶ್ನೆ ಅದು.

ಆ ಕಾರಣದಿಂದಲೇ ನಿಮಗೆ ಗೊತ್ತಿರಬೇಕಾದ ಸಂಗತಿ ಏನೆಂದರೆ, ಬಹುತೇಕ ಬ್ಯಾಂಕ್​ಗಳು ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ತನಕ ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ಈಗ ನಡೆಯುತ್ತಿರುವ ಅವಧಿಯು ಮೇ 31, 2021ರ ತನಕ ಜಾರಿಯಲ್ಲಿ ಇರುತ್ತದೆ. ಠೇವಣಿ ಸಂಗ್ರಹ, ನಗದು ವಿಥ್​ಡ್ರಾ, ಹಣ ವರ್ಗಾವಣೆ ಮತ್ತು ಸರ್ಕಾರದ ವ್ಯವಹಾರಗಳನ್ನು ಕಡ್ಡಾಯವಾಗಿ ಮಾಡುವಂತೆ ಸೂಚಿಸಲಾಗಿದೆ. ತಮ್ಮ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದಲ್ಲಿ ಪರಿಸ್ಥಿತಿ ಹೇಗಿದೆ ಅಂತ ಆಯಾ ರಾಜ್ಯ ಮಟ್ಟದ ಬ್ಯಾಂಕಿಂಗ್ ಸಮಿತಿ ಪರಿಶೀಲನೆ ಮಾಡುತ್ತದೆ. ಆ ನಂತರ ಹೆಚ್ಚುವರಿ ಸೇವೆ ಏನು ಒದಗಿಸಬಹುದು ಅಂತ ತೀರ್ಮಾನಿಸುತ್ತದೆ ಎಂದು ಐಬಿಎ ಪತ್ರದಲ್ಲೇ ತಿಳಿಸಲಾಗಿತ್ತು.

ಉದ್ಯೋಗಿಗಳನ್ನು ಪಾಳಿಯ ಆಧಾರದಲ್ಲಿ ಕೆಲಸಕ್ಕೆ ಕರೆಯಬಹುದು. ಅಥವಾ ಯಾವ ರೀತಿಯ ಕೆಲಸ, ಹುದ್ದೆ ಮತ್ತು ಆ ಸಂಸ್ಥೆಯ ಗಾತ್ರ ಏನು ಎಂಬ ಆಧಾರದಲ್ಲಿ ಆ ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ಮಾಡುವುದಕ್ಕೆ ಕೂಡ ಅವಕಾಶ ನೀಡಬಹುದು. ಒಟ್ಟಾರೆ ಶೇ 50ರಷ್ಟು ಸಿಬ್ಬಂದಿಯನ್ನು ಮಾತ್ರ ಕಚೇರಿಗೆ ಬರುವಂತೆ ಹೇಳಬುಹುದು ಹಾಗೂ ಅದು ಕೂಡ ಪಾಳಿ ಆಧಾರದಲ್ಲಿ ಎಂದು ಹೇಳಲಾಗಿದೆ. ಇನ್ನು ದೇಶದ ಅತಿ ದೊಡ್ಡ ಬ್ಯಾಂಕ್​ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ತಮ್ಮ ಶಾಖೆಗಳಲ್ಲಿ ಹೊಸ ಸಮಯ ಹಾಗೂ ನಿಯಮವನ್ನು ಪರಿಚಯಿಸಲಾಗಿದೆ. ಫೋನ್ ಬ್ಯಾಂಕಿಂಗ್ ಮತ್ತು ಇಂಟರ್​ನೆಟ್ ಬ್ಯಾಂಕಿಂಗ್ ಅನ್ನು ಪ್ರೋತ್ಸಾಹಿಸಲಾಗುತ್ತಿದೆ.

ಹಣ ವರ್ಗಾವಣೆ, ಡೆಪಾಸಿಟ್ ಮಾಡುವುದಕ್ಕೆ, ನಿರ್ವಹಣೆಗೆ, ಬಿಲ್ ಪಾವತಿಗೆ, ಎಟಿಎಂ ಕಾರ್ಡ್ ಅಪ್ಲೈ ಮಾಡುವಂತಿದ್ದರೆ, ಚೆಕ್ ಬುಕ್​ಗಳಿಗೆ, ಯುಪಿಐ ಎನೇಬಲ್ ಅಥವಾ ಡಿಸೇಬಲ್ ಮಾಡಲು ಹಾಗೂ ಬ್ಯಾಂಕ್ ಸ್ಟೇಟ್​ಮೆಂಟ್​ಗಳನ್ನು ಡೌನ್​ಲೋಡ್ ಮಾಡುವುದಕ್ಕೆ ಇಂಟರ್​ನೆಟ್ ಬ್ಯಾಂಕಿಂಗ್ ಬಳಸುವಂತೆ ಸೂಚಿಸಲಾಗಿದೆ. ಖಾಸಗಿ ಬ್ಯಾಂಕ್​ಗಳಿಂದ ಕೂಡ ಬ್ಯಾಂಕ್​ ವ್ಯವಹಾರದ ಅವಧಿಯನ್ನು ಬದಲಿಸಲಾಗಿದೆ.

ಇದನ್ನೂ ಓದಿ: SBI KYC: ಆನ್​ಲೈನ್​ನಲ್ಲಿ ಎಸ್​ಬಿಐ ಕೆವೈಸಿ ಅಪ್​ಡೇಟ್​ ಮಾಡಲು ಆಗದಿದ್ದಲ್ಲಿ ದೂರು ಸಲ್ಲಿಸುವುದು ಹೇಗೆ?

(Due to corona virus second wave changes in banking working hours. Time has been reduced. Here is the details)

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ